ಬ್ರೇಕಿಂಗ್ ನ್ಯೂಸ್
04-06-23 02:14 pm Mangalore Correspondent ಕ್ರೈಂ
ಮಂಗಳೂರು, ಜೂನ್ 4: ಪಂಚಾಯತ್ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ನೂರ್ ಬಾಗ್ ಎಂಬಲ್ಲಿ ನಡೆದಿದೆ.
ಪಡುಪೆರಾರ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಮೇಲೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ.
ರಾಜೇಶ್ ಸಾಲ್ಯಾನ್, ಕಾಂಟ್ರಾಕ್ಟರ್ ರಾಘವೇಂದ್ರ ಆಚಾರಿ ಎಂಬವರು ಹಲ್ಲೆ ನಡೆಸಿದ್ದು, ಬಳಿಕ ಕೊಲೆ ಬೆದರಿಕೆ ಹಾಕಿರುವುದಾಗಿ ಸಂತ್ರಸ್ತರು ಆರೋಪ ಮಾಡಿದ್ದಾರೆ.

ಪಡುಪೆರಾರ ಗ್ರಾಮ ಪಂಚಾಯತ್ ನ ಕೊರಕಂಬ್ಳ ವಾರ್ಡ್ ನಲ್ಲಿ ಪರವಾನಿಗೆ ಇಲ್ಲದೆ ಮನೆ ನಿರ್ಮಿಸಿರುವ ಕುರಿತು ಇಂದು ಗ್ರಾಮ ಪಂಚಾಯತ್ ನಲ್ಲಿ ನಡೆದ ಸಭೆ ಬಳಿಕ ಪಿಡಿಒ ಪ್ರಮೋದ್ ಅವರೊಂದಿಗೆ ಗ್ರಾಮ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರವಾನಿಗೆ ಪಡೆದುಕೊಳ್ಳುವಂತೆ ಮನೆಯವರಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ.
ಈ ವೇಳೆ ಏಕಾಏಕಿ ದಾಳಿ ಮಾಡಿದ ಮನೆಯ ಗುತ್ತಿಗೆ ವಹಿಸಿರುವ ರಾಘವೇಂದ್ರ ಆಚಾರ್ ಮತ್ತು ಬಿಜೆಪಿ ಕಾರ್ಯಕರ್ತನೆನ್ನಲಾದ ರಾಜೇಶ್ ಸಾಲಿಯಾನ್ ಕಬ್ಬಿಣದ ರಾಡಿನಿಂದ ನೂರ್ ಅಹ್ಮದ್ ಅವರಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆಯಿಂದ ನೂರು ಅಹ್ಮದ್ ತಲೆಗೆ ಗಂಭೀರ ಗಾಯವಾಗಿದ್ದು, ಕೈ, ಕಾಲು ಮತ್ತು ಕಣ್ಣಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ನೂರ್ ಅಹ್ಮದ್, ಕಾಂಟ್ರಾಕ್ಟರ್ ರಾಘವೇಂದ್ರ ಆಚಾರ್ಯ ಮತ್ತು ರಾಜೇಶ್ ಸಾಲ್ಯಾನ್ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Mangalore Paduperar village Panchayath member assulted with iron rod for questioning construction of house without license. Noor Ahmed is the Panchyath memeber who has been beaten up brutally. A case has been registered at the Bajpe police station.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm