ಬ್ರೇಕಿಂಗ್ ನ್ಯೂಸ್
24-06-23 05:16 pm HK News Desk ಕ್ರೈಂ
ಇಂದೋರ್, ಜೂನ್ 24: ಮಧ್ಯಪ್ರದೇಶದ ಮಹಿಳೆಯೊಬ್ಬರಿಗೆ ಕರ್ನಾಟಕದ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ವ್ಯಕ್ತಿಯೊಬ್ಬ ತಾನು ಮುಸ್ಲಿಂ ಎಂಬುದನ್ನು ಮುಚ್ಚಿಟ್ಟು ಮದುವೆಯಾಗುವ ಭರವಸೆ ನೀಡಿ, ಲೈಂಗಿಕವಾಗಿ ಬಳಸಿಕೊಂಡು ದುರ್ಬಳಕೆ ಮಾಡಿಕೊಂಡ ಆರೋಪ ಕೇಳಿಬಂದಿದೆ.
ಈ ಬಗ್ಗೆ ಮಧ್ಯಪ್ರದೇಶದ ದಮೋಹ್ ಜಿಲ್ಲೆಯಲ್ಲಿ ಮಹಿಳೆ ದೂರು ನೀಡಿದ್ದಾರೆ. ಈ ಸಂಬಂಧ ಕರ್ನಾಟಕದ ಕಾಂಗ್ರೆಸ್ ಸರಕಾರವನ್ನು ಮಧ್ಯಪ್ರದೇಶ ಸರಕಾರ ತರಾಟೆ ತೆಗೆದುಕೊಂಡಿದೆ. ದಮೋಹ್ ಪ್ರದೇಶದ ನಿವಾಸಿ ಮಹಿಳೆ ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದಾಗ ಉಮರ್ ಫಾರುಕ್ ಎಂಬಾತ ಪರಿಚಯವಾಗಿದ್ದ. ಆತ ತನ್ನ ಹೆಸರನ್ನು ರಾಜೀವ್ ಎಂದು ಹೇಳಿಕೊಂಡಿದ್ದು ಮದುವೆಯಾಗುವ ಭರವಸೆ ನೀಡಿ, ಮಹಿಳೆಯೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದ.

ಬಳಿಕ ಆ ವ್ಯಕ್ತಿ ಮುಸ್ಲಿಂ ಎಂದು ಮಹಿಳೆಯ ಅರಿವಿಗೆ ಬಂದಿತ್ತು. ಆದಾಗ್ಯೂ, ತನ್ನನ್ನು ಮದುವೆ ಆಗುವಂತೆ ಮಹಿಳೆ ಕೇಳಿಕೊಂಡಿದ್ದಾಳೆ. ಆದರೆ ಯುವಕ ಮದುವೆಯಾಗಲ್ಲ ಎಂದಿದ್ದಲ್ಲದೆ, ತನ್ನಲ್ಲಿ ಖಾಸಗಿ ಚಿತ್ರ, ವೀಡಿಯೋಗಳಿದೆಯೆಂದು ಹೇಳಿ ಬ್ಲಾಕ್ಮೇಲ್ ಮಾಡಿದ್ದಲ್ಲದೆ ಜಾಲತಾಣದಲ್ಲಿ ಹರಿಯ ಬಿಡುವುದಾಗಿ ಹೇಳಿ ಬೆದರಿಕೆ ಒಡ್ಡಿದ್ದಾನೆ. ಮಹಿಳೆ ತನಗಾದ ಅನ್ಯಾಯದ ಬಗ್ಗೆ ದಮೋಹ್ನಲ್ಲಿ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಪ್ರಕರಣದ ತನಿಖೆಗಾಗಿ ದಮೋಹ್ ಪೊಲೀಸರು ಕರ್ನಾಟಕಕ್ಕೆ ಬಂದಿದ್ದು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.


ಘಟನೆ ಬಗ್ಗೆ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ ಮಿಶ್ರಾ ಕಿಡಿಕಾರಿದ್ದಾರೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶದಲ್ಲಿ ನಾನೂ ಮಹಿಳೆ, ನಮಗೆ ಹೋರಾಡುವುದು ಗೊತ್ತಿದೆ ಎಂದು ಹೇಳಿದ್ದರು. ಈಗ ನಮ್ಮ ರಾಜ್ಯದ ಹೆಣ್ಣು ಮಗಳಿಗೆ ಅನ್ಯಾಯವಾಗಿದೆ. ಆರೋಪಿಯನ್ನು ಅವರದ್ದೇ ಪಕ್ಷ ಅಧಿಕಾರದಲ್ಲಿರುವ ಸರಕಾರ ಹುಡುಕಿಕೊಡಬೇಕು. ಅವನ ಲವ್ ಜಿಹಾದ್ ಮದವನ್ನು ನಾವು ಇಳಿಸುತ್ತೇವೆ ಎಂದು ಕಿಡಿ ಕಾರಿದ್ದಾರೆ.
A woman from Damoh in Madhya Pradesh has alleged that a Muslim man in Bengaluru sexually exploited her, after which police registered a case, while the ruling Bharatiya Janata Party taunted the Congress that is in power in Karnataka. The woman has lodged a complaint in Damoh on Thursday evening against one Omar Farooq and a police team from here is leaving for Karnataka immediately to probe the case, MP Home Minister Narottam Mishra told reporters in Bhopal.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm