ಬ್ರೇಕಿಂಗ್ ನ್ಯೂಸ್
28-06-23 12:59 pm HK News Desk ಕ್ರೈಂ
ಕೋಲಾರ, ಜೂನ್ 27: ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ, ಇದರಿಂದ ಮನನೊಂದ ಪ್ರಿಯಕರ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಕೋಲಾರದಲ್ಲಿ ನಡೆದಿದೆ.
ಮೃತರನ್ನು ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಹೋಬಳಿಯ ಬೋಡಗುರ್ಕಿ ಗ್ರಾಮದ ಕೀರ್ತಿ(20), ಹಾಗೂ ಆತ್ಮಹತ್ಯೆ ಮಾಡಿಕೊಂಡವನನ್ನು ಗಂಗಾಧರ್(24) ಎಂದು ಗುರುತಿಸಲಾಗಿದೆ. ಕೀರ್ತಿ ಪದವಿ ವ್ಯಾಸಂಗ ಮಾಡುತ್ತಿದ್ದಳು ಗಂಗಾಧರ್ ತಮಟೆ ಕಲಾವಿದನಾಗಿದ್ದು ಗಾರೆ ಕೆಲಸ ಮಾಡುತ್ತಿದ್ದ. ಕೀರ್ತಿ ತಂದೆ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದರು.
ಮೃತ ಗಂಗಾಧರ್ ಹಾಗೂ ಕೀರ್ತಿ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಸಂಬಂಧ ಗಂಗಾಧರ್ ತಮ್ಮ ಪ್ರೀತಿಯ ವಿಚಾರವನ್ನು ಕೀರ್ತಿಯ ತಂದೆ ಕೃಷ್ಣಮೂರ್ತಿ ಬಳಿ ಹೇಳಿದ್ದಾನೆ. ಅಲ್ಲದೆ ಮದುವೆ ಮಾಡಿಕೊಡುವಂತೆಯೂ ಕೇಳಿಕೊಂಡಿದ್ದಾನೆ. ಆದರೆ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿದೆ. ಇಬ್ಬರ ಮದುವೆಗೆ ಕೀರ್ತಿಯ ತಂದೆ ಒಪ್ಪಿಗೆ ಸೂಚಿಸಿರಲಿಲ್ಲ.
ಗಂಗಾಧರ್ನನ್ನು ಮರೆತುಬಿಡುವಂತೆ ಪೋಷಕರು ಕೀರ್ತಿಗೆ ಹಲವು ಬಾರಿ ಬುದ್ಧಿವಾದ ಹೇಳಿದ್ದಾರೆ. ಆದರೆ ಇದ್ಯಾವುದಕ್ಕೂ ಕ್ಯಾರೇ ಅನ್ನದೇ ಇಬ್ಬರೂ ಪ್ರೀತಿಸುತ್ತಿದ್ದರು. ಈ ಸಂಬಂಧ ಮಂಗಳವಾರ ಬೆಳಗ್ಗೆ ಮತ್ತೆ ಕೀರ್ತಿ ಮತ್ತು ತಂದೆ ಕೃಷ್ಣಮೂರ್ತಿ ನಡುವೆ ಮಾತುಕತೆ ನಡೆದಿದೆ. ಈ ವೇಳೆ ಕೋಪಗೊಂಡ ಕೃಷ್ಣಮೂರ್ತಿ ಮಗಳನ್ನು ಕತ್ತು ಹಿಸುಕಿ ಸಾಯಿಸಿದ್ದಾರೆ.
ಈ ಸುದ್ದಿ ಹತ್ತಿರದಲ್ಲೇ ಇದ್ದ ಗಂಗಾಧರ್ ಮತ್ತು ಅವರ ಕುಟುಂಬಕ್ಕೆ ತಲುಪಿತು. ಯಾವುದೇ ಸಮಸ್ಯೆಯಾಗದಂತೆ ಗಂಗಾಧರ್ ಅಣ್ಣ ಶ್ರೀನಿವಾಸ್ ಅವರನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗಿದ್ದಾರೆ. ರೈಲ್ವೇ ಹಳಿ ಬಳಿ ಹೋಗುತ್ತಿದ್ದಾಗ ಗಂಗಾಧರ್ ನೀರು ಕುಡಿಯುತ್ತೇನೆ ಎಂದು ಹೇಳಿ ವಾಹನ ನಿಲ್ಲಿಸುವಂತೆ ಕೇಳಿದ್ದಾನೆ.
ಗಾಡಿ ನಿಲ್ಲಿಸಿದ ಕೂಡಲೇ ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಸಾವನ್ನಪ್ಪಿದ್ದಾನೆ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ, ಘಟನೆ ಸಂಬಂಧ ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ಬಾಲಕಿಯ ತಂದೆ ಕೃಷ್ಣಮೂರ್ತಿಯನ್ನು ಬಂಧಿಸಿದ್ದಾರೆ ಎಂದು ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಧರಣಿ ದೇವಿ ತಿಳಿಸಿದ್ದಾರೆ.
Kolar daughter killed by father for intercast love, boy commits suicide near speeding train.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm