ಬ್ರೇಕಿಂಗ್ ನ್ಯೂಸ್
06-06-23 10:43 am Mangalore Correspondent ಕ್ರೈಂ
ಉಳ್ಳಾಲ, ಜೂ.6: ಕುತ್ತಾರು ಬಳಿಯ ಭಂಡಾರ ಬೈಲು ಎಂಬಲ್ಲಿ ಟಾಟಾ ಏಸ್ ವಾಹನದಲ್ಲಿ ಜಾನುವಾರುಗಳನ್ನ ಉಸಿರುಗಟ್ಟಿಸಿ ಅಮಾನವೀಯವಾಗಿ ವಧಾಗೃಹಕ್ಕೆ ಸಾಗಿಸುತ್ತಿದ್ದ ವೇಳೆ ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನ ರಕ್ಷಿಸಿದ್ದು ಈ ವೇಳೆ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಉಳ್ಳಾಲದ ಆಝಾದ್ ನಗರ ನಿವಾಸಿ ಅಹಮ್ಮದ್ ಇರ್ಷಾದ್, ಅಳೇಕಳ ನಿವಾಸಿ ಜಾಫರ್ ಸಾಧಿಕ್, ಬಸ್ತಿಪಡ್ಪು ನಿವಾಸಿ ಫಾಯಝ್, ಮಂಜೇಶ್ವರ ಬಂಗ್ರ ನಿವಾಸಿ ಖಾಲಿದ್ ಬಿ.ಎಮ್ ಬಂಧಿತ ಆರೋಪಿಗಳು.
ಆರೋಪಿಗಳು ಆದಿತ್ಯವಾರ ಅಂಬ್ಲಮೊಗರು ಎಂಬಲ್ಲಿನ ವೃದ್ಧೆಯೊಬ್ಬರಿಂದ 5 ಜಾನುವಾರುಗಳನ್ನ ಖರೀದಿಸಿ ಕೇರಳ ನೋಂದಣಿಯ ಟಾಟಾ ಏಸ್ ವಾಹನದಲ್ಲಿ ಅಮಾನವೀಯವಾಗಿ ತುಂಬಿಸಿ ಭಂಡಾರ ಬೈಲು ಮಾರ್ಗವಾಗಿ ಉಳ್ಳಾಲ ಅಲೇಕಳದ ವಧಾಗೃಹಕ್ಕೆ ಸಾಗಿಸುತ್ತಿದ್ದ ವೇಳೆ ಕಡಿದಾದ ರಸ್ತೆ ಏರನ್ನ ಏರಲಾಗದೆ ವಾಹನ ನಿಂತಿತ್ತು. ಈ ವೇಳೆ ಸ್ಥಳದಲ್ಲಿದ್ದ ಬಜರಂಗದಳದ ಹುಡುಗರು ವಾಹನವನ್ನ ತಳ್ಳಲು ಮುಂದಾದಾಗ ಗೋವುಗಳನ್ನ ಅಮಾನವೀಯವಾಗಿ ತುಂಬಿಸಿದ್ದು ಬೆಳಕಿಗೆ ಬಂದು ಚಾಲಕನಲ್ಲಿ ವಿಚಾರಿಸಿದಾಗ ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದರು. ಎಸ್ಕಾರ್ಟ್ ನೀಡುತ್ತಿದ್ದ ಇಬ್ಬರು ಆರೋಪಿಗಳು ಬೈಕನ್ನ ಬಿಟ್ಟು ಓಡಿ ಹೋಗಿದ್ದರು.
ಈ ವೇಳೆ, ವಾಹನದಲ್ಲಿದ್ದ ಒಂದು ಹಸು ಹೊರಗೆ ಓಡಿ ತಪ್ಪಿಸಿತ್ತು. ಬಾಕಿ ಉಳಿದಿದ್ದ ಒಂದು ಹಸು, ಎರಡು ಹೋರಿ, ಮತ್ತೊಂದು ಕರುವನ್ನ ರಕ್ಷಿಸಿದ ಬಜರಂಗದಳದ ಕಾರ್ಯಕರ್ತರು ಉಳ್ಳಾಲ ಪೊಲೀಸ್ ಠಾಣೆಗೆ ಒಪ್ಪಿಸಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆರೋಪಿಗಳ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆ, ಪ್ರಾಣಿ ಹಿಂಸೆ ಕಾಯ್ದೆ, ಐಪಿಸಿ 379 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Illegal cow transport at Kuthar, four arrested by Ullal Police in Mangalore. The arrested were caught by the bajarang dal members when the van was stuck finding difficult to climb up the road.
26-04-24 11:17 pm
Bangalore Correspondent
ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ...
26-04-24 09:10 pm
Madikeri, election, heart attack; ಮಡಿಕೇರಿ ; ಮ...
26-04-24 06:14 pm
Chamarajanagar, villagers, Booth: ಮತದಾನ ಬಹಿಷ್...
26-04-24 04:53 pm
ಚಿತ್ರದುರ್ಗ ; ಲೋ ಬಿಪಿಯಿಂದ ಅಸ್ವಸ್ಥ , ಮತಗಟ್ಟೆಯಲ್...
26-04-24 03:04 pm
26-04-24 02:58 pm
HK News Desk
Road Accident In Telangana: ಹಾಳಾಗಿ ನಿಂತಿದ್ದ ಲ...
25-04-24 03:49 pm
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
26-04-24 10:45 pm
Mangalore Correspondent
Mangalore Voting, Election 2024; ದಕ್ಷಿಣ ಕನ್ನಡ...
26-04-24 10:32 pm
Karkala, Horse ride to cast his vote: ಕಾರ್ಕಳ...
26-04-24 09:28 pm
ಸುಳ್ಯ ; 18 ನಕ್ಸಲ್ ಪೀಡಿತ ಮತಗಟ್ಟೆಗಳಲ್ಲಿ ಶಸ್ತ್ರಸ...
26-04-24 08:42 pm
Mangalore live voting percentage: ದಕ್ಷಿಣ ಕನ್ನ...
26-04-24 05:56 pm
26-04-24 03:59 pm
Mangalore Correspondent
Mangalore Fraud, crime, Krishnaprasad Shetty:...
25-04-24 10:18 pm
Bangalore crime, Dacoity gang, 40 lakhs, robb...
25-04-24 03:33 pm
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm
Glide touist bus, Mangalore, crime: ಬೆಂಗಳೂರು...
24-04-24 10:48 pm