ಬ್ರೇಕಿಂಗ್ ನ್ಯೂಸ್
02-11-20 01:17 pm Headline Karnataka News Network ಕ್ರೈಂ
ಕಾಸರಗೋಡು, ನವೆಂಬರ್ 02: ಮಂಜೇಶ್ವರದ ಬಂದ್ಯೋಡು ಬಳಿ ಎರಡು ದಿನಗಳ ಹಿಂದೆ ನಡೆದ ದಾಂಧಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಪ್ರಮುಖ ಆರೋಪಿಯನ್ನು ಉಪ್ಪಳ ಕುಕ್ಕಾರ್ ನಿವಾಸಿ ಟಿಕ್ಕಿ ಅಲಿಯಾಸ್ ಅಬ್ದುಲ್ ಅಮೀರ್ ಎಂದು ಗುರುತಿಸಲಾಗಿದೆ. ಪೊಲೀಸರು ಅಮೀರ್ ಸೇರಿದಂತೆ 11 ಮಂದಿಯ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.
ಶನಿವಾರ ಮಧ್ಯಾಹ್ನ ಅಬ್ದುಲ್ ಅಮೀರ್ ಸೇರಿ ಆರು ಮಂದಿ ಲಾರಿಯಲ್ಲಿ ಶೇಕ್ ಆಲಿ ಎಂಬವರು ತಮ್ಮ ಕುಟುಂಬದ ಜೊತೆಗೆ ಕಾರಿನಲ್ಲಿ ಬರುತ್ತಿದ್ದಾಗ ಕಾರಿಗೆ ಡಿಕ್ಕಿಯಾಗಲು ಪ್ರಯತ್ನಿಸಿದ್ದಾರೆ. ಈ ವೇಳೆ, ಲಾರಿಯನ್ನು ತಪ್ಪಿಸಲು ಯತ್ನಿಸಿದ ಚಾಲಕ ಕಾರನ್ನು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿಸಿದ್ದರು. ಈ ವೇಳೆ ಅಮೀರ್ ಮತ್ತು ತಂಡ ಶೇಖ್ ಆಲಿ ಕಾರಿಗೆ ಗುಂಡಿನ ದಾಳಿ ನಡೆಸಿದೆ. ಈ ವೇಳೆ, ಕಾರಿನಲ್ಲಿದ್ದ ಶೇಖ್ ಅಲಿ ಕುಟುಂಬ ತಪ್ಪಿಸಿಕೊಂಡು ಪರಾರಿಯಾಗಿದೆ. ಬಳಿಕ ಶೇಕ್ ಆಲಿ ಮ್ತತು ಕುಟುಂಬ ಕುಂಬಳೆ ಠಾಣೆಗೆ ದೂರು ನೀಡಲು ತೆರಳುತ್ತಿದ್ದರು. ಈ ವೇಳೆ, ಮತ್ತೆ ಬಂದ ಅಬ್ದುಲ್ ಅಮೀರ್ ತಂಡ ಶೇಖ್ ಆಲಿಯ ಮನೆಯಲ್ಲಿ ಆಲ್ಟೋ ಕಾರನ್ನು ಜಖಂ ಗೊಳಿಸಿದೆ. ಅಲ್ಲದೆ, ಕುಟುಂಬವನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಮುಂದಾಗಿದೆ.
ಘಟನೆಯಲ್ಲಿ ನಾಲ್ಕು ಕಾರುಗಳು ಜಖಂ ಆಗಿದ್ದವು. ಪ್ರಕರಣ ಸಂಬಂಧ ಕುಂಬಳೆ ಪೊಲೀಸರು ಮೊಯಿನುದ್ದೀನ್ ಶರೀಫ್, ತಳಂಗರೆ ಅಚ್ಚು, ಸಮದ್, ಆರಿಕ್ಕಾಡಿ ಗುಂಡು ಉಸ್ಮಾನ್, ಲತೀಫ್, ಜೋಯಿ, ಟೈರ್ ಫೈಸಲ್ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲಿಸಿದೆ. ವೈಯಕ್ತಿಕ ದ್ವೇಷದಿಂದ ರೌಡಿಗಳ ತಂಡ ಶೇಖ್ ಆಲಿ ಕುಟುಂಬದ ಮೇಲೆ ದಾಳಿ ಮಾಡಿತ್ತು ಎನ್ನಲಾಗುತ್ತಿದೆ.
Police have arrested the prime accused in Bandyodu, Kasargod firing and murder attempt case. The officials have successfully seized four vehicles. The accused is identified as Tikki Ammi alias Abdul Amir aged 30 years is resident of Uppala
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm