ಬ್ರೇಕಿಂಗ್ ನ್ಯೂಸ್
15-06-23 01:30 pm Mangalore Correspondent ಕ್ರೈಂ
ಮಂಗಳೂರು, ಜೂನ್ 15: ಮುಂಬೈ ಉದ್ಯಮಿ ಐಕಳ ಹರೀಶ್ ಶೆಟ್ಟಿ ಅವರ ಮನೆಯಿಂದ ಕಳವಾಗಿದ್ದ ಕೋಟ್ಯಂತರ ಮೌಲ್ಯದ ಚಿನ್ನಾಭರಣದ ಪೈಕಿ ಒಂದು ಕೇಜಿ ಐದು ಗ್ರಾಮ್ ಚಿನ್ನ ಮತ್ತು ಇಬ್ಬರು ಆರೋಪಿಗಳನ್ನು ಮಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
2023ರ ಜನವರಿ 15ರಂದು ರಾತ್ರಿ ಕಿನ್ನಿಗೋಳಿಯ ಐಕಳದ ತಾಳಿಪ್ಪಾಡಿಯಲ್ಲಿರುವ ಹೆಸರಾಂತ ಉದ್ಯಮಿ ಹರೀಶ್ ಶೆಟ್ಟಿ ಅವರ ಮನೆಯಲ್ಲಿ ಕಳವು ಕೃತ್ಯ ನಡೆದಿತ್ತು. ಮನೆಯ ಹೊರಗೆ ನಿಲ್ಲಿಸಿದ್ದ ಪಜೆರೋ ಕಾರನ್ನು ಕಳವುಗೈಯಲು ನಾಲ್ವರಿದ್ದ ತಂಡ ಹೊಕ್ಕಿತ್ತು. ಈ ವೇಳೆ, ಮನೆಯಲ್ಲಿ ಯಾರೂ ಇರಲಿಲ್ಲ. ಮದುವೆಯ ನಿಮಿತ್ತ ಹರೀಶ್ ಶೆಟ್ಟಿ ಕುಟುಂಬ ಊರಿಗೆ ಬಂದು ಮುಂಬೈಗೆ ಮರಳಿತ್ತು. ಕಾರಿನ ಕೀ ಪಡೆಯುವುದಕ್ಕಾಗಿ ಕಳ್ಳರು ಮನೆಯ ಬೀಗ ಮುರಿದು ಒಳನುಗ್ಗಿದ್ದರು. ಮನೆಯ ಕಪಾಟು ಒಡೆದು ನೋಡಿದಾಗ, ಚಿನ್ನದ ಆಭರಣಗಳ ರಾಶಿಯೇ ಸಿಕ್ಕಿತ್ತು. ಆರೋಪಿಗಳು ಸದ್ದಿಲ್ಲದೆ, ಬಂದಿದ್ದ ಕಾರಿನಲ್ಲೇ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು.





ಕೃತ್ಯದ ಬಗ್ಗೆ ಮುಲ್ಕಿ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡಿದ್ದ ಮಂಗಳೂರು ಸಿಸಿಬಿ ಪೊಲೀಸರು ನಾಲ್ವರ ಪೈಕಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ಮಾಳ ಗ್ರಾಮದ ನಿವಾಸಿ ಗಣೇಶ್ ನಾಯ್ಕ್ (26) ಮತ್ತು ವಿರಾಜಪೇಟೆ ತಾಲೂಕಿನ ಸಿದ್ಧಾಪುರ ಗ್ರಾಮದ ನಿವಾಸಿ ರಂಜಿತ್ ಕೆ.ಆರ್.(26) ಬಂಧಿತರು. ಇವರನ್ನು ಬೆಂಗಳೂರಿನಿಂದ ವಶಕ್ಕೆ ಪಡೆದಿದ್ದು ಒಂದು ಕೆಜಿ ಐದು ಗ್ರಾಮ್ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ ಸುಮಾರು 56.50 ಲಕ್ಷ ಆಗಬಹುದು ಎಂದು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ.
ಕಳವು ಸಂದರ್ಭದಲ್ಲಿ ಐಕಳ ಹರೀಶ್ ಶೆಟ್ಟಿಯವರು ಎರಡು ಕೆಜಿ ಚಿನ್ನ ಕಳವು ಆಗಿರಬಹುದು ಎಂದು ದೂರಿನಲ್ಲಿ ತಿಳಿಸಿದ್ದರು. ಇನ್ನಿಬ್ಬರು ಆರೋಪಿಗಳು ಕೇರಳದಲ್ಲಿ ಅವಿತುಕೊಂಡಿದ್ದಾರೆ ಎನ್ನಲಾಗುತ್ತಿದ್ದು ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಆರೋಪಿ ಗಣೇಶ್ ನಾಯ್ಕ್ ಮತ್ತು ಇತರ ಇಬ್ಬರು ಆರೋಪಿಗಳು ಮಂಗಳೂರಿನ ಕುಲಶೇಖರದ ಕೆಳರಾಯಿ ಚರ್ಚ್ ರಸ್ತೆಯಲ್ಲಿನ ಮನೆಯ ಬಾಗಿಲು ಒಡೆದು ಬೆಲೆಬಾಳುವ ವಸ್ತುಗಳನ್ನು ಕಳವು ನಡೆಸಿದ್ದರು. ಹಾಗೂ ಮಾರುತಿ ಬ್ರೀಜಾ ಕಾರನ್ನು ಕಳವು ಮಾಡಿದ್ದರು. ಪೊಲೀಸರ ತನಿಖೆಯಲ್ಲಿ ಈ ಕೃತ್ಯ ಕೂಡ ಪತ್ತೆಯಾಗಿದೆ. ಗಣೇಶ್ ನಾಯ್ಕ್ ವಿರುದ್ಧ ಈ ಹಿಂದೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು ಆನಂತರ ಅಲ್ಲಿನ ಜೈಲಿನಲ್ಲಿದ್ದಾಗ ಇತರ ಆರೋಪಿಗಳ ಸಂಪರ್ಕ ಆಗಿತ್ತು. ಜೈಲಿನಿಂದ ಹೊರಬಂದ ಬಳಿಕ ಉದ್ಯಮಿ ಹರೀಶ್ ಶೆಟ್ಟಿ ಮನೆಯಿಂದ ಕಳವಿಗೆ ಸಂಚು ನಡೆಸಿದ್ದರು. ಹರೀಶ್ ಶೆಟ್ಟಿ ಮನೆಯಲ್ಲಿ ವಾಚ್ ಮನ್ ಗಳಿದ್ದು ಮನೆಯ ಹಿಂಭಾಗದ ಕಟ್ಟಡದಲ್ಲಿ ಮಲಗಿದ್ದರು. ಕಳ್ಳರು ನುಗ್ಗಿ ಚಿನ್ನಾಭರಣ ಹೊತ್ತೊಯ್ದಿದ್ದು ಅವರಿಗೆ ತಿಳಿಯಲೇ ಇಲ್ಲ.
Robbery of Gold at Aikala Harish Shetty house in Mangalore, two arrested by CCB police, 1 kilo gold recovered. The arrested have been identified as Ganesh Naik, Ranjith.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm