ಬ್ರೇಕಿಂಗ್ ನ್ಯೂಸ್
01-06-23 09:39 pm HK News Desk ಕ್ರೈಂ
ದಾವಣಗೆರೆ, ಜೂನ್ 1: ದಾವಣಗೆರೆಯಲ್ಲಿ ಪಾಪಿ ತಂದೆಯೊಬ್ಬ ತನ್ನ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆಗೈದ ಅಮಾನವೀಯ ಘಟನೆ ನಡೆದಿದೆ.
ಮೃತ ಮಕ್ಕಳು ನಾಲ್ಕು ವರ್ಷದ ಅದ್ವೈತ್ ಮತ್ತು ಅನ್ವೀತ್ ಎಂದು ತಿಳಿದುಬಂದಿದೆ. ಇನ್ನು ತನ್ನ ಮಕ್ಕಳನ್ನು ತಂದೆ 35 ವರ್ಷದ ಅಮರ ಕಿತ್ತೂರು ಹತ್ಯೆ ಮಾಡಿದ್ದಾನೆ. ಅಮರ ಕಿತ್ತೂರು ಮೂಲತಃ ಗೋಕಾಕ ನಿವಾಸಿಯಾಗಿದ್ದು ದಾವಣಗೆರೆ ನಗರದ ಆಂಜನೇಯ ಮಿಲ್ ಬಡಾವಣೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದನು.
ಅಮರ ಹರಿಹರದ ಕಾರ್ಗಿಲ್ ಪ್ಯಾಕ್ಟರಿಯಲ್ಲಿ ಕೆಮಿಕಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಪತ್ನಿ ಜಯ ಲಕ್ಷ್ಮಿ ಕೆಲ ತಿಂಗಳ ಹಿಂದೆ ಜಗಳ ಮಾಡಿಕೊಂಡು ತವರು ಮನೆಗೆ ಹೋಗಿದ್ದಳು. ಈ ವೇಳೆ ಮಕ್ಕಳನ್ನ ಕೊಲ್ಲುವುದಾಗಿ ಪತ್ನಿಗೆ ಹೇಳಿ ಬೆದರಿಸಿದ್ದ. ಆದರೆ ಪತ್ನಿ ಮಾತ್ರ ಮರಳಿ ಬಂದಿರಲಿಲ್ಲ. ಮಕ್ಕಳು ಹೆಚ್ಚು ಹಠ ಮಾಡುತ್ತವೆ ಎಂದು ಮಕ್ಕಳನ್ನು ತನ್ನ ಕಾರಿನಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಚಳಗೆರೆ ಟೋಲ್ ಗೇಟ್ ಗೆ ಕಾರಿನಲ್ಲಿ ಕರೆದುಕೊಂಡು ಹೋಗಿ ಅಲ್ಲಿ ಇಬ್ಬರ ಬಾಯಿಗೂ ಟೇಪ್ ಅಂಟಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಆರೋಪಿಯು ಗುರುವಾರ ಬೆಳಗ್ಗೆ ತನ್ನ ಮೊಬೈಲ್ ಆನ್ ಮಾಡಿದಾಗ ಪತ್ನಿ ಕರೆ ಮಾಡಿದ್ದಾರೆ. ಆಗ ವಿಷಯ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ಪೊಲೀಸರು ಆತನ ಪತ್ತೆಗೆ ಕಾರ್ಯಾಚರಣೆ ಆರಂಭಿಸಿ ಸಂಪರ್ಕಿಸಿದ ನಂತರ ಆತನು ಮಕ್ಕಳ ಮೃತ ದೇಹಗಳೊಂದಿಗೆ ದಾವಣಗೆರೆಗೆ ಬಂದಿದ್ದಾನೆ. ವಿಷಯ ತಿಳಿದು ಅಮರ್ ಮೊಬೈಲ್ ಲೊಕೇಶನ್ ಆದಾರದ ಮೇಲೆ ಪತ್ತೆ ಮಾಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An inhumane incident took place in Davangere where a sinful father suffocated his twin children. The deceased children have been identified as four-year-old Advait and Anveet. The father, 35-year-old Amara Kittur, killed his children. Amara Kittur was originally a resident of Gokaka and lived with her family in Anjaneya Mill Barangay of Davangere city.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm