ಬ್ರೇಕಿಂಗ್ ನ್ಯೂಸ್
02-11-20 01:17 pm Headline Karnataka News Network ಕ್ರೈಂ
ಕಾಸರಗೋಡು, ನವೆಂಬರ್ 02: ಮಂಜೇಶ್ವರದ ಬಂದ್ಯೋಡು ಬಳಿ ಎರಡು ದಿನಗಳ ಹಿಂದೆ ನಡೆದ ದಾಂಧಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಪ್ರಮುಖ ಆರೋಪಿಯನ್ನು ಉಪ್ಪಳ ಕುಕ್ಕಾರ್ ನಿವಾಸಿ ಟಿಕ್ಕಿ ಅಲಿಯಾಸ್ ಅಬ್ದುಲ್ ಅಮೀರ್ ಎಂದು ಗುರುತಿಸಲಾಗಿದೆ. ಪೊಲೀಸರು ಅಮೀರ್ ಸೇರಿದಂತೆ 11 ಮಂದಿಯ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.
ಶನಿವಾರ ಮಧ್ಯಾಹ್ನ ಅಬ್ದುಲ್ ಅಮೀರ್ ಸೇರಿ ಆರು ಮಂದಿ ಲಾರಿಯಲ್ಲಿ ಶೇಕ್ ಆಲಿ ಎಂಬವರು ತಮ್ಮ ಕುಟುಂಬದ ಜೊತೆಗೆ ಕಾರಿನಲ್ಲಿ ಬರುತ್ತಿದ್ದಾಗ ಕಾರಿಗೆ ಡಿಕ್ಕಿಯಾಗಲು ಪ್ರಯತ್ನಿಸಿದ್ದಾರೆ. ಈ ವೇಳೆ, ಲಾರಿಯನ್ನು ತಪ್ಪಿಸಲು ಯತ್ನಿಸಿದ ಚಾಲಕ ಕಾರನ್ನು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿಸಿದ್ದರು. ಈ ವೇಳೆ ಅಮೀರ್ ಮತ್ತು ತಂಡ ಶೇಖ್ ಆಲಿ ಕಾರಿಗೆ ಗುಂಡಿನ ದಾಳಿ ನಡೆಸಿದೆ. ಈ ವೇಳೆ, ಕಾರಿನಲ್ಲಿದ್ದ ಶೇಖ್ ಅಲಿ ಕುಟುಂಬ ತಪ್ಪಿಸಿಕೊಂಡು ಪರಾರಿಯಾಗಿದೆ. ಬಳಿಕ ಶೇಕ್ ಆಲಿ ಮ್ತತು ಕುಟುಂಬ ಕುಂಬಳೆ ಠಾಣೆಗೆ ದೂರು ನೀಡಲು ತೆರಳುತ್ತಿದ್ದರು. ಈ ವೇಳೆ, ಮತ್ತೆ ಬಂದ ಅಬ್ದುಲ್ ಅಮೀರ್ ತಂಡ ಶೇಖ್ ಆಲಿಯ ಮನೆಯಲ್ಲಿ ಆಲ್ಟೋ ಕಾರನ್ನು ಜಖಂ ಗೊಳಿಸಿದೆ. ಅಲ್ಲದೆ, ಕುಟುಂಬವನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಮುಂದಾಗಿದೆ.
ಘಟನೆಯಲ್ಲಿ ನಾಲ್ಕು ಕಾರುಗಳು ಜಖಂ ಆಗಿದ್ದವು. ಪ್ರಕರಣ ಸಂಬಂಧ ಕುಂಬಳೆ ಪೊಲೀಸರು ಮೊಯಿನುದ್ದೀನ್ ಶರೀಫ್, ತಳಂಗರೆ ಅಚ್ಚು, ಸಮದ್, ಆರಿಕ್ಕಾಡಿ ಗುಂಡು ಉಸ್ಮಾನ್, ಲತೀಫ್, ಜೋಯಿ, ಟೈರ್ ಫೈಸಲ್ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲಿಸಿದೆ. ವೈಯಕ್ತಿಕ ದ್ವೇಷದಿಂದ ರೌಡಿಗಳ ತಂಡ ಶೇಖ್ ಆಲಿ ಕುಟುಂಬದ ಮೇಲೆ ದಾಳಿ ಮಾಡಿತ್ತು ಎನ್ನಲಾಗುತ್ತಿದೆ.
Police have arrested the prime accused in Bandyodu, Kasargod firing and murder attempt case. The officials have successfully seized four vehicles. The accused is identified as Tikki Ammi alias Abdul Amir aged 30 years is resident of Uppala
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm