ಬ್ರೇಕಿಂಗ್ ನ್ಯೂಸ್
09-06-23 10:52 pm Mangalore Correspondent ಕ್ರೈಂ
ಮಂಗಳೂರು, ಜೂನ್ 9: ಗಾಂಜಾ ವ್ಯಾಪಾರ- ವಹಿವಾಟಿನಲ್ಲಿ ತೊಡಗಿಕೊಂಡಿದ್ದ ಬಂಟ್ವಾಳ ಮೂಲದ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಗುಡ್ಡದಲ್ಲಿ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಯುವಕನನ್ನು ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಅಬ್ಬಾಸ್ ಎಂಬವರ ಪುತ್ರ ಫವಾಸ್ ಎಂದು ಗುರುತಿಸಲಾಗಿದೆ. ಮೂಡಿಗೆರೆ ಬಳಿಯ ಬಣಕಲ್ ಗುಡ್ಡದಲ್ಲಿ ಅರೆಸುಟ್ಟ ಶವ ಪತ್ತೆಯಾಗಿದ್ದು, ಫವಾಸ್ ನದ್ದೇ ಶವ ಎಂದು ಪತ್ತೆ ಮಾಡಲಾಗಿದೆ. ಫವಾಸ್ ಈ ಹಿಂದೆ ಮದುವೆಯಾಗಿದ್ದು, ಆನಂತರ ಪತ್ನಿಯನ್ನು ಬಿಟ್ಟು ಹೋಗಿದ್ದ. ಗಾಂಜಾ ಪೆಡ್ಲಿಂಗ್, ಅದೇ ವಹಿವಾಟಿನಲ್ಲಿ ವ್ಯಸ್ತನಾಗಿದ್ದ ಫವಾಸ್ ಮನಗೆ ಬರುವುದನ್ನೇ ಕಡಿಮೆ ಮಾಡಿದ್ದ.

ಫವಾಸ್ ಡ್ರಗ್ಸ್ ಸೇವನೆ ಮಾಡುತ್ತಿದ್ದ ಕಾರಣಕ್ಕೆ ಮನೆಯ ಗೌರವ ಹಾಳಾಗುತ್ತೆ ಎಂದು ಮನೆಯವರು ಕೂಡ ದೂರ ಮಾಡಿದ್ದರು. ಡ್ರಗ್ಸ್ ಮತ್ತು ಗಾಂಜಾ ಗ್ಯಾಂಗಿನಲ್ಲಿ ಗುರುತಿಸಿಕೊಂಡಿದ್ದಕ್ಕೆ ಫವಾಸ್ ಬಗ್ಗೆ ಕುಟುಂಬಸ್ಥರು ಅಸಮಾಧಾನದಲ್ಲಿದ್ದರು. ಅಕ್ರಮವಾಗಿ ಗಾಂಜಾ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರಿಂದ ಮಂಗಳೂರು, ಬಂಟ್ವಾಳದಲ್ಲಿ ಪೊಲೀಸರಿಗೆ ನೋಟೆಡ್ ಆಗಿಯೂ ಇದ್ದ. ಹತ್ತು ದಿನಗಳ ಹಿಂದೆ ಫವಾಸ್ ನನ್ನು ತಂಡವೊಂದು ಅಪಹರಿಸಿದೆ ಎನ್ನಲಾಗುತ್ತಿದ್ದು ಆನಂತರ ನಾಪತ್ತೆಯಾಗಿದ್ದ. ಗಾಂಜಾ ವಹಿವಾಟಿನಲ್ಲಿ ಹಣಕಾಸು ವಿಷಯದಲ್ಲಿ ವೈಷಮ್ಯದಿಂದ ತಂಡ ಅಪಹರಿಸಿತ್ತು ಎನ್ನಲಾಗಿದೆ.
ಈ ನಡುವೆ, ಮೂಡಿಗೆರೆ ಬಳಿಯ ಬಣಕಲ್ ಗುಡ್ಡದಲ್ಲಿ ಪೆಟ್ರೋಲ್ ಹಾಕಿ ಸುಟ್ಟ ಶವ ಪತ್ತೆಯಾಗಿದ್ದು ಫವಾಸ್ ನದ್ದೇ ಎಂದು ಪೊಲೀಸರು ಗುರುತು ಹಚ್ಚಿದ್ದಾರೆ. ಫವಾಸ್ ಕೊಲೆ ಪ್ರಕರಣದಲ್ಲಿ ವಗ್ಗ ಮತ್ತು ಕಾವಳಕಟ್ಟೆಯ ಯುವಕರು ಇದ್ದಾರೆ ಎಂಬುದನ್ನು ಪೊಲೀಸರು ಶಂಕಿಸಿದ್ದಾರೆ. ಫವಾಸ್ ಜೊತೆಗೆ ಗಾಂಜಾ ವಹಿವಾಟಿನಲ್ಲಿ ಗುರುತಿಸಿದ್ದ ಗೆಳೆಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
Mangalore Bantwal Youth involved in Ganja gang murdered, body found at Bankal, gutted with fire. The deceased has been identified as Abbas from Ira, Bantwal.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm