ಬ್ರೇಕಿಂಗ್ ನ್ಯೂಸ್
21-06-23 11:10 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 21: ನಗರದ ಕಮ್ಮನಹಳ್ಳಿ ಎಂಬಲ್ಲಿ ಸೈಂಟ್ ಪಿಯುಸ್ ಚರ್ಚ್ ಆವರಣಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಹಾನಿಯೆಸಗಿದ ಘಟನೆ ನಡೆದಿದ್ದು ಈ ಸಂಬಂಧ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಲಿಂಗರಾಜಪುರಂ ನಿವಾಸಿ ಟಾಮ್ ಮ್ಯಾಥ್ಯೂ ಎಂದು ಗುರುತಿಸಲಾಗಿದೆ.
ಬುಧವಾರ ಬೆಳ್ಳಂಬೆಳಗ್ಗೆ ಚರ್ಚ್ ನಲ್ಲಿ ದಾಳಿಯೆಸಗಿದ ಘಟನೆ ನಡೆದಿತ್ತು. ಚರ್ಚ್ ಸಿಬಂದಿ ಬಂದು ನೋಡಿದಾಗ, ಒಳಗಿದ್ದ ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿದ್ದವು. ಪ್ರಮುಖ ದ್ವಾರದ ಬಾಗಿಲನ್ನು ಒಡೆದು ಹಾಕಲಾಗಿತ್ತು. ಕೂಡಲೇ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ಸಿಸಿಟಿವಿ ಆಧರಿಸಿ ತನಿಖೆ ನಡೆಸಿದ್ದು ಯುವಕನ ಕೃತ್ಯ ಬೆಳಕಿಗೆ ಬಂದಿದೆ.


ಪೊಲೀಸರ ಬಂಧನ ಸಂದರ್ಭದಲ್ಲಿ ಆರೋಪಿ ಮ್ಯಾಥ್ಯು ಕುಡಿದ ಮತ್ತಿನಲ್ಲಿದ್ದ. ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದ ಟಾಮ್, ಅದೇ ಕಾರಣಕ್ಕೆ ಮಾನಸಿಕ ಸ್ಥಿಮಿತ ಕಳಕೊಂಡಿದ್ದ ಎನ್ನಲಾಗುತ್ತಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಆತನ ಕೈಯಲ್ಲಿದ್ದ ಸುತ್ತಿಗೆಯನ್ನು ವಶಕ್ಕೆ ಪಡೆದಿದ್ದಾರೆ. ಸುತ್ತಿಗೆಯಿಂದ ಬಡಿದು ಕೃತ್ಯ ಎಸಗಿರುವ ಶಂಕೆಯಿದೆ.

ಚರ್ಚ್ ಒಳಗೆ ಕ್ಯಾಂಡಲ್ ಉರಿಸುವ ಸ್ಟಾಂಡ್ ಸೇರಿದಂತೆ ಪವಿತ್ರ ವಸ್ತುಗಳನ್ನು ಹಾನಿ ಮಾಡಲಾಗಿದೆ. ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದು ಕೃತ್ಯಕ್ಕೆ ಬೇರಾವುದೇ ದುರುದ್ದೇಶ ಇದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
Pius catholic Church vandalised at Lingarajapuram in Bangalore, Christian youth arrested. A 29-year-old individual named Tom Mathew, a resident of Lingarajapuram, has been apprehended in relation to the vandalism incident that occurred at St Pius X Church in Kammanahalli, Bengaluru, in the early hours of Wednesday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm