ಬ್ರೇಕಿಂಗ್ ನ್ಯೂಸ್
16-06-23 06:40 pm HK News Desk ಕ್ರೈಂ
ತುಮಕೂರು, ಜೂನ್ 16: ಅನ್ಯಜಾತಿಯ ಯುವಕನನ್ನು ಪ್ರೀತಿಸಿ ಓಡಿಹೋಗಿದ್ದ ಕಾರಣಕ್ಕೆ ಅಪ್ರಾಪ್ತ ಬಾಲಕಿಯನ್ನು ಹೆತ್ತವರೇ ಕೊಲೆಗೈದು ಸುಟ್ಟು ಹಾಕಿದ ಪ್ರಕರಣ ತುಮಕೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಮರ್ಯಾದೆಗೆ ಅಂಜಿ ಮಗಳನ್ನೇ ಕೊಲೆಗೈದಿದ್ದಲ್ಲದೆ, ಆತ್ಮಹತ್ಯೆ ಎಂದು ಬಿಂಬಿಸಿದ್ದ ಕೃತ್ಯ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಗುಬ್ಬಿ ತಾಲೂಕಿನ ಚೇಳೂರು ಹೋಬಳಿಯ ಚಿಕ್ಕಹೆಡಿಗೆಹಳ್ಳಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಕೃತ್ಯ ಎಸಗಿರುವ ಮೂವರನ್ನು ಬಂಧಿಸಿದ್ದಾರೆ. ನೇತ್ರಾವತಿ (17) ಕೊಲೆಯಾದ ಅಪ್ರಾಪ್ತ ಬಾಲಕಿಯಾಗಿದ್ದು, ಆಕೆಯ ತಂದೆ ಪರಶುರಾಮ, ಸಹೋದರ ಶಿವರಾಜು, ಚಿಕ್ಕಪ್ಪ ತುಕಾರಾಂ ಅವರನ್ನು ಬಂಧಿಸಿದ್ದಾರೆ.
ನೇತ್ರಾವತಿ ಶಿರಾ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಅದೇ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಕಾಂ ಓದುತ್ತಿದ್ದ ಯುವಕ ಕುಮಾರ್ (21) ಎಂಬಾತನನ್ನ ಪ್ರೀತಿಸಿದ್ದು ಜೂನ್ 7 ರಂದು ಮನೆ ಬಿಟ್ಟು ಓಡಿಹೋಗಿದ್ದರು. ಮಾರನೇ ದಿನ ಇಬ್ಬರನ್ನೂ ಕರೆಸಿ ಎರಡು ಕುಟುಂಬಗಳ ಸಮ್ಮುಖದಲ್ಲಿ ರಾಜಿ ಪಂಚಾಯ್ತಿ ಮಾಡಿಸಲಾಗಿತ್ತು. ಬಾಲಕಿಯ ಸಹವಾಸಕ್ಕೆ ಬಾರದಂತೆ ಯುವಕನಿಗೆ ಎಚ್ಚರಿಕೆಯನ್ನೂ ನೀಡಲಾಗಿತ್ತು.
ಆನಂತರ, ಬಾಲಕಿ ನೇತ್ರಾವತಿಯನ್ನು ಹೆತ್ತವರು ತಮ್ಮ ಮನೆಗೆ ಕರೆತಂದಿದ್ದರು. ಆದರೆ, ಅದೇ ದಿನ ರಾತ್ರಿ ಬಾಲಕಿಯನ್ನು ತಂದೆ, ಸಹೋದರ ಹಾಗೂ ಚಿಕ್ಕಪ್ಪ ಸೇರಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಮಗಳು ವಿಷ ಕುಡಿದು ಆತ್ಮಹತ್ಯೆ ಮಾಡಿದ್ದಾಳೆಂದು ಬಿಂಬಿಸಿದ್ದ ಕುಟುಂಬಸ್ಥರು, ಕೊಲೆಯ ಕುರುಹು ಸಿಗದಂತೆ ಮೃತದೇಹವನ್ನ ಸುಟ್ಟುಹಾಕಿದ್ದರು. ಆದರೆ ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಶಿರಾ ಡಿವೈಎಸ್ ಪಿ ನವೀನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ತನಿಖೆ ನಡೆಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಮೂವರನ್ನು ಬಂಧಿಸಿರುವ ಚೇಳೂರು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
A minor girl was strangled to death by her father, brother and uncle in Karnataka's Tumakuru district in a case of honour killing. The tragic incident occurred after the 17-year-old victim, Netravati's family became enraged that she was in love with a boy belonging to a Scheduled Caste.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm