ಬ್ರೇಕಿಂಗ್ ನ್ಯೂಸ್
16-06-23 06:40 pm HK News Desk ಕ್ರೈಂ
ತುಮಕೂರು, ಜೂನ್ 16: ಅನ್ಯಜಾತಿಯ ಯುವಕನನ್ನು ಪ್ರೀತಿಸಿ ಓಡಿಹೋಗಿದ್ದ ಕಾರಣಕ್ಕೆ ಅಪ್ರಾಪ್ತ ಬಾಲಕಿಯನ್ನು ಹೆತ್ತವರೇ ಕೊಲೆಗೈದು ಸುಟ್ಟು ಹಾಕಿದ ಪ್ರಕರಣ ತುಮಕೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಮರ್ಯಾದೆಗೆ ಅಂಜಿ ಮಗಳನ್ನೇ ಕೊಲೆಗೈದಿದ್ದಲ್ಲದೆ, ಆತ್ಮಹತ್ಯೆ ಎಂದು ಬಿಂಬಿಸಿದ್ದ ಕೃತ್ಯ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಗುಬ್ಬಿ ತಾಲೂಕಿನ ಚೇಳೂರು ಹೋಬಳಿಯ ಚಿಕ್ಕಹೆಡಿಗೆಹಳ್ಳಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಕೃತ್ಯ ಎಸಗಿರುವ ಮೂವರನ್ನು ಬಂಧಿಸಿದ್ದಾರೆ. ನೇತ್ರಾವತಿ (17) ಕೊಲೆಯಾದ ಅಪ್ರಾಪ್ತ ಬಾಲಕಿಯಾಗಿದ್ದು, ಆಕೆಯ ತಂದೆ ಪರಶುರಾಮ, ಸಹೋದರ ಶಿವರಾಜು, ಚಿಕ್ಕಪ್ಪ ತುಕಾರಾಂ ಅವರನ್ನು ಬಂಧಿಸಿದ್ದಾರೆ.
ನೇತ್ರಾವತಿ ಶಿರಾ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಅದೇ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಕಾಂ ಓದುತ್ತಿದ್ದ ಯುವಕ ಕುಮಾರ್ (21) ಎಂಬಾತನನ್ನ ಪ್ರೀತಿಸಿದ್ದು ಜೂನ್ 7 ರಂದು ಮನೆ ಬಿಟ್ಟು ಓಡಿಹೋಗಿದ್ದರು. ಮಾರನೇ ದಿನ ಇಬ್ಬರನ್ನೂ ಕರೆಸಿ ಎರಡು ಕುಟುಂಬಗಳ ಸಮ್ಮುಖದಲ್ಲಿ ರಾಜಿ ಪಂಚಾಯ್ತಿ ಮಾಡಿಸಲಾಗಿತ್ತು. ಬಾಲಕಿಯ ಸಹವಾಸಕ್ಕೆ ಬಾರದಂತೆ ಯುವಕನಿಗೆ ಎಚ್ಚರಿಕೆಯನ್ನೂ ನೀಡಲಾಗಿತ್ತು.
ಆನಂತರ, ಬಾಲಕಿ ನೇತ್ರಾವತಿಯನ್ನು ಹೆತ್ತವರು ತಮ್ಮ ಮನೆಗೆ ಕರೆತಂದಿದ್ದರು. ಆದರೆ, ಅದೇ ದಿನ ರಾತ್ರಿ ಬಾಲಕಿಯನ್ನು ತಂದೆ, ಸಹೋದರ ಹಾಗೂ ಚಿಕ್ಕಪ್ಪ ಸೇರಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಮಗಳು ವಿಷ ಕುಡಿದು ಆತ್ಮಹತ್ಯೆ ಮಾಡಿದ್ದಾಳೆಂದು ಬಿಂಬಿಸಿದ್ದ ಕುಟುಂಬಸ್ಥರು, ಕೊಲೆಯ ಕುರುಹು ಸಿಗದಂತೆ ಮೃತದೇಹವನ್ನ ಸುಟ್ಟುಹಾಕಿದ್ದರು. ಆದರೆ ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಶಿರಾ ಡಿವೈಎಸ್ ಪಿ ನವೀನ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ತನಿಖೆ ನಡೆಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಮೂವರನ್ನು ಬಂಧಿಸಿರುವ ಚೇಳೂರು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
A minor girl was strangled to death by her father, brother and uncle in Karnataka's Tumakuru district in a case of honour killing. The tragic incident occurred after the 17-year-old victim, Netravati's family became enraged that she was in love with a boy belonging to a Scheduled Caste.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm