ಬ್ರೇಕಿಂಗ್ ನ್ಯೂಸ್
23-06-23 01:33 pm HK News Desk ಕ್ರೈಂ
ಸೂರತ್, ಜೂನ್ 23: ಚಲಿಸುತ್ತಿರುವ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಆಕೆ ಹಾಗೂ ಜೊತೆಗಿದ್ದ ವ್ಯಕ್ತಿಯನ್ನು ರೈಲಿನಿಂದ ಹೊರಕ್ಕೆ ತಳ್ಳಿದ ಘಟನೆ ಗುಜರಾತಿನ ಸೂರತ್ ನಲ್ಲಿ ನಡೆದಿದೆ.
ಜೂನ್ 19ರಂದು ರಾತ್ರಿ ಮುಜಾಫರ್ಪುರದಿಂದ ಸೂರತ್ ತೆರಳುತ್ತಿದ್ದ ಸೂರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಮಹಿಳೆ ತನ್ನ ಸಂಬಂಧಿಕರೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಮಹಿಳೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಐದು ಮಂದಿ ಅಪರಿಚಿತರು ಮಹಿಳೆಯ ಪಕ್ಕಕ್ಕೆ ಬಂದು ಆಕೆಯ ಫೋಟೋಗಳನ್ನು ತೆಗೆದಿದ್ದಾರೆ. ಈ ವೇಳೆ ಮಹಿಳೆ ಹಾಗೂ ಗುಂಪಿನೊಂದಿಗೆ ವಾಗ್ವಾದ ನಡೆದಿದೆ. ಮಹಿಳೆಯೊಂದಿಗಿದ್ದ ಸಂಬಂಧಿ ಪ್ರಶ್ನೆ ಮಾಡಿದಾಗ ಅವರ ಮೇಲೆ ಹಲ್ಲೆಯನ್ನೂ ನಡೆಸಲಾಗಿದೆ. ಇದರ ಬಳಿಕ ಮಹಿಳೆ ತನ್ನ ಜಾಗವನ್ನು ಬದಲಾಯಿಸಿದ್ದರು. ಆದರೆ ಆರೋಪಿಗಳು ಹಿಂಬಾಲಿಸಿ ಆಕೆಯ ಸೀರೆಯನ್ನು ಎಳೆದು ಕಿರುಕುಳ ನೀಡಿದ್ದಾರೆ. ಬಟ್ಟೆಯನ್ನು ಬಲವಂತವಾಗಿ ಎಳೆದು ಚಲಿಸುತ್ತಿರುವ ರೈಲಿನಿಂದಲೇ ತಳ್ಳಿದ್ದಾರೆ. ಅರೆ ಬೆತ್ತಲೆ ಮಾಡಿ ಮಹಿಳೆ ಹಾಗೂ ಆಕೆಯ ಸಂಬಂಧಿಯನ್ನು ರೈಲಿನಿಂದ ಹೊರಕ್ಕೆ ತಳ್ಳಿದ್ದಾರೆ.

ಅಂದು ರಾತ್ರಿ ಗಾಯಾಳುಗಳು ತಾವು ಹೊರಕ್ಕೆ ಬಿದ್ದಿದ್ದ ಬರೋಡಿ ಗ್ರಾಮದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು, ಅವರನ್ನು ಸ್ಥಳೀಯ ಗ್ರಾಮಸ್ಥರು ಮಂಗಳವಾರ ಬೆಳಗ್ಗೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಬಗ್ಗೆ ಸಂತ್ರಸ್ತ ಮಹಿಳೆ ಬಿಲುವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಹಿಳೆಯ ಹೇಳಿಕೆ ಆಧಾರದಲ್ಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
A woman and her relative were forcibly thrown off a moving train by five men in Gwalior on Monday night, police said on Thursday. The incident, triggered by attempts of sexual assault, occurred on the Surat Express train en route from Muzaffarpur to Surat in Gujarat.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 11:44 am
HK News Desk
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm