ಬ್ರೇಕಿಂಗ್ ನ್ಯೂಸ್
16-06-23 11:00 pm Mangalore Correspondent ಕ್ರೈಂ
ಮಂಗಳೂರು, ಜೂನ್ 16: ನಗರದಲ್ಲಿ ಮನೆಗಳ್ಳತನ ಘಟನೆ ನಡೆದ ಕೇವಲ ಮೂರು ಗಂಟೆಯೊಳಗೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳಿಂದ ಕದ್ದ ಮಾಲು ಹಾಗೂ ನಗದನ್ನು ವಶಕ್ಕೆ ಪಡೆದಿದ್ದಾರೆ.
ಅತ್ತಾವರದ ಕೆಎಂಸಿ ಆಸ್ಪತ್ರೆ ಬಳಿಯ ಬ್ರಿಜೇಶ್ ಅಪಾರ್ಟ್ಮೆಂಟ್ ಕಟ್ಟಡದ 2 ಅಪಾರ್ಟ್ಮೆಂಟ್ಗಳಲ್ಲಿ ಜೂ.15ರಂದು ಕಳ್ಳತನ ನಡೆದಿರುವ ಬಗ್ಗೆ ಮಂಗಳೂರು ದಕ್ಷಿಣ ಠಾಣೆ ಪೊಲೀಸರಿಗೆ ದೂರು ನೀಡಲಾಗಿತ್ತು. ಅದೇ ದಿನ ಸಂಜೆ ಪಣಂಬೂರು ಬೀಚ್ ಬಳಿ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ವರ್ತಿಸುತ್ತಿದ್ದರು. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬ್ರಿಜೇಶ್ ಅಪಾರ್ಟ್ಮೆಂಟ್ನ ಎರಡು ನಿವಾಸಗಳಿಗೆ ಕನ್ನ ಹಾಕಿ ದೆಹಲಿಗೆ ಪರಾರಿಯಾಗಲು ಯೋಜಿಸುತ್ತಿರುವುದು ತಿಳಿದು ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರನ್ನು ದೆಹಲಿಯ ಮೊಹಮ್ಮದ್ ಆಶಿಫ್ ಅಲಿಯಾಸ್ ಆಶಿಫ್ (23) ಮತ್ತು ಶೇಖ್ ಮೈದುಲ್ (25) ಹಾಗೂ ಪಶ್ಚಿಮ ಬಂಗಾಳದ ರಫೀಕ್ ಖಾನ್ (24) ಮತ್ತು ದೆಹಲಿಯ ವಕೀಲ ಅಹಮದ್ (34) ಎಂದು ಗುರುತಿಸಲಾಗಿದೆ.
ಕಳ್ಳತನ ಮಾಡಿದ ಚಿನ್ನಾಭರಣ ಮತ್ತು ನಗದು, ಕಟ್ಟರ್ಗಳು, ಸ್ಕ್ರೂಡ್ರೈವರ್ಗಳು ಮತ್ತು ಚೂಪಾದ ಕಬ್ಬಿಣದ ರಾಡ್ ಸೇರಿದಂತೆ ಕೃತ್ಯಕ್ಕೆ ಬಳಸಲಾದ ಉಪಕರಣಗಳು, ಏಳು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇಲ್ಲದ, ಬೀಗ ಹಾಕಿರುವ ಮನೆಗಳನ್ನು ಗುರಿಯಾಗಿಸಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
Mangalore, Attavara house robbery, police nab thieves in just three hours of time. Four native of Delhi have been arrested. The arrested were spotted from Panambur beach in Mangalore.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm