ಬ್ರೇಕಿಂಗ್ ನ್ಯೂಸ್
27-06-23 03:41 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 27: ತನ್ನ ಪತ್ನಿ ಮಾದಕ ವ್ಯಸನಿಯಾಗಿದ್ದು, ಡ್ರಗ್ಸ್ ಪೆಡ್ಲರ್ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಸಿನಿಮಾ ನಿರ್ಮಾಪಕರೊಬ್ಬರು ನಗರದ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ನಟ ಹಾಗೂ ನಿರ್ಮಾಪಕ ಟಿ.ಚಂದ್ರಶೇಖರ್ ಎಂಬವರು ತಮ್ಮ ಪತ್ನಿ ನಮಿತಾ ಹಾಗೂ ಲಕ್ಷ್ಮೀಶ್ ಪ್ರಭು ಎಂಬವರ ವಿರುದ್ಧ ಕೇಸು ದಾಖಲಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಪತ್ನಿ ನಮಿತಾ ಕೂಡ ಪತಿ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.
ʼಹೀಗೊಂದು ದಿನʼ ಹಾಗೂ ʼಅಪ್ಪುಗೆʼ ಎಂಬ ಸಿನಿಮಾಗಳ ನಿರ್ಮಾಪಕರಾಗಿರುವ ಟಿ.ಚಂದ್ರಶೇಖರ್, ಎರಡು ವರ್ಷಗಳ ಹಿಂದೆ ನಮಿತಾರನ್ನು ವಿವಾಹವಾಗಿದ್ದರು, ಬನಶಂಕರಿ 3ನೇ ಹಂತದ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದರು. ಈ ಮಧ್ಯೆ ತನ್ನ ಪತ್ನಿ ಮಾದಕ ವ್ಯಸನಿಯಾಗಿದ್ದು, ಎಷ್ಟೇ ಬುದ್ಧಿ ಹೇಳಿದರೂ ಡ್ರಗ್ಸ್ನಿಂದ ದೂರವಾಗಲಿಲ್ಲ. ಅಲ್ಲದೆ, ಕಳೆದ ಜನವರಿಯಿಂದ ಆಕೆಗೆ ಲಕ್ಷ್ಮೀಶ್ ಪ್ರಭು ಎಂಬ ಡ್ರಗ್ಸ್ ಪೆಡ್ಲರ್ ಎಂಬಾತನ ಜತೆ ಅನೈತಿಕ ಸಂಬಂಧವಿದೆ. ಜೂ.16 ರಂದು ಮನೆಯಲ್ಲಿ ಪತ್ನಿ ಹಾಗೂ ಲಕ್ಷ್ಮೀಶ್ ದೈಹಿಕ ಸಂಪರ್ಕದಲ್ಲಿದ್ದ ವೇಳೆ ನೋಡಿ ಪ್ರಶ್ನಿಸಿದಾಗ ಇಬ್ಬರೂ ಸೇರಿ ತನ್ನ ಮೇಲೆ ಹಲ್ಲೆ ನಡೆಸಿ ಪ್ರಾಣಬೆದರಿಕೆ ಹಾಕಿದ್ದಾರೆ. ಕೂಡಲೇ ಪೊಲೀಸರಿಗೆ ದೂರು ನೀಡಿರುವುದಾಗಿ ಚಂದ್ರಶೇಖರ್ ತಿಳಿಸಿದ್ದಾರೆ.
ನಮಿತಾ ಕೂಡ ಪತಿ ಚಂದ್ರಶೇಖರ್ ವಿರುದ್ಧ ದೂರು ದಾಖಲಿಸಿದ್ದು, ಆತನಿಗೆ ಮೊದಲೇ ಮದುವೆಯಾಗಿದ್ದು, ಮೊದಲ ಹೆಂಡತಿ, ಮಕ್ಕಳಿದ್ದಾರೆ. ನನ್ನನ್ನು ಮದುವೆ ಮಾಡಿಕೊಳ್ಳುವ ವೇಳೆ ತನ್ನ ಪತ್ನಿಗೆ ವಿಚ್ಛೇದನ ನೀಡಿರುವುದಾಗಿ ಪತ್ರ ತೋರಿಸಿ, ನನ್ನ ವಿವಾಹವಾಗಿದ್ದರು. ಜೂ.16 ರ ಮಧ್ಯಾಹ್ನ 1 ಗಂಟೆಯಲ್ಲಿ ನಮ್ಮ ಮನೆಯ ಮುಂದೆ ಗಲಾಟೆ ನಡೆಯುತ್ತಿತ್ತು. ಸದ್ದು ಕೇಳಿ ಹೊರಬಂದು ನೋಡಿದ್ದಾಗ ನನ್ನ ಸ್ನೇಹಿತ ಲಕ್ಷ್ಮೀಶ್ ಪ್ರಭುಗೆ ವಿನಾಕಾರಣ ಚಂದ್ರಶೇಖರ್ ಮತ್ತು ಆತನ ಸ್ನೇಹಿತರಾದ ಅರುಣ್, ಹೇಮಂತ್ ಥಳಿಸಿದ್ದಾರೆ. ಆತನ ಬಟ್ಟೆ ಬಿಚ್ಚಿಸಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ನನ್ನ ಮೇಲೂ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಮನೆಯಲ್ಲಿ ಡ್ರಗ್ಸ್ ಇಟ್ಟು ಅರೆಸ್ಟ್ ಮಾಡಿಸಿ ಜೈಲಿಗೆ ಕಳುಹಿಸುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಮಿತಾ, ಪತಿಯ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ.
Kannada film producer and actor has lodged a complaint with the Bengaluru Police alleging that his wife “is a drug addict” and has an affair with a drug peddler, police said on Monday, adding that his wife also lodged a counter complaint.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm