ಬ್ರೇಕಿಂಗ್ ನ್ಯೂಸ್
21-06-23 11:10 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 21: ನಗರದ ಕಮ್ಮನಹಳ್ಳಿ ಎಂಬಲ್ಲಿ ಸೈಂಟ್ ಪಿಯುಸ್ ಚರ್ಚ್ ಆವರಣಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಹಾನಿಯೆಸಗಿದ ಘಟನೆ ನಡೆದಿದ್ದು ಈ ಸಂಬಂಧ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಲಿಂಗರಾಜಪುರಂ ನಿವಾಸಿ ಟಾಮ್ ಮ್ಯಾಥ್ಯೂ ಎಂದು ಗುರುತಿಸಲಾಗಿದೆ.
ಬುಧವಾರ ಬೆಳ್ಳಂಬೆಳಗ್ಗೆ ಚರ್ಚ್ ನಲ್ಲಿ ದಾಳಿಯೆಸಗಿದ ಘಟನೆ ನಡೆದಿತ್ತು. ಚರ್ಚ್ ಸಿಬಂದಿ ಬಂದು ನೋಡಿದಾಗ, ಒಳಗಿದ್ದ ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿದ್ದವು. ಪ್ರಮುಖ ದ್ವಾರದ ಬಾಗಿಲನ್ನು ಒಡೆದು ಹಾಕಲಾಗಿತ್ತು. ಕೂಡಲೇ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ಸಿಸಿಟಿವಿ ಆಧರಿಸಿ ತನಿಖೆ ನಡೆಸಿದ್ದು ಯುವಕನ ಕೃತ್ಯ ಬೆಳಕಿಗೆ ಬಂದಿದೆ.


ಪೊಲೀಸರ ಬಂಧನ ಸಂದರ್ಭದಲ್ಲಿ ಆರೋಪಿ ಮ್ಯಾಥ್ಯು ಕುಡಿದ ಮತ್ತಿನಲ್ಲಿದ್ದ. ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದ ಟಾಮ್, ಅದೇ ಕಾರಣಕ್ಕೆ ಮಾನಸಿಕ ಸ್ಥಿಮಿತ ಕಳಕೊಂಡಿದ್ದ ಎನ್ನಲಾಗುತ್ತಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಆತನ ಕೈಯಲ್ಲಿದ್ದ ಸುತ್ತಿಗೆಯನ್ನು ವಶಕ್ಕೆ ಪಡೆದಿದ್ದಾರೆ. ಸುತ್ತಿಗೆಯಿಂದ ಬಡಿದು ಕೃತ್ಯ ಎಸಗಿರುವ ಶಂಕೆಯಿದೆ.

ಚರ್ಚ್ ಒಳಗೆ ಕ್ಯಾಂಡಲ್ ಉರಿಸುವ ಸ್ಟಾಂಡ್ ಸೇರಿದಂತೆ ಪವಿತ್ರ ವಸ್ತುಗಳನ್ನು ಹಾನಿ ಮಾಡಲಾಗಿದೆ. ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದು ಕೃತ್ಯಕ್ಕೆ ಬೇರಾವುದೇ ದುರುದ್ದೇಶ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Pius catholic Church vandalised at Lingarajapuram in Bangalore, Christian youth arrested. A 29-year-old individual named Tom Mathew, a resident of Lingarajapuram, has been apprehended in relation to the vandalism incident that occurred at St Pius X Church in Kammanahalli, Bengaluru, in the early hours of Wednesday.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm