ಬ್ರೇಕಿಂಗ್ ನ್ಯೂಸ್
09-06-23 10:52 pm Mangalore Correspondent ಕ್ರೈಂ
ಮಂಗಳೂರು, ಜೂನ್ 9: ಗಾಂಜಾ ವ್ಯಾಪಾರ- ವಹಿವಾಟಿನಲ್ಲಿ ತೊಡಗಿಕೊಂಡಿದ್ದ ಬಂಟ್ವಾಳ ಮೂಲದ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಗುಡ್ಡದಲ್ಲಿ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಯುವಕನನ್ನು ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಅಬ್ಬಾಸ್ ಎಂಬವರ ಪುತ್ರ ಫವಾಸ್ ಎಂದು ಗುರುತಿಸಲಾಗಿದೆ. ಮೂಡಿಗೆರೆ ಬಳಿಯ ಬಣಕಲ್ ಗುಡ್ಡದಲ್ಲಿ ಅರೆಸುಟ್ಟ ಶವ ಪತ್ತೆಯಾಗಿದ್ದು, ಫವಾಸ್ ನದ್ದೇ ಶವ ಎಂದು ಪತ್ತೆ ಮಾಡಲಾಗಿದೆ. ಫವಾಸ್ ಈ ಹಿಂದೆ ಮದುವೆಯಾಗಿದ್ದು, ಆನಂತರ ಪತ್ನಿಯನ್ನು ಬಿಟ್ಟು ಹೋಗಿದ್ದ. ಗಾಂಜಾ ಪೆಡ್ಲಿಂಗ್, ಅದೇ ವಹಿವಾಟಿನಲ್ಲಿ ವ್ಯಸ್ತನಾಗಿದ್ದ ಫವಾಸ್ ಮನಗೆ ಬರುವುದನ್ನೇ ಕಡಿಮೆ ಮಾಡಿದ್ದ.

ಫವಾಸ್ ಡ್ರಗ್ಸ್ ಸೇವನೆ ಮಾಡುತ್ತಿದ್ದ ಕಾರಣಕ್ಕೆ ಮನೆಯ ಗೌರವ ಹಾಳಾಗುತ್ತೆ ಎಂದು ಮನೆಯವರು ಕೂಡ ದೂರ ಮಾಡಿದ್ದರು. ಡ್ರಗ್ಸ್ ಮತ್ತು ಗಾಂಜಾ ಗ್ಯಾಂಗಿನಲ್ಲಿ ಗುರುತಿಸಿಕೊಂಡಿದ್ದಕ್ಕೆ ಫವಾಸ್ ಬಗ್ಗೆ ಕುಟುಂಬಸ್ಥರು ಅಸಮಾಧಾನದಲ್ಲಿದ್ದರು. ಅಕ್ರಮವಾಗಿ ಗಾಂಜಾ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರಿಂದ ಮಂಗಳೂರು, ಬಂಟ್ವಾಳದಲ್ಲಿ ಪೊಲೀಸರಿಗೆ ನೋಟೆಡ್ ಆಗಿಯೂ ಇದ್ದ. ಹತ್ತು ದಿನಗಳ ಹಿಂದೆ ಫವಾಸ್ ನನ್ನು ತಂಡವೊಂದು ಅಪಹರಿಸಿದೆ ಎನ್ನಲಾಗುತ್ತಿದ್ದು ಆನಂತರ ನಾಪತ್ತೆಯಾಗಿದ್ದ. ಗಾಂಜಾ ವಹಿವಾಟಿನಲ್ಲಿ ಹಣಕಾಸು ವಿಷಯದಲ್ಲಿ ವೈಷಮ್ಯದಿಂದ ತಂಡ ಅಪಹರಿಸಿತ್ತು ಎನ್ನಲಾಗಿದೆ.
ಈ ನಡುವೆ, ಮೂಡಿಗೆರೆ ಬಳಿಯ ಬಣಕಲ್ ಗುಡ್ಡದಲ್ಲಿ ಪೆಟ್ರೋಲ್ ಹಾಕಿ ಸುಟ್ಟ ಶವ ಪತ್ತೆಯಾಗಿದ್ದು ಫವಾಸ್ ನದ್ದೇ ಎಂದು ಪೊಲೀಸರು ಗುರುತು ಹಚ್ಚಿದ್ದಾರೆ. ಫವಾಸ್ ಕೊಲೆ ಪ್ರಕರಣದಲ್ಲಿ ವಗ್ಗ ಮತ್ತು ಕಾವಳಕಟ್ಟೆಯ ಯುವಕರು ಇದ್ದಾರೆ ಎಂಬುದನ್ನು ಪೊಲೀಸರು ಶಂಕಿಸಿದ್ದಾರೆ. ಫವಾಸ್ ಜೊತೆಗೆ ಗಾಂಜಾ ವಹಿವಾಟಿನಲ್ಲಿ ಗುರುತಿಸಿದ್ದ ಗೆಳೆಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
Mangalore Bantwal Youth involved in Ganja gang murdered, body found at Bankal, gutted with fire. The deceased has been identified as Abbas from Ira, Bantwal.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm