ಬ್ರೇಕಿಂಗ್ ನ್ಯೂಸ್
06-06-23 10:43 am Mangalore Correspondent ಕ್ರೈಂ
ಉಳ್ಳಾಲ, ಜೂ.6: ಕುತ್ತಾರು ಬಳಿಯ ಭಂಡಾರ ಬೈಲು ಎಂಬಲ್ಲಿ ಟಾಟಾ ಏಸ್ ವಾಹನದಲ್ಲಿ ಜಾನುವಾರುಗಳನ್ನ ಉಸಿರುಗಟ್ಟಿಸಿ ಅಮಾನವೀಯವಾಗಿ ವಧಾಗೃಹಕ್ಕೆ ಸಾಗಿಸುತ್ತಿದ್ದ ವೇಳೆ ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನ ರಕ್ಷಿಸಿದ್ದು ಈ ವೇಳೆ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಉಳ್ಳಾಲದ ಆಝಾದ್ ನಗರ ನಿವಾಸಿ ಅಹಮ್ಮದ್ ಇರ್ಷಾದ್, ಅಳೇಕಳ ನಿವಾಸಿ ಜಾಫರ್ ಸಾಧಿಕ್, ಬಸ್ತಿಪಡ್ಪು ನಿವಾಸಿ ಫಾಯಝ್, ಮಂಜೇಶ್ವರ ಬಂಗ್ರ ನಿವಾಸಿ ಖಾಲಿದ್ ಬಿ.ಎಮ್ ಬಂಧಿತ ಆರೋಪಿಗಳು.
ಆರೋಪಿಗಳು ಆದಿತ್ಯವಾರ ಅಂಬ್ಲಮೊಗರು ಎಂಬಲ್ಲಿನ ವೃದ್ಧೆಯೊಬ್ಬರಿಂದ 5 ಜಾನುವಾರುಗಳನ್ನ ಖರೀದಿಸಿ ಕೇರಳ ನೋಂದಣಿಯ ಟಾಟಾ ಏಸ್ ವಾಹನದಲ್ಲಿ ಅಮಾನವೀಯವಾಗಿ ತುಂಬಿಸಿ ಭಂಡಾರ ಬೈಲು ಮಾರ್ಗವಾಗಿ ಉಳ್ಳಾಲ ಅಲೇಕಳದ ವಧಾಗೃಹಕ್ಕೆ ಸಾಗಿಸುತ್ತಿದ್ದ ವೇಳೆ ಕಡಿದಾದ ರಸ್ತೆ ಏರನ್ನ ಏರಲಾಗದೆ ವಾಹನ ನಿಂತಿತ್ತು. ಈ ವೇಳೆ ಸ್ಥಳದಲ್ಲಿದ್ದ ಬಜರಂಗದಳದ ಹುಡುಗರು ವಾಹನವನ್ನ ತಳ್ಳಲು ಮುಂದಾದಾಗ ಗೋವುಗಳನ್ನ ಅಮಾನವೀಯವಾಗಿ ತುಂಬಿಸಿದ್ದು ಬೆಳಕಿಗೆ ಬಂದು ಚಾಲಕನಲ್ಲಿ ವಿಚಾರಿಸಿದಾಗ ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದರು. ಎಸ್ಕಾರ್ಟ್ ನೀಡುತ್ತಿದ್ದ ಇಬ್ಬರು ಆರೋಪಿಗಳು ಬೈಕನ್ನ ಬಿಟ್ಟು ಓಡಿ ಹೋಗಿದ್ದರು.
ಈ ವೇಳೆ, ವಾಹನದಲ್ಲಿದ್ದ ಒಂದು ಹಸು ಹೊರಗೆ ಓಡಿ ತಪ್ಪಿಸಿತ್ತು. ಬಾಕಿ ಉಳಿದಿದ್ದ ಒಂದು ಹಸು, ಎರಡು ಹೋರಿ, ಮತ್ತೊಂದು ಕರುವನ್ನ ರಕ್ಷಿಸಿದ ಬಜರಂಗದಳದ ಕಾರ್ಯಕರ್ತರು ಉಳ್ಳಾಲ ಪೊಲೀಸ್ ಠಾಣೆಗೆ ಒಪ್ಪಿಸಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆರೋಪಿಗಳ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆ, ಪ್ರಾಣಿ ಹಿಂಸೆ ಕಾಯ್ದೆ, ಐಪಿಸಿ 379 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Illegal cow transport at Kuthar, four arrested by Ullal Police in Mangalore. The arrested were caught by the bajarang dal members when the van was stuck finding difficult to climb up the road.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
19-06-25 10:08 pm
Mangalore Correspondent
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm