ಬ್ರೇಕಿಂಗ್ ನ್ಯೂಸ್
16-06-23 10:11 pm Udupi Correspondent ಕ್ರೈಂ
ಉಡುಪಿ, ಜೂನ್ 16: ಜಿಲ್ಲಾ ಎಸ್.ಪಿ ಅಕ್ಷಯ್ ಮಚಿಂದ್ರ ಹಾಕೆ ಅವರ ಮಾರ್ಗದರ್ಶನದಲ್ಲಿ ಮಣಿಪಾಲ ಪಿಐ ದೇವರಾಜ್ ಟಿ.ವಿ ನೇತೃತ್ವದ ವಿಶೇಷ ತಂಡ ಡ್ರಗ್ಸ್ ವಿರುದ್ಧದ ಕಾರ್ಯಾಚರಣೆ ಮುಂದುವರೆಸಿದ್ದು ಜೂನ್ 16 ರಂದು ಮಣಿಪಾಲ ಠಾಣಾ ವ್ಯಾಪ್ತಿಯ ಹೆರ್ಗ ಗ್ರಾಮದ ಈಶ್ವರ ನಗರದ ಅಪಾರ್ಟ್ಮೆಂಟ್ ಒಂದರ ಬಳಿ ಸಾರ್ವಜನಿಕ ರಸ್ತೆಯಲ್ಲಿ ನಿಷೇಧಿತ ಮಾದಕ ದ್ರವ್ಯ ಮೆಥಾಂಪೆಟಮೆನ್ ನನ್ನು ಮಾರಾಟ ಮಾಡುವ ಪ್ರಯತ್ನದಲ್ಲಿದ್ದ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಬಂಧಿತರು ಕೇರಳ ಮೂಲದ ನಿಭೀಷ್ (23) ಮತ್ತು ಅಮಲ್(22) ಎನ್ನುವವರಾಗಿದ್ದು,ಇಬ್ಬರೂ ಕಾನೂನು ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಇನ್ನೊಬ್ಬ ಆರೋಪಿ ಅಪ್ಸಿನ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ.
ಬಂಧಿತ ವಿದ್ಯಾರ್ಥಿಗಳ ಬಳಿ 35 ಸಾವಿರ ರೂ. ಮೌಲ್ಯದ 7.3 ಗ್ರಾಂ ಮೆಥಾಂಪೆಟಮೆನ್ ಮಾದಕ ದ್ರವ್ಯ ಪತ್ತೆಯಾಗಿದ್ದು, ಜತೆಗೆ 1.25 ಲಕ್ಷ ಮೌಲ್ಯದ ಡ್ಯೂಕ್ ಬೈಕ್ ಹಾಗೂ 1 ಲಕ್ಷ ಮೌಲ್ಯದ 2 ಮೊಬೈಲ್ ಫೋನ್ಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಮಣಿಪಾಲದಲ್ಲಿ ಬುಧವಾರ ವಿದ್ಯಾರ್ಥಿ ಸೇರಿದಂತೆ ಮೂರು ಜನ ಗಾಂಜಾ ಪೆಡ್ಲರ್ಗಳನ್ನು ಬಂಧಿಸಿ ಸುಮಾರು 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿತ್ತು.
Under the guidance of Udupi SP Akshay Machindra Hakay, a police team led by Manipal police inspector Devaraj T V has intensified its crackdown on drug-related activities. On Friday, June 16, the team apprehended two law students who were attempting to sell MDMA drugs near Ishwar Nagar apartment in Herga village.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm