ಬ್ರೇಕಿಂಗ್ ನ್ಯೂಸ್
25-06-23 11:11 am HK News Desk ಕ್ರೈಂ
ಚಿಕ್ಕಬಳ್ಳಾಪುರ, ಜೂನ್ 25: ಸಾಫ್ಟ್ ವೇರ್ ಇಂಜಿನಿಯರ್ನನ್ನು ಕಿಡ್ನಾಪ್ ಮಾಡಿ ಸಿನಿಮೀಯ ರೀತಿಯಲ್ಲಿ ದರೋಡೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಟೆಕ್ಕಿಯನ್ನು ಕಿಡ್ನಾಪ್ ಮಾಡಿದ ಬಳಿಕ ಮೂರು ದಿನಗಳ ರೆಸಾರ್ಟ್ವೊಂದರಲ್ಲಿ ಕೂಡಿ ಹಾಕಿದ್ದ ದುಷ್ಕರ್ಮಿಗಳು, ಆತನ ಮೇಲೆ ಹಲ್ಲೆ ಮಾಡಿದ ಎರಡು ಲ್ಯಾಪ್ ಟಾಪ್, ಮೂರು ಮೊಬೈಲ್, 12 ಗ್ರಾಂ ಬಂಗಾರದ ಚೈನ್ ಸೇರಿದಂತೆ 21 ಲಕ್ಷ ರೂಪಾಯಿ ಹಣ ವರ್ಗಾಯಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ಖಾಸಗಿ ಸಾಪ್ಟವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 32 ವರ್ಷದ ವಿಜಯಸಿಂಗ್ ಎಂಬಾತನನ್ನು ಆತನ ಪ್ರಿಯತಮೆಯ ನೆರವಿನೊಂದಿಗೆ ದೇವನಹಳ್ಳಿಗೆ ಕರೆಯಿಸಿಕೊಂಡಿದ್ದ ದುಷ್ಕರ್ಮಿಗಳು ಆತನನ್ನು ಅಲ್ಲಿಂದ ಕಿಡ್ನಾಪ್ ಮಾಡಿದ್ದರು. ಆ ಬಳಿಕ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದ ಬಳಿ ಇರುವ ಕ್ಯೂ.ವಿ.ಸಿ ವಿಲ್ಲಾ ರೆಸಾರ್ಟ್ಗೆ ಕರೆತಂದಿದ್ದ ಆರೋಪಿಗಳು ಆತನನ್ನು ವಿಲ್ಲಾದ ರೂಮ್ ನಂಬರ್ 36ರಲ್ಲಿ ಕೂಡಿ ಹಾಕಿ ಮೂರು ದಿನಗಳ ಕಾಲ ಹಲ್ಲೆ ಮಾಡಿದ್ದಾರೆ.
ಮೂಲತಃ ಆಂಧ್ರ ಪ್ರದೇಶದ ಅನಂತಪುರ ನಿವಾಸಿಯಾಗಿರುವ ವಿಜಯಸಿಂಗ್ಗೆ ಜೂನ್ 16ರಿಂದ 18ರ ವರೆಗೂ ಮೂರು ದಿನಗಳ ಕಾಲ ಚಿತ್ರ ಹಿಂಸೆ ನೀಡಿದ್ದ ಆರೋಪಿಗಳು, ಆತನ ಬಳಿ ಬೆಲೆಬಾಳುವ ವಸ್ತುಗಳು ಸೇರಿದಂತೆ 21 ಲಕ್ಷ ರೂಪಾಯಿ ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಟೆಕ್ಕಿ ವಿಜಯಸಿಂಗ್, ಪ್ರಿಯತಮೆ ಭಾವನಾ ರೆಡ್ಡಿ ಸೇರಿದಂತೆ ಪುಲ್ಲಾರೆಡ್ಡಿ, ಸುಬ್ರಮಣಿ, ನಾಗೇಶ ರೆಡ್ಡಿ, ಸಿದ್ದೇಶ , ಸುದೀರ್ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ.
ಪ್ರಕರಣದ ಸಂಬಂಧ ಪೊಲೀಸರು ಐಪಿಸಿ ಸೆಕ್ಷನ್ 506, 341, 504, 143, 149, 384, 323, 324 ಅಡಿ ಆರು ಮಂದಿಯ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಇತ್ತ ತೀವ್ರವಾಗಿ ಹಲ್ಲೆಗೊಳಗಾಗಿದ್ದ ವಿಜಯಸಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಚೇತರಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
An incident where a software engineer was kidnapped and robbed in a cinematic manner took place in Chikkaballapura. It has come to light that after the techie was kidnapped, the miscreants who had gathered in a resort for three days, attacked him and transferred 21 lakh rupees including two laptops, three mobile phones and a 12 gram gold chain.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm