ಬ್ರೇಕಿಂಗ್ ನ್ಯೂಸ್
15-06-23 01:30 pm Mangalore Correspondent ಕ್ರೈಂ
ಮಂಗಳೂರು, ಜೂನ್ 15: ಮುಂಬೈ ಉದ್ಯಮಿ ಐಕಳ ಹರೀಶ್ ಶೆಟ್ಟಿ ಅವರ ಮನೆಯಿಂದ ಕಳವಾಗಿದ್ದ ಕೋಟ್ಯಂತರ ಮೌಲ್ಯದ ಚಿನ್ನಾಭರಣದ ಪೈಕಿ ಒಂದು ಕೇಜಿ ಐದು ಗ್ರಾಮ್ ಚಿನ್ನ ಮತ್ತು ಇಬ್ಬರು ಆರೋಪಿಗಳನ್ನು ಮಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
2023ರ ಜನವರಿ 15ರಂದು ರಾತ್ರಿ ಕಿನ್ನಿಗೋಳಿಯ ಐಕಳದ ತಾಳಿಪ್ಪಾಡಿಯಲ್ಲಿರುವ ಹೆಸರಾಂತ ಉದ್ಯಮಿ ಹರೀಶ್ ಶೆಟ್ಟಿ ಅವರ ಮನೆಯಲ್ಲಿ ಕಳವು ಕೃತ್ಯ ನಡೆದಿತ್ತು. ಮನೆಯ ಹೊರಗೆ ನಿಲ್ಲಿಸಿದ್ದ ಪಜೆರೋ ಕಾರನ್ನು ಕಳವುಗೈಯಲು ನಾಲ್ವರಿದ್ದ ತಂಡ ಹೊಕ್ಕಿತ್ತು. ಈ ವೇಳೆ, ಮನೆಯಲ್ಲಿ ಯಾರೂ ಇರಲಿಲ್ಲ. ಮದುವೆಯ ನಿಮಿತ್ತ ಹರೀಶ್ ಶೆಟ್ಟಿ ಕುಟುಂಬ ಊರಿಗೆ ಬಂದು ಮುಂಬೈಗೆ ಮರಳಿತ್ತು. ಕಾರಿನ ಕೀ ಪಡೆಯುವುದಕ್ಕಾಗಿ ಕಳ್ಳರು ಮನೆಯ ಬೀಗ ಮುರಿದು ಒಳನುಗ್ಗಿದ್ದರು. ಮನೆಯ ಕಪಾಟು ಒಡೆದು ನೋಡಿದಾಗ, ಚಿನ್ನದ ಆಭರಣಗಳ ರಾಶಿಯೇ ಸಿಕ್ಕಿತ್ತು. ಆರೋಪಿಗಳು ಸದ್ದಿಲ್ಲದೆ, ಬಂದಿದ್ದ ಕಾರಿನಲ್ಲೇ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು.





ಕೃತ್ಯದ ಬಗ್ಗೆ ಮುಲ್ಕಿ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡಿದ್ದ ಮಂಗಳೂರು ಸಿಸಿಬಿ ಪೊಲೀಸರು ನಾಲ್ವರ ಪೈಕಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ಮಾಳ ಗ್ರಾಮದ ನಿವಾಸಿ ಗಣೇಶ್ ನಾಯ್ಕ್ (26) ಮತ್ತು ವಿರಾಜಪೇಟೆ ತಾಲೂಕಿನ ಸಿದ್ಧಾಪುರ ಗ್ರಾಮದ ನಿವಾಸಿ ರಂಜಿತ್ ಕೆ.ಆರ್.(26) ಬಂಧಿತರು. ಇವರನ್ನು ಬೆಂಗಳೂರಿನಿಂದ ವಶಕ್ಕೆ ಪಡೆದಿದ್ದು ಒಂದು ಕೆಜಿ ಐದು ಗ್ರಾಮ್ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ ಸುಮಾರು 56.50 ಲಕ್ಷ ಆಗಬಹುದು ಎಂದು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ.
ಕಳವು ಸಂದರ್ಭದಲ್ಲಿ ಐಕಳ ಹರೀಶ್ ಶೆಟ್ಟಿಯವರು ಎರಡು ಕೆಜಿ ಚಿನ್ನ ಕಳವು ಆಗಿರಬಹುದು ಎಂದು ದೂರಿನಲ್ಲಿ ತಿಳಿಸಿದ್ದರು. ಇನ್ನಿಬ್ಬರು ಆರೋಪಿಗಳು ಕೇರಳದಲ್ಲಿ ಅವಿತುಕೊಂಡಿದ್ದಾರೆ ಎನ್ನಲಾಗುತ್ತಿದ್ದು ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಆರೋಪಿ ಗಣೇಶ್ ನಾಯ್ಕ್ ಮತ್ತು ಇತರ ಇಬ್ಬರು ಆರೋಪಿಗಳು ಮಂಗಳೂರಿನ ಕುಲಶೇಖರದ ಕೆಳರಾಯಿ ಚರ್ಚ್ ರಸ್ತೆಯಲ್ಲಿನ ಮನೆಯ ಬಾಗಿಲು ಒಡೆದು ಬೆಲೆಬಾಳುವ ವಸ್ತುಗಳನ್ನು ಕಳವು ನಡೆಸಿದ್ದರು. ಹಾಗೂ ಮಾರುತಿ ಬ್ರೀಜಾ ಕಾರನ್ನು ಕಳವು ಮಾಡಿದ್ದರು. ಪೊಲೀಸರ ತನಿಖೆಯಲ್ಲಿ ಈ ಕೃತ್ಯ ಕೂಡ ಪತ್ತೆಯಾಗಿದೆ. ಗಣೇಶ್ ನಾಯ್ಕ್ ವಿರುದ್ಧ ಈ ಹಿಂದೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು ಆನಂತರ ಅಲ್ಲಿನ ಜೈಲಿನಲ್ಲಿದ್ದಾಗ ಇತರ ಆರೋಪಿಗಳ ಸಂಪರ್ಕ ಆಗಿತ್ತು. ಜೈಲಿನಿಂದ ಹೊರಬಂದ ಬಳಿಕ ಉದ್ಯಮಿ ಹರೀಶ್ ಶೆಟ್ಟಿ ಮನೆಯಿಂದ ಕಳವಿಗೆ ಸಂಚು ನಡೆಸಿದ್ದರು. ಹರೀಶ್ ಶೆಟ್ಟಿ ಮನೆಯಲ್ಲಿ ವಾಚ್ ಮನ್ ಗಳಿದ್ದು ಮನೆಯ ಹಿಂಭಾಗದ ಕಟ್ಟಡದಲ್ಲಿ ಮಲಗಿದ್ದರು. ಕಳ್ಳರು ನುಗ್ಗಿ ಚಿನ್ನಾಭರಣ ಹೊತ್ತೊಯ್ದಿದ್ದು ಅವರಿಗೆ ತಿಳಿಯಲೇ ಇಲ್ಲ.
Robbery of Gold at Aikala Harish Shetty house in Mangalore, two arrested by CCB police, 1 kilo gold recovered. The arrested have been identified as Ganesh Naik, Ranjith.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm