ಬ್ರೇಕಿಂಗ್ ನ್ಯೂಸ್
27-06-23 03:41 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 27: ತನ್ನ ಪತ್ನಿ ಮಾದಕ ವ್ಯಸನಿಯಾಗಿದ್ದು, ಡ್ರಗ್ಸ್ ಪೆಡ್ಲರ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಸಿನಿಮಾ ನಿರ್ಮಾಪಕರೊಬ್ಬರು ನಗರದ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ನಟ ಹಾಗೂ ನಿರ್ಮಾಪಕ ಟಿ.ಚಂದ್ರಶೇಖರ್ ಎಂಬವರು ತಮ್ಮ ಪತ್ನಿ ನಮಿತಾ ಹಾಗೂ ಲಕ್ಷ್ಮೀಶ್ ಪ್ರಭು ಎಂಬವರ ವಿರುದ್ಧ ಕೇಸು ದಾಖಲಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಪತ್ನಿ ನಮಿತಾ ಕೂಡ ಪತಿ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.
ʼಹೀಗೊಂದು ದಿನʼ ಹಾಗೂ ʼಅಪ್ಪುಗೆʼ ಎಂಬ ಸಿನಿಮಾಗಳ ನಿರ್ಮಾಪಕರಾಗಿರುವ ಟಿ.ಚಂದ್ರಶೇಖರ್, ಎರಡು ವರ್ಷಗಳ ಹಿಂದೆ ನಮಿತಾರನ್ನು ವಿವಾಹವಾಗಿದ್ದರು, ಬನಶಂಕರಿ 3ನೇ ಹಂತದ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದರು. ಈ ಮಧ್ಯೆ ತನ್ನ ಪತ್ನಿ ಮಾದಕ ವ್ಯಸನಿಯಾಗಿದ್ದು, ಎಷ್ಟೇ ಬುದ್ಧಿ ಹೇಳಿದರೂ ಡ್ರಗ್ಸ್ನಿಂದ ದೂರವಾಗಲಿಲ್ಲ. ಅಲ್ಲದೆ, ಕಳೆದ ಜನವರಿಯಿಂದ ಆಕೆಗೆ ಲಕ್ಷ್ಮೀಶ್ ಪ್ರಭು ಎಂಬ ಡ್ರಗ್ಸ್ ಪೆಡ್ಲರ್ ಎಂಬಾತನ ಜತೆ ಅನೈತಿಕ ಸಂಬಂಧವಿದೆ. ಜೂ.16 ರಂದು ಮನೆಯಲ್ಲಿ ಪತ್ನಿ ಹಾಗೂ ಲಕ್ಷ್ಮೀಶ್ ದೈಹಿಕ ಸಂಪರ್ಕದಲ್ಲಿದ್ದ ವೇಳೆ ನೋಡಿ ಪ್ರಶ್ನಿಸಿದಾಗ ಇಬ್ಬರೂ ಸೇರಿ ತನ್ನ ಮೇಲೆ ಹಲ್ಲೆ ನಡೆಸಿ ಪ್ರಾಣಬೆದರಿಕೆ ಹಾಕಿದ್ದಾರೆ. ಕೂಡಲೇ ಪೊಲೀಸರಿಗೆ ದೂರು ನೀಡಿರುವುದಾಗಿ ಚಂದ್ರಶೇಖರ್ ತಿಳಿಸಿದ್ದಾರೆ.
ನಮಿತಾ ಕೂಡ ಪತಿ ಚಂದ್ರಶೇಖರ್ ವಿರುದ್ಧ ದೂರು ದಾಖಲಿಸಿದ್ದು, ಆತನಿಗೆ ಮೊದಲೇ ಮದುವೆಯಾಗಿದ್ದು, ಮೊದಲ ಹೆಂಡತಿ, ಮಕ್ಕಳಿದ್ದಾರೆ. ನನ್ನನ್ನು ಮದುವೆ ಮಾಡಿಕೊಳ್ಳುವ ವೇಳೆ ತನ್ನ ಪತ್ನಿಗೆ ವಿಚ್ಛೇದನ ನೀಡಿರುವುದಾಗಿ ಪತ್ರ ತೋರಿಸಿ, ನನ್ನ ವಿವಾಹವಾಗಿದ್ದರು. ಜೂ.16 ರ ಮಧ್ಯಾಹ್ನ 1 ಗಂಟೆಯಲ್ಲಿ ನಮ್ಮ ಮನೆಯ ಮುಂದೆ ಗಲಾಟೆ ನಡೆಯುತ್ತಿತ್ತು. ಸದ್ದು ಕೇಳಿ ಹೊರಬಂದು ನೋಡಿದ್ದಾಗ ನನ್ನ ಸ್ನೇಹಿತ ಲಕ್ಷ್ಮೀಶ್ ಪ್ರಭುಗೆ ವಿನಾಕಾರಣ ಚಂದ್ರಶೇಖರ್ ಮತ್ತು ಆತನ ಸ್ನೇಹಿತರಾದ ಅರುಣ್, ಹೇಮಂತ್ ಥಳಿಸಿದ್ದಾರೆ. ಆತನ ಬಟ್ಟೆ ಬಿಚ್ಚಿಸಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ನನ್ನ ಮೇಲೂ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಮನೆಯಲ್ಲಿ ಡ್ರಗ್ಸ್ ಇಟ್ಟು ಅರೆಸ್ಟ್ ಮಾಡಿಸಿ ಜೈಲಿಗೆ ಕಳುಹಿಸುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಮಿತಾ, ಪತಿಯ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ.
Kannada film producer and actor has lodged a complaint with the Bengaluru Police alleging that his wife “is a drug addict” and has an affair with a drug peddler, police said on Monday, adding that his wife also lodged a counter complaint.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
ಪಾಂಡೇಶ್ವರ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ ಬಾಗಲ...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm