ಬ್ರೇಕಿಂಗ್ ನ್ಯೂಸ್
24-06-23 05:16 pm HK News Desk ಕ್ರೈಂ
ಇಂದೋರ್, ಜೂನ್ 24: ಮಧ್ಯಪ್ರದೇಶದ ಮಹಿಳೆಯೊಬ್ಬರಿಗೆ ಕರ್ನಾಟಕದ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ವ್ಯಕ್ತಿಯೊಬ್ಬ ತಾನು ಮುಸ್ಲಿಂ ಎಂಬುದನ್ನು ಮುಚ್ಚಿಟ್ಟು ಮದುವೆಯಾಗುವ ಭರವಸೆ ನೀಡಿ, ಲೈಂಗಿಕವಾಗಿ ಬಳಸಿಕೊಂಡು ದುರ್ಬಳಕೆ ಮಾಡಿಕೊಂಡ ಆರೋಪ ಕೇಳಿಬಂದಿದೆ.
ಈ ಬಗ್ಗೆ ಮಧ್ಯಪ್ರದೇಶದ ದಮೋಹ್ ಜಿಲ್ಲೆಯಲ್ಲಿ ಮಹಿಳೆ ದೂರು ನೀಡಿದ್ದಾರೆ. ಈ ಸಂಬಂಧ ಕರ್ನಾಟಕದ ಕಾಂಗ್ರೆಸ್ ಸರಕಾರವನ್ನು ಮಧ್ಯಪ್ರದೇಶ ಸರಕಾರ ತರಾಟೆ ತೆಗೆದುಕೊಂಡಿದೆ. ದಮೋಹ್ ಪ್ರದೇಶದ ನಿವಾಸಿ ಮಹಿಳೆ ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದಾಗ ಉಮರ್ ಫಾರುಕ್ ಎಂಬಾತ ಪರಿಚಯವಾಗಿದ್ದ. ಆತ ತನ್ನ ಹೆಸರನ್ನು ರಾಜೀವ್ ಎಂದು ಹೇಳಿಕೊಂಡಿದ್ದು ಮದುವೆಯಾಗುವ ಭರವಸೆ ನೀಡಿ, ಮಹಿಳೆಯೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದ.
ಬಳಿಕ ಆ ವ್ಯಕ್ತಿ ಮುಸ್ಲಿಂ ಎಂದು ಮಹಿಳೆಯ ಅರಿವಿಗೆ ಬಂದಿತ್ತು. ಆದಾಗ್ಯೂ, ತನ್ನನ್ನು ಮದುವೆ ಆಗುವಂತೆ ಮಹಿಳೆ ಕೇಳಿಕೊಂಡಿದ್ದಾಳೆ. ಆದರೆ ಯುವಕ ಮದುವೆಯಾಗಲ್ಲ ಎಂದಿದ್ದಲ್ಲದೆ, ತನ್ನಲ್ಲಿ ಖಾಸಗಿ ಚಿತ್ರ, ವೀಡಿಯೋಗಳಿದೆಯೆಂದು ಹೇಳಿ ಬ್ಲಾಕ್ಮೇಲ್ ಮಾಡಿದ್ದಲ್ಲದೆ ಜಾಲತಾಣದಲ್ಲಿ ಹರಿಯ ಬಿಡುವುದಾಗಿ ಹೇಳಿ ಬೆದರಿಕೆ ಒಡ್ಡಿದ್ದಾನೆ. ಮಹಿಳೆ ತನಗಾದ ಅನ್ಯಾಯದ ಬಗ್ಗೆ ದಮೋಹ್ನಲ್ಲಿ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಪ್ರಕರಣದ ತನಿಖೆಗಾಗಿ ದಮೋಹ್ ಪೊಲೀಸರು ಕರ್ನಾಟಕಕ್ಕೆ ಬಂದಿದ್ದು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.
ಘಟನೆ ಬಗ್ಗೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ ಮಿಶ್ರಾ ಕಿಡಿಕಾರಿದ್ದಾರೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶದಲ್ಲಿ ನಾನೂ ಮಹಿಳೆ, ನಮಗೆ ಹೋರಾಡುವುದು ಗೊತ್ತಿದೆ ಎಂದು ಹೇಳಿದ್ದರು. ಈಗ ನಮ್ಮ ರಾಜ್ಯದ ಹೆಣ್ಣು ಮಗಳಿಗೆ ಅನ್ಯಾಯವಾಗಿದೆ. ಆರೋಪಿಯನ್ನು ಅವರದ್ದೇ ಪಕ್ಷ ಅಧಿಕಾರದಲ್ಲಿರುವ ಸರಕಾರ ಹುಡುಕಿಕೊಡಬೇಕು. ಅವನ ಲವ್ ಜಿಹಾದ್ ಮದವನ್ನು ನಾವು ಇಳಿಸುತ್ತೇವೆ ಎಂದು ಕಿಡಿ ಕಾರಿದ್ದಾರೆ.
A woman from Damoh in Madhya Pradesh has alleged that a Muslim man in Bengaluru sexually exploited her, after which police registered a case, while the ruling Bharatiya Janata Party taunted the Congress that is in power in Karnataka. The woman has lodged a complaint in Damoh on Thursday evening against one Omar Farooq and a police team from here is leaving for Karnataka immediately to probe the case, MP Home Minister Narottam Mishra told reporters in Bhopal.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
25-09-25 09:58 am
Mangalore Correspondent
Mangaluru City Corporation: ಮಂಗಳೂರು ಮಹಾನಗರ ಪಾ...
24-09-25 10:48 pm
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am