ಬ್ರೇಕಿಂಗ್ ನ್ಯೂಸ್
15-06-23 01:30 pm Mangalore Correspondent ಕ್ರೈಂ
ಮಂಗಳೂರು, ಜೂನ್ 15: ಮುಂಬೈ ಉದ್ಯಮಿ ಐಕಳ ಹರೀಶ್ ಶೆಟ್ಟಿ ಅವರ ಮನೆಯಿಂದ ಕಳವಾಗಿದ್ದ ಕೋಟ್ಯಂತರ ಮೌಲ್ಯದ ಚಿನ್ನಾಭರಣದ ಪೈಕಿ ಒಂದು ಕೇಜಿ ಐದು ಗ್ರಾಮ್ ಚಿನ್ನ ಮತ್ತು ಇಬ್ಬರು ಆರೋಪಿಗಳನ್ನು ಮಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
2023ರ ಜನವರಿ 15ರಂದು ರಾತ್ರಿ ಕಿನ್ನಿಗೋಳಿಯ ಐಕಳದ ತಾಳಿಪ್ಪಾಡಿಯಲ್ಲಿರುವ ಹೆಸರಾಂತ ಉದ್ಯಮಿ ಹರೀಶ್ ಶೆಟ್ಟಿ ಅವರ ಮನೆಯಲ್ಲಿ ಕಳವು ಕೃತ್ಯ ನಡೆದಿತ್ತು. ಮನೆಯ ಹೊರಗೆ ನಿಲ್ಲಿಸಿದ್ದ ಪಜೆರೋ ಕಾರನ್ನು ಕಳವುಗೈಯಲು ನಾಲ್ವರಿದ್ದ ತಂಡ ಹೊಕ್ಕಿತ್ತು. ಈ ವೇಳೆ, ಮನೆಯಲ್ಲಿ ಯಾರೂ ಇರಲಿಲ್ಲ. ಮದುವೆಯ ನಿಮಿತ್ತ ಹರೀಶ್ ಶೆಟ್ಟಿ ಕುಟುಂಬ ಊರಿಗೆ ಬಂದು ಮುಂಬೈಗೆ ಮರಳಿತ್ತು. ಕಾರಿನ ಕೀ ಪಡೆಯುವುದಕ್ಕಾಗಿ ಕಳ್ಳರು ಮನೆಯ ಬೀಗ ಮುರಿದು ಒಳನುಗ್ಗಿದ್ದರು. ಮನೆಯ ಕಪಾಟು ಒಡೆದು ನೋಡಿದಾಗ, ಚಿನ್ನದ ಆಭರಣಗಳ ರಾಶಿಯೇ ಸಿಕ್ಕಿತ್ತು. ಆರೋಪಿಗಳು ಸದ್ದಿಲ್ಲದೆ, ಬಂದಿದ್ದ ಕಾರಿನಲ್ಲೇ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು.
ಕೃತ್ಯದ ಬಗ್ಗೆ ಮುಲ್ಕಿ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡಿದ್ದ ಮಂಗಳೂರು ಸಿಸಿಬಿ ಪೊಲೀಸರು ನಾಲ್ವರ ಪೈಕಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ಮಾಳ ಗ್ರಾಮದ ನಿವಾಸಿ ಗಣೇಶ್ ನಾಯ್ಕ್ (26) ಮತ್ತು ವಿರಾಜಪೇಟೆ ತಾಲೂಕಿನ ಸಿದ್ಧಾಪುರ ಗ್ರಾಮದ ನಿವಾಸಿ ರಂಜಿತ್ ಕೆ.ಆರ್.(26) ಬಂಧಿತರು. ಇವರನ್ನು ಬೆಂಗಳೂರಿನಿಂದ ವಶಕ್ಕೆ ಪಡೆದಿದ್ದು ಒಂದು ಕೆಜಿ ಐದು ಗ್ರಾಮ್ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ ಸುಮಾರು 56.50 ಲಕ್ಷ ಆಗಬಹುದು ಎಂದು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ.
ಕಳವು ಸಂದರ್ಭದಲ್ಲಿ ಐಕಳ ಹರೀಶ್ ಶೆಟ್ಟಿಯವರು ಎರಡು ಕೆಜಿ ಚಿನ್ನ ಕಳವು ಆಗಿರಬಹುದು ಎಂದು ದೂರಿನಲ್ಲಿ ತಿಳಿಸಿದ್ದರು. ಇನ್ನಿಬ್ಬರು ಆರೋಪಿಗಳು ಕೇರಳದಲ್ಲಿ ಅವಿತುಕೊಂಡಿದ್ದಾರೆ ಎನ್ನಲಾಗುತ್ತಿದ್ದು ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಆರೋಪಿ ಗಣೇಶ್ ನಾಯ್ಕ್ ಮತ್ತು ಇತರ ಇಬ್ಬರು ಆರೋಪಿಗಳು ಮಂಗಳೂರಿನ ಕುಲಶೇಖರದ ಕೆಳರಾಯಿ ಚರ್ಚ್ ರಸ್ತೆಯಲ್ಲಿನ ಮನೆಯ ಬಾಗಿಲು ಒಡೆದು ಬೆಲೆಬಾಳುವ ವಸ್ತುಗಳನ್ನು ಕಳವು ನಡೆಸಿದ್ದರು. ಹಾಗೂ ಮಾರುತಿ ಬ್ರೀಜಾ ಕಾರನ್ನು ಕಳವು ಮಾಡಿದ್ದರು. ಪೊಲೀಸರ ತನಿಖೆಯಲ್ಲಿ ಈ ಕೃತ್ಯ ಕೂಡ ಪತ್ತೆಯಾಗಿದೆ. ಗಣೇಶ್ ನಾಯ್ಕ್ ವಿರುದ್ಧ ಈ ಹಿಂದೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು ಆನಂತರ ಅಲ್ಲಿನ ಜೈಲಿನಲ್ಲಿದ್ದಾಗ ಇತರ ಆರೋಪಿಗಳ ಸಂಪರ್ಕ ಆಗಿತ್ತು. ಜೈಲಿನಿಂದ ಹೊರಬಂದ ಬಳಿಕ ಉದ್ಯಮಿ ಹರೀಶ್ ಶೆಟ್ಟಿ ಮನೆಯಿಂದ ಕಳವಿಗೆ ಸಂಚು ನಡೆಸಿದ್ದರು. ಹರೀಶ್ ಶೆಟ್ಟಿ ಮನೆಯಲ್ಲಿ ವಾಚ್ ಮನ್ ಗಳಿದ್ದು ಮನೆಯ ಹಿಂಭಾಗದ ಕಟ್ಟಡದಲ್ಲಿ ಮಲಗಿದ್ದರು. ಕಳ್ಳರು ನುಗ್ಗಿ ಚಿನ್ನಾಭರಣ ಹೊತ್ತೊಯ್ದಿದ್ದು ಅವರಿಗೆ ತಿಳಿಯಲೇ ಇಲ್ಲ.
Robbery of Gold at Aikala Harish Shetty house in Mangalore, two arrested by CCB police, 1 kilo gold recovered. The arrested have been identified as Ganesh Naik, Ranjith.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 12:54 pm
Mangalore Correspondent
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
Mangalore, Bantwal Accident, Melroy D’Sa: ಬಂಟ...
16-04-25 10:58 pm
18-04-25 08:14 pm
HK News Desk
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm
Sullia, Drugs, Mangalore, Ccb Police; ದೆಹಲಿಯಿ...
17-04-25 11:39 am