ಬ್ರೇಕಿಂಗ್ ನ್ಯೂಸ್
02-11-20 01:17 pm Headline Karnataka News Network ಕ್ರೈಂ
ಕಾಸರಗೋಡು, ನವೆಂಬರ್ 02: ಮಂಜೇಶ್ವರದ ಬಂದ್ಯೋಡು ಬಳಿ ಎರಡು ದಿನಗಳ ಹಿಂದೆ ನಡೆದ ದಾಂಧಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಪ್ರಮುಖ ಆರೋಪಿಯನ್ನು ಉಪ್ಪಳ ಕುಕ್ಕಾರ್ ನಿವಾಸಿ ಟಿಕ್ಕಿ ಅಲಿಯಾಸ್ ಅಬ್ದುಲ್ ಅಮೀರ್ ಎಂದು ಗುರುತಿಸಲಾಗಿದೆ. ಪೊಲೀಸರು ಅಮೀರ್ ಸೇರಿದಂತೆ 11 ಮಂದಿಯ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.
ಶನಿವಾರ ಮಧ್ಯಾಹ್ನ ಅಬ್ದುಲ್ ಅಮೀರ್ ಸೇರಿ ಆರು ಮಂದಿ ಲಾರಿಯಲ್ಲಿ ಶೇಕ್ ಆಲಿ ಎಂಬವರು ತಮ್ಮ ಕುಟುಂಬದ ಜೊತೆಗೆ ಕಾರಿನಲ್ಲಿ ಬರುತ್ತಿದ್ದಾಗ ಕಾರಿಗೆ ಡಿಕ್ಕಿಯಾಗಲು ಪ್ರಯತ್ನಿಸಿದ್ದಾರೆ. ಈ ವೇಳೆ, ಲಾರಿಯನ್ನು ತಪ್ಪಿಸಲು ಯತ್ನಿಸಿದ ಚಾಲಕ ಕಾರನ್ನು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿಸಿದ್ದರು. ಈ ವೇಳೆ ಅಮೀರ್ ಮತ್ತು ತಂಡ ಶೇಖ್ ಆಲಿ ಕಾರಿಗೆ ಗುಂಡಿನ ದಾಳಿ ನಡೆಸಿದೆ. ಈ ವೇಳೆ, ಕಾರಿನಲ್ಲಿದ್ದ ಶೇಖ್ ಅಲಿ ಕುಟುಂಬ ತಪ್ಪಿಸಿಕೊಂಡು ಪರಾರಿಯಾಗಿದೆ. ಬಳಿಕ ಶೇಕ್ ಆಲಿ ಮ್ತತು ಕುಟುಂಬ ಕುಂಬಳೆ ಠಾಣೆಗೆ ದೂರು ನೀಡಲು ತೆರಳುತ್ತಿದ್ದರು. ಈ ವೇಳೆ, ಮತ್ತೆ ಬಂದ ಅಬ್ದುಲ್ ಅಮೀರ್ ತಂಡ ಶೇಖ್ ಆಲಿಯ ಮನೆಯಲ್ಲಿ ಆಲ್ಟೋ ಕಾರನ್ನು ಜಖಂ ಗೊಳಿಸಿದೆ. ಅಲ್ಲದೆ, ಕುಟುಂಬವನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಮುಂದಾಗಿದೆ.
ಘಟನೆಯಲ್ಲಿ ನಾಲ್ಕು ಕಾರುಗಳು ಜಖಂ ಆಗಿದ್ದವು. ಪ್ರಕರಣ ಸಂಬಂಧ ಕುಂಬಳೆ ಪೊಲೀಸರು ಮೊಯಿನುದ್ದೀನ್ ಶರೀಫ್, ತಳಂಗರೆ ಅಚ್ಚು, ಸಮದ್, ಆರಿಕ್ಕಾಡಿ ಗುಂಡು ಉಸ್ಮಾನ್, ಲತೀಫ್, ಜೋಯಿ, ಟೈರ್ ಫೈಸಲ್ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲಿಸಿದೆ. ವೈಯಕ್ತಿಕ ದ್ವೇಷದಿಂದ ರೌಡಿಗಳ ತಂಡ ಶೇಖ್ ಆಲಿ ಕುಟುಂಬದ ಮೇಲೆ ದಾಳಿ ಮಾಡಿತ್ತು ಎನ್ನಲಾಗುತ್ತಿದೆ.
Police have arrested the prime accused in Bandyodu, Kasargod firing and murder attempt case. The officials have successfully seized four vehicles. The accused is identified as Tikki Ammi alias Abdul Amir aged 30 years is resident of Uppala
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 08:46 pm
Mangalore Correspondent
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm