ಬ್ರೇಕಿಂಗ್ ನ್ಯೂಸ್
06-06-23 10:43 am Mangalore Correspondent ಕ್ರೈಂ
ಉಳ್ಳಾಲ, ಜೂ.6: ಕುತ್ತಾರು ಬಳಿಯ ಭಂಡಾರ ಬೈಲು ಎಂಬಲ್ಲಿ ಟಾಟಾ ಏಸ್ ವಾಹನದಲ್ಲಿ ಜಾನುವಾರುಗಳನ್ನ ಉಸಿರುಗಟ್ಟಿಸಿ ಅಮಾನವೀಯವಾಗಿ ವಧಾಗೃಹಕ್ಕೆ ಸಾಗಿಸುತ್ತಿದ್ದ ವೇಳೆ ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನ ರಕ್ಷಿಸಿದ್ದು ಈ ವೇಳೆ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಉಳ್ಳಾಲದ ಆಝಾದ್ ನಗರ ನಿವಾಸಿ ಅಹಮ್ಮದ್ ಇರ್ಷಾದ್, ಅಳೇಕಳ ನಿವಾಸಿ ಜಾಫರ್ ಸಾಧಿಕ್, ಬಸ್ತಿಪಡ್ಪು ನಿವಾಸಿ ಫಾಯಝ್, ಮಂಜೇಶ್ವರ ಬಂಗ್ರ ನಿವಾಸಿ ಖಾಲಿದ್ ಬಿ.ಎಮ್ ಬಂಧಿತ ಆರೋಪಿಗಳು.


ಆರೋಪಿಗಳು ಆದಿತ್ಯವಾರ ಅಂಬ್ಲಮೊಗರು ಎಂಬಲ್ಲಿನ ವೃದ್ಧೆಯೊಬ್ಬರಿಂದ 5 ಜಾನುವಾರುಗಳನ್ನ ಖರೀದಿಸಿ ಕೇರಳ ನೋಂದಣಿಯ ಟಾಟಾ ಏಸ್ ವಾಹನದಲ್ಲಿ ಅಮಾನವೀಯವಾಗಿ ತುಂಬಿಸಿ ಭಂಡಾರ ಬೈಲು ಮಾರ್ಗವಾಗಿ ಉಳ್ಳಾಲ ಅಲೇಕಳದ ವಧಾಗೃಹಕ್ಕೆ ಸಾಗಿಸುತ್ತಿದ್ದ ವೇಳೆ ಕಡಿದಾದ ರಸ್ತೆ ಏರನ್ನ ಏರಲಾಗದೆ ವಾಹನ ನಿಂತಿತ್ತು. ಈ ವೇಳೆ ಸ್ಥಳದಲ್ಲಿದ್ದ ಬಜರಂಗದಳದ ಹುಡುಗರು ವಾಹನವನ್ನ ತಳ್ಳಲು ಮುಂದಾದಾಗ ಗೋವುಗಳನ್ನ ಅಮಾನವೀಯವಾಗಿ ತುಂಬಿಸಿದ್ದು ಬೆಳಕಿಗೆ ಬಂದು ಚಾಲಕನಲ್ಲಿ ವಿಚಾರಿಸಿದಾಗ ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದರು. ಎಸ್ಕಾರ್ಟ್ ನೀಡುತ್ತಿದ್ದ ಇಬ್ಬರು ಆರೋಪಿಗಳು ಬೈಕನ್ನ ಬಿಟ್ಟು ಓಡಿ ಹೋಗಿದ್ದರು.


ಈ ವೇಳೆ, ವಾಹನದಲ್ಲಿದ್ದ ಒಂದು ಹಸು ಹೊರಗೆ ಓಡಿ ತಪ್ಪಿಸಿತ್ತು. ಬಾಕಿ ಉಳಿದಿದ್ದ ಒಂದು ಹಸು, ಎರಡು ಹೋರಿ, ಮತ್ತೊಂದು ಕರುವನ್ನ ರಕ್ಷಿಸಿದ ಬಜರಂಗದಳದ ಕಾರ್ಯಕರ್ತರು ಉಳ್ಳಾಲ ಪೊಲೀಸ್ ಠಾಣೆಗೆ ಒಪ್ಪಿಸಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆರೋಪಿಗಳ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆ, ಪ್ರಾಣಿ ಹಿಂಸೆ ಕಾಯ್ದೆ, ಐಪಿಸಿ 379 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Illegal cow transport at Kuthar, four arrested by Ullal Police in Mangalore. The arrested were caught by the bajarang dal members when the van was stuck finding difficult to climb up the road.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm