ಬ್ರೇಕಿಂಗ್ ನ್ಯೂಸ್
09-06-23 10:52 pm Mangalore Correspondent ಕ್ರೈಂ
ಮಂಗಳೂರು, ಜೂನ್ 9: ಗಾಂಜಾ ವ್ಯಾಪಾರ- ವಹಿವಾಟಿನಲ್ಲಿ ತೊಡಗಿಕೊಂಡಿದ್ದ ಬಂಟ್ವಾಳ ಮೂಲದ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಗುಡ್ಡದಲ್ಲಿ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಯುವಕನನ್ನು ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಅಬ್ಬಾಸ್ ಎಂಬವರ ಪುತ್ರ ಫವಾಸ್ ಎಂದು ಗುರುತಿಸಲಾಗಿದೆ. ಮೂಡಿಗೆರೆ ಬಳಿಯ ಬಣಕಲ್ ಗುಡ್ಡದಲ್ಲಿ ಅರೆಸುಟ್ಟ ಶವ ಪತ್ತೆಯಾಗಿದ್ದು, ಫವಾಸ್ ನದ್ದೇ ಶವ ಎಂದು ಪತ್ತೆ ಮಾಡಲಾಗಿದೆ. ಫವಾಸ್ ಈ ಹಿಂದೆ ಮದುವೆಯಾಗಿದ್ದು, ಆನಂತರ ಪತ್ನಿಯನ್ನು ಬಿಟ್ಟು ಹೋಗಿದ್ದ. ಗಾಂಜಾ ಪೆಡ್ಲಿಂಗ್, ಅದೇ ವಹಿವಾಟಿನಲ್ಲಿ ವ್ಯಸ್ತನಾಗಿದ್ದ ಫವಾಸ್ ಮನಗೆ ಬರುವುದನ್ನೇ ಕಡಿಮೆ ಮಾಡಿದ್ದ.

ಫವಾಸ್ ಡ್ರಗ್ಸ್ ಸೇವನೆ ಮಾಡುತ್ತಿದ್ದ ಕಾರಣಕ್ಕೆ ಮನೆಯ ಗೌರವ ಹಾಳಾಗುತ್ತೆ ಎಂದು ಮನೆಯವರು ಕೂಡ ದೂರ ಮಾಡಿದ್ದರು. ಡ್ರಗ್ಸ್ ಮತ್ತು ಗಾಂಜಾ ಗ್ಯಾಂಗಿನಲ್ಲಿ ಗುರುತಿಸಿಕೊಂಡಿದ್ದಕ್ಕೆ ಫವಾಸ್ ಬಗ್ಗೆ ಕುಟುಂಬಸ್ಥರು ಅಸಮಾಧಾನದಲ್ಲಿದ್ದರು. ಅಕ್ರಮವಾಗಿ ಗಾಂಜಾ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರಿಂದ ಮಂಗಳೂರು, ಬಂಟ್ವಾಳದಲ್ಲಿ ಪೊಲೀಸರಿಗೆ ನೋಟೆಡ್ ಆಗಿಯೂ ಇದ್ದ. ಹತ್ತು ದಿನಗಳ ಹಿಂದೆ ಫವಾಸ್ ನನ್ನು ತಂಡವೊಂದು ಅಪಹರಿಸಿದೆ ಎನ್ನಲಾಗುತ್ತಿದ್ದು ಆನಂತರ ನಾಪತ್ತೆಯಾಗಿದ್ದ. ಗಾಂಜಾ ವಹಿವಾಟಿನಲ್ಲಿ ಹಣಕಾಸು ವಿಷಯದಲ್ಲಿ ವೈಷಮ್ಯದಿಂದ ತಂಡ ಅಪಹರಿಸಿತ್ತು ಎನ್ನಲಾಗಿದೆ.
ಈ ನಡುವೆ, ಮೂಡಿಗೆರೆ ಬಳಿಯ ಬಣಕಲ್ ಗುಡ್ಡದಲ್ಲಿ ಪೆಟ್ರೋಲ್ ಹಾಕಿ ಸುಟ್ಟ ಶವ ಪತ್ತೆಯಾಗಿದ್ದು ಫವಾಸ್ ನದ್ದೇ ಎಂದು ಪೊಲೀಸರು ಗುರುತು ಹಚ್ಚಿದ್ದಾರೆ. ಫವಾಸ್ ಕೊಲೆ ಪ್ರಕರಣದಲ್ಲಿ ವಗ್ಗ ಮತ್ತು ಕಾವಳಕಟ್ಟೆಯ ಯುವಕರು ಇದ್ದಾರೆ ಎಂಬುದನ್ನು ಪೊಲೀಸರು ಶಂಕಿಸಿದ್ದಾರೆ. ಫವಾಸ್ ಜೊತೆಗೆ ಗಾಂಜಾ ವಹಿವಾಟಿನಲ್ಲಿ ಗುರುತಿಸಿದ್ದ ಗೆಳೆಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
Mangalore Bantwal Youth involved in Ganja gang murdered, body found at Bankal, gutted with fire. The deceased has been identified as Abbas from Ira, Bantwal.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm