ಬ್ರೇಕಿಂಗ್ ನ್ಯೂಸ್
24-06-23 05:16 pm HK News Desk ಕ್ರೈಂ
ಇಂದೋರ್, ಜೂನ್ 24: ಮಧ್ಯಪ್ರದೇಶದ ಮಹಿಳೆಯೊಬ್ಬರಿಗೆ ಕರ್ನಾಟಕದ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ವ್ಯಕ್ತಿಯೊಬ್ಬ ತಾನು ಮುಸ್ಲಿಂ ಎಂಬುದನ್ನು ಮುಚ್ಚಿಟ್ಟು ಮದುವೆಯಾಗುವ ಭರವಸೆ ನೀಡಿ, ಲೈಂಗಿಕವಾಗಿ ಬಳಸಿಕೊಂಡು ದುರ್ಬಳಕೆ ಮಾಡಿಕೊಂಡ ಆರೋಪ ಕೇಳಿಬಂದಿದೆ.
ಈ ಬಗ್ಗೆ ಮಧ್ಯಪ್ರದೇಶದ ದಮೋಹ್ ಜಿಲ್ಲೆಯಲ್ಲಿ ಮಹಿಳೆ ದೂರು ನೀಡಿದ್ದಾರೆ. ಈ ಸಂಬಂಧ ಕರ್ನಾಟಕದ ಕಾಂಗ್ರೆಸ್ ಸರಕಾರವನ್ನು ಮಧ್ಯಪ್ರದೇಶ ಸರಕಾರ ತರಾಟೆ ತೆಗೆದುಕೊಂಡಿದೆ. ದಮೋಹ್ ಪ್ರದೇಶದ ನಿವಾಸಿ ಮಹಿಳೆ ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದಾಗ ಉಮರ್ ಫಾರುಕ್ ಎಂಬಾತ ಪರಿಚಯವಾಗಿದ್ದ. ಆತ ತನ್ನ ಹೆಸರನ್ನು ರಾಜೀವ್ ಎಂದು ಹೇಳಿಕೊಂಡಿದ್ದು ಮದುವೆಯಾಗುವ ಭರವಸೆ ನೀಡಿ, ಮಹಿಳೆಯೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದ.

ಬಳಿಕ ಆ ವ್ಯಕ್ತಿ ಮುಸ್ಲಿಂ ಎಂದು ಮಹಿಳೆಯ ಅರಿವಿಗೆ ಬಂದಿತ್ತು. ಆದಾಗ್ಯೂ, ತನ್ನನ್ನು ಮದುವೆ ಆಗುವಂತೆ ಮಹಿಳೆ ಕೇಳಿಕೊಂಡಿದ್ದಾಳೆ. ಆದರೆ ಯುವಕ ಮದುವೆಯಾಗಲ್ಲ ಎಂದಿದ್ದಲ್ಲದೆ, ತನ್ನಲ್ಲಿ ಖಾಸಗಿ ಚಿತ್ರ, ವೀಡಿಯೋಗಳಿದೆಯೆಂದು ಹೇಳಿ ಬ್ಲಾಕ್ಮೇಲ್ ಮಾಡಿದ್ದಲ್ಲದೆ ಜಾಲತಾಣದಲ್ಲಿ ಹರಿಯ ಬಿಡುವುದಾಗಿ ಹೇಳಿ ಬೆದರಿಕೆ ಒಡ್ಡಿದ್ದಾನೆ. ಮಹಿಳೆ ತನಗಾದ ಅನ್ಯಾಯದ ಬಗ್ಗೆ ದಮೋಹ್ನಲ್ಲಿ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಪ್ರಕರಣದ ತನಿಖೆಗಾಗಿ ದಮೋಹ್ ಪೊಲೀಸರು ಕರ್ನಾಟಕಕ್ಕೆ ಬಂದಿದ್ದು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.


ಘಟನೆ ಬಗ್ಗೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ ಮಿಶ್ರಾ ಕಿಡಿಕಾರಿದ್ದಾರೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶದಲ್ಲಿ ನಾನೂ ಮಹಿಳೆ, ನಮಗೆ ಹೋರಾಡುವುದು ಗೊತ್ತಿದೆ ಎಂದು ಹೇಳಿದ್ದರು. ಈಗ ನಮ್ಮ ರಾಜ್ಯದ ಹೆಣ್ಣು ಮಗಳಿಗೆ ಅನ್ಯಾಯವಾಗಿದೆ. ಆರೋಪಿಯನ್ನು ಅವರದ್ದೇ ಪಕ್ಷ ಅಧಿಕಾರದಲ್ಲಿರುವ ಸರಕಾರ ಹುಡುಕಿಕೊಡಬೇಕು. ಅವನ ಲವ್ ಜಿಹಾದ್ ಮದವನ್ನು ನಾವು ಇಳಿಸುತ್ತೇವೆ ಎಂದು ಕಿಡಿ ಕಾರಿದ್ದಾರೆ.
A woman from Damoh in Madhya Pradesh has alleged that a Muslim man in Bengaluru sexually exploited her, after which police registered a case, while the ruling Bharatiya Janata Party taunted the Congress that is in power in Karnataka. The woman has lodged a complaint in Damoh on Thursday evening against one Omar Farooq and a police team from here is leaving for Karnataka immediately to probe the case, MP Home Minister Narottam Mishra told reporters in Bhopal.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm