ಬ್ರೇಕಿಂಗ್ ನ್ಯೂಸ್
06-06-23 10:43 am Mangalore Correspondent ಕ್ರೈಂ
ಉಳ್ಳಾಲ, ಜೂ.6: ಕುತ್ತಾರು ಬಳಿಯ ಭಂಡಾರ ಬೈಲು ಎಂಬಲ್ಲಿ ಟಾಟಾ ಏಸ್ ವಾಹನದಲ್ಲಿ ಜಾನುವಾರುಗಳನ್ನ ಉಸಿರುಗಟ್ಟಿಸಿ ಅಮಾನವೀಯವಾಗಿ ವಧಾಗೃಹಕ್ಕೆ ಸಾಗಿಸುತ್ತಿದ್ದ ವೇಳೆ ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನ ರಕ್ಷಿಸಿದ್ದು ಈ ವೇಳೆ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಉಳ್ಳಾಲದ ಆಝಾದ್ ನಗರ ನಿವಾಸಿ ಅಹಮ್ಮದ್ ಇರ್ಷಾದ್, ಅಳೇಕಳ ನಿವಾಸಿ ಜಾಫರ್ ಸಾಧಿಕ್, ಬಸ್ತಿಪಡ್ಪು ನಿವಾಸಿ ಫಾಯಝ್, ಮಂಜೇಶ್ವರ ಬಂಗ್ರ ನಿವಾಸಿ ಖಾಲಿದ್ ಬಿ.ಎಮ್ ಬಂಧಿತ ಆರೋಪಿಗಳು.


ಆರೋಪಿಗಳು ಆದಿತ್ಯವಾರ ಅಂಬ್ಲಮೊಗರು ಎಂಬಲ್ಲಿನ ವೃದ್ಧೆಯೊಬ್ಬರಿಂದ 5 ಜಾನುವಾರುಗಳನ್ನ ಖರೀದಿಸಿ ಕೇರಳ ನೋಂದಣಿಯ ಟಾಟಾ ಏಸ್ ವಾಹನದಲ್ಲಿ ಅಮಾನವೀಯವಾಗಿ ತುಂಬಿಸಿ ಭಂಡಾರ ಬೈಲು ಮಾರ್ಗವಾಗಿ ಉಳ್ಳಾಲ ಅಲೇಕಳದ ವಧಾಗೃಹಕ್ಕೆ ಸಾಗಿಸುತ್ತಿದ್ದ ವೇಳೆ ಕಡಿದಾದ ರಸ್ತೆ ಏರನ್ನ ಏರಲಾಗದೆ ವಾಹನ ನಿಂತಿತ್ತು. ಈ ವೇಳೆ ಸ್ಥಳದಲ್ಲಿದ್ದ ಬಜರಂಗದಳದ ಹುಡುಗರು ವಾಹನವನ್ನ ತಳ್ಳಲು ಮುಂದಾದಾಗ ಗೋವುಗಳನ್ನ ಅಮಾನವೀಯವಾಗಿ ತುಂಬಿಸಿದ್ದು ಬೆಳಕಿಗೆ ಬಂದು ಚಾಲಕನಲ್ಲಿ ವಿಚಾರಿಸಿದಾಗ ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದರು. ಎಸ್ಕಾರ್ಟ್ ನೀಡುತ್ತಿದ್ದ ಇಬ್ಬರು ಆರೋಪಿಗಳು ಬೈಕನ್ನ ಬಿಟ್ಟು ಓಡಿ ಹೋಗಿದ್ದರು.


ಈ ವೇಳೆ, ವಾಹನದಲ್ಲಿದ್ದ ಒಂದು ಹಸು ಹೊರಗೆ ಓಡಿ ತಪ್ಪಿಸಿತ್ತು. ಬಾಕಿ ಉಳಿದಿದ್ದ ಒಂದು ಹಸು, ಎರಡು ಹೋರಿ, ಮತ್ತೊಂದು ಕರುವನ್ನ ರಕ್ಷಿಸಿದ ಬಜರಂಗದಳದ ಕಾರ್ಯಕರ್ತರು ಉಳ್ಳಾಲ ಪೊಲೀಸ್ ಠಾಣೆಗೆ ಒಪ್ಪಿಸಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆರೋಪಿಗಳ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆ, ಪ್ರಾಣಿ ಹಿಂಸೆ ಕಾಯ್ದೆ, ಐಪಿಸಿ 379 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Illegal cow transport at Kuthar, four arrested by Ullal Police in Mangalore. The arrested were caught by the bajarang dal members when the van was stuck finding difficult to climb up the road.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm