ಬ್ರೇಕಿಂಗ್ ನ್ಯೂಸ್
06-06-23 10:43 am Mangalore Correspondent ಕ್ರೈಂ
ಉಳ್ಳಾಲ, ಜೂ.6: ಕುತ್ತಾರು ಬಳಿಯ ಭಂಡಾರ ಬೈಲು ಎಂಬಲ್ಲಿ ಟಾಟಾ ಏಸ್ ವಾಹನದಲ್ಲಿ ಜಾನುವಾರುಗಳನ್ನ ಉಸಿರುಗಟ್ಟಿಸಿ ಅಮಾನವೀಯವಾಗಿ ವಧಾಗೃಹಕ್ಕೆ ಸಾಗಿಸುತ್ತಿದ್ದ ವೇಳೆ ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನ ರಕ್ಷಿಸಿದ್ದು ಈ ವೇಳೆ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಉಳ್ಳಾಲದ ಆಝಾದ್ ನಗರ ನಿವಾಸಿ ಅಹಮ್ಮದ್ ಇರ್ಷಾದ್, ಅಳೇಕಳ ನಿವಾಸಿ ಜಾಫರ್ ಸಾಧಿಕ್, ಬಸ್ತಿಪಡ್ಪು ನಿವಾಸಿ ಫಾಯಝ್, ಮಂಜೇಶ್ವರ ಬಂಗ್ರ ನಿವಾಸಿ ಖಾಲಿದ್ ಬಿ.ಎಮ್ ಬಂಧಿತ ಆರೋಪಿಗಳು.


ಆರೋಪಿಗಳು ಆದಿತ್ಯವಾರ ಅಂಬ್ಲಮೊಗರು ಎಂಬಲ್ಲಿನ ವೃದ್ಧೆಯೊಬ್ಬರಿಂದ 5 ಜಾನುವಾರುಗಳನ್ನ ಖರೀದಿಸಿ ಕೇರಳ ನೋಂದಣಿಯ ಟಾಟಾ ಏಸ್ ವಾಹನದಲ್ಲಿ ಅಮಾನವೀಯವಾಗಿ ತುಂಬಿಸಿ ಭಂಡಾರ ಬೈಲು ಮಾರ್ಗವಾಗಿ ಉಳ್ಳಾಲ ಅಲೇಕಳದ ವಧಾಗೃಹಕ್ಕೆ ಸಾಗಿಸುತ್ತಿದ್ದ ವೇಳೆ ಕಡಿದಾದ ರಸ್ತೆ ಏರನ್ನ ಏರಲಾಗದೆ ವಾಹನ ನಿಂತಿತ್ತು. ಈ ವೇಳೆ ಸ್ಥಳದಲ್ಲಿದ್ದ ಬಜರಂಗದಳದ ಹುಡುಗರು ವಾಹನವನ್ನ ತಳ್ಳಲು ಮುಂದಾದಾಗ ಗೋವುಗಳನ್ನ ಅಮಾನವೀಯವಾಗಿ ತುಂಬಿಸಿದ್ದು ಬೆಳಕಿಗೆ ಬಂದು ಚಾಲಕನಲ್ಲಿ ವಿಚಾರಿಸಿದಾಗ ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದರು. ಎಸ್ಕಾರ್ಟ್ ನೀಡುತ್ತಿದ್ದ ಇಬ್ಬರು ಆರೋಪಿಗಳು ಬೈಕನ್ನ ಬಿಟ್ಟು ಓಡಿ ಹೋಗಿದ್ದರು.


ಈ ವೇಳೆ, ವಾಹನದಲ್ಲಿದ್ದ ಒಂದು ಹಸು ಹೊರಗೆ ಓಡಿ ತಪ್ಪಿಸಿತ್ತು. ಬಾಕಿ ಉಳಿದಿದ್ದ ಒಂದು ಹಸು, ಎರಡು ಹೋರಿ, ಮತ್ತೊಂದು ಕರುವನ್ನ ರಕ್ಷಿಸಿದ ಬಜರಂಗದಳದ ಕಾರ್ಯಕರ್ತರು ಉಳ್ಳಾಲ ಪೊಲೀಸ್ ಠಾಣೆಗೆ ಒಪ್ಪಿಸಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆರೋಪಿಗಳ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆ, ಪ್ರಾಣಿ ಹಿಂಸೆ ಕಾಯ್ದೆ, ಐಪಿಸಿ 379 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Illegal cow transport at Kuthar, four arrested by Ullal Police in Mangalore. The arrested were caught by the bajarang dal members when the van was stuck finding difficult to climb up the road.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm