ಬ್ರೇಕಿಂಗ್ ನ್ಯೂಸ್
31-10-20 01:50 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 31: ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣದಲ್ಲಿ ಮಂಗಳೂರು ಮೂಲದ ರೌಡಿಶೀಟರ್ ಆಕಾಶಭವನ್ ಶರಣ್ ನನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶರಣ್ ಪೂಜಾರಿಯನ್ನು ವಿಚಾರಣೆ ನಡೆಸುವ ಸಲುವಾಗಿ ಪೊಲೀಸರು ಬಾಡಿ ವಾರೆಂಟ್ ಪಡೆದು ಬೆಂಗಳೂರಿಗೆ ತೆರಳಿದ್ದರು. ನಿನ್ನೆಯೇ ಆತನನ್ನು ಜೈಲಿನಿಂದ ಬಂಟ್ವಾಳಕ್ಕೆ ಕರೆ ತರಲಾಗಿದ್ದು ಬಂಟ್ವಾಳ ಜೆಎಂಎಫ್ ಕೋರ್ಟಿಗೆ ಹಾಜರುಪಡಿಸಿ ಐದು ದಿನಗಳ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಈಗಾಗ್ಲೇ ಕೊಲೆ ಪ್ರಕರಣದಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದು, ಅವರು ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ನಡುವೆ, ಆಕಾಶಭವನ್ ಶರಣ್ ಬಂಟ್ವಾಳ ನ್ಯಾಯಾಧೀಶರಿಗೆ ಬರೆದ ಪತ್ರ ಬಯಲಾಗಿತ್ತು. ತನ್ನನ್ನು ಬಂಟ್ವಾಳ ಪೊಲೀಸರ ವಶಕ್ಕೆ ಒಪ್ಪಿಸಿದರೆ ಎನ್ಕೌಂಟರ್ ನಡೆಸುತ್ತಾರೆಂದು ಆತಂಕ ವ್ಯಕ್ತಪಡಿಸಿ ಜೈಲಿನಿಂದ ಪತ್ರ ಬರೆದಿದ್ದ. ಆದರೆ, ರೌಡಿ ಬರೆದ ಪತ್ರಕ್ಕೆ ನ್ಯಾಯಾಧೀಶರು ಮನ್ನಣೆ ನೀಡಿಲ್ಲ ಎನ್ನಲಾಗುತ್ತಿದೆ. ಆಕಾಶಭವನ್ ಶರಣ್, ಮಂಗಳೂರಿನಲ್ಲಿ ಭೂಗತ ಪಾತಕಿ ವಿಕ್ಕಿ ಶೆಟ್ಟಿ ಬಂಟನೆಂದೇ ಗುರುತಿಸ್ಕೊಂಡಿದ್ದು, ಹತ್ಯೆ ಪ್ರಕರಣದಲ್ಲಿ ವಿಕ್ಕಿ ಶೆಟ್ಟಿಯ ಪಾತ್ರ ಇದೆಯೇ ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ನಡೆಸಲಿದ್ದಾರೆ.
ಈ ನಡುವೆ, ಬೆಳ್ತಂಗಡಿ ಮೂಲದ ಪ್ರತೀಕ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತನೇ ಪ್ರಮುಖ ಆರೋಪಿಗಳಾದ ಸತೀಶ್ ಕುಲಾಲ್ ಮತ್ತು ಗಿರೀಶ್ ನನ್ನು ತನ್ನ ವಾಹನದಲ್ಲಿ ಕರೆದುಕೊಂಡು ಬಂದು ಪೊಲೀಸರಿಗೆ ಶರಣಾಗಿಸಿದ್ದ ಎನ್ನಲಾಗುತ್ತಿದ್ದು, ಈ ಬಗ್ಗೆ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಹತ್ಯೆ ಆರೋಪಿಗಳಿಗೂ, ಪ್ರತೀಕ್ ಗೂ ಏನು ಲಿಂಕ್ ಇತ್ತು ಅನ್ನೋದ್ರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
In connection to the Murder of Surendra Bantwal, the Police have taken Akash Bhavan Sharan into Police Custody from Bangalore for 5 days.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm