ತರೀಕೆರೆ ಕಾಂಗ್ರೆಸ್ ಶಾಸಕರ ಅಭಿನಂದನ ಕಾರ್ಯಕ್ರಮದಲ್ಲಿ ಗಲಾಟೆ ; ಯುವಕನಿಗೆ ಚಾಕು ಇರಿದು ಕೊಲೆ 

04-06-23 12:47 pm       HK News Desk   ಕ್ರೈಂ

ತರೀಕೆರೆಯ ನೂತನ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಎರಡು ತಂಡಗಳ ನಡುವೆ ಜಗಳ ನಡೆದು ವ್ಯಕ್ತಿಯೊಬ್ಬನನ್ನು ಇರಿದು ಕೊಲೆ ಮಾಡಲಾಗಿದೆ. 

ಚಿಕ್ಕಮಗಳೂರು, ಜೂನ್ 4:  ತರೀಕೆರೆಯ ನೂತನ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಎರಡು ತಂಡಗಳ ನಡುವೆ ಜಗಳ ನಡೆದು ವ್ಯಕ್ತಿಯೊಬ್ಬನನ್ನು ಇರಿದು ಕೊಲೆ ಮಾಡಲಾಗಿದೆ. 

ತರೀಕೆರೆ ಪಟ್ಟಣದಲ್ಲಿ ಘಟನೆ ನಡೆದಿದ್ದು ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ಗಲಾಟೆ ನಡೆದು ಚಾಕು ಇರಿತ ಮಾಡಲಾಗಿದೆ. ಚಾಕು ಇರಿತದಿಂದ ವರುಣ್ (28) ಎಂಬ ಯುವಕ ಸಾವು ಕಂಡಿದ್ದಾನೆ. ಮಂಜು ಹಾಗೂ ಸಂಜು ಎಂಬುವರು ಗಾಯಗೊಂಡಿದ್ದಾರೆ. ಶಾಸಕ ಶ್ರೀನಿವಾಸ್ ಅಭಿಮಾನಿಗಳು ಅಭಿನಂದನಾ ಸಮಾರಂಭ ಏರ್ಪಡಿಸಿದ್ದು ಕಾರ್ಯಕ್ರಮದ ಬಳಿಕ ಆರ್ಕೆಸ್ಟ್ರಾ ನಡೆಸಲಾಗಿತ್ತು.

ಆರ್ಕೆಸ್ಟ್ರಾದ ಹಾಡಿನ ವಿಚಾರದಲ್ಲಿ ಕಬಾಬ್ ಮೂರ್ತಿ ಹಾಗೂ ವರುಣ್ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಬಳಿಕ ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ವರುಣ್ ಮೇಲೆ ಕಬಾಬ್ ಮೂರ್ತಿ ಡ್ರ್ಯಾಗರ್ ಹಾಕಿದ್ದಾನೆ. ಅಡ್ಡ ಬಂದ ಮಂಜು ಹಾಗೂ ಸಂಜು ಕೈ, ಕಾಲಿಗೆ ಇರಿತದ ಗಾಯ ಆಗಿದೆ. ವರುಣ್ ಗೆ ಹೊಟ್ಟೆ ಹಾಗೂ ಪಕ್ಕೆಲುಬಿಗೆ ಇರಿತ ಆಗಿದ್ದು ತೀವ್ರ ಗಾಯಗೊಂಡಿದ್ದ. ‌ಕೂಡಲೇ ಆತನನ್ನು ಶಿವಮೊಗ್ಗ ಆಸ್ಪತ್ರೆಗೆ ಕೊಂಡೊಯ್ದಿದ್ದು ಅಷ್ಟರಲ್ಲಿ ವರುಣ್ ಸಾವು ಕಂಡಿದ್ದಾನೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಎಸ್ಪಿ ಉಮಾ ಪ್ರಶಾಂತ್ ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ‌

A programme to felicitate newly elected MLA G. H. Srinivas ended with a murder in Tarikere of Chikkamagaluru late on June 3. Following a heated argument over playing a song on the sound system, a 28-year-old was stabbed to death. The deceased has been identified as Pakali Varun, a resident of Tarikere. Even as the programme was about to end, the party workers had an argument over playing a song for a group dance. He was rushed to Mc Gann Hospital where he succumbed to injuries.