ಬ್ರೇಕಿಂಗ್ ನ್ಯೂಸ್
28-06-23 12:59 pm HK News Desk ಕ್ರೈಂ
ಕೋಲಾರ, ಜೂನ್ 27: ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ, ಇದರಿಂದ ಮನನೊಂದ ಪ್ರಿಯಕರ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಕೋಲಾರದಲ್ಲಿ ನಡೆದಿದೆ.
ಮೃತರನ್ನು ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಹೋಬಳಿಯ ಬೋಡಗುರ್ಕಿ ಗ್ರಾಮದ ಕೀರ್ತಿ(20), ಹಾಗೂ ಆತ್ಮಹತ್ಯೆ ಮಾಡಿಕೊಂಡವನನ್ನು ಗಂಗಾಧರ್(24) ಎಂದು ಗುರುತಿಸಲಾಗಿದೆ. ಕೀರ್ತಿ ಪದವಿ ವ್ಯಾಸಂಗ ಮಾಡುತ್ತಿದ್ದಳು ಗಂಗಾಧರ್ ತಮಟೆ ಕಲಾವಿದನಾಗಿದ್ದು ಗಾರೆ ಕೆಲಸ ಮಾಡುತ್ತಿದ್ದ. ಕೀರ್ತಿ ತಂದೆ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದರು.
ಮೃತ ಗಂಗಾಧರ್ ಹಾಗೂ ಕೀರ್ತಿ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಸಂಬಂಧ ಗಂಗಾಧರ್ ತಮ್ಮ ಪ್ರೀತಿಯ ವಿಚಾರವನ್ನು ಕೀರ್ತಿಯ ತಂದೆ ಕೃಷ್ಣಮೂರ್ತಿ ಬಳಿ ಹೇಳಿದ್ದಾನೆ. ಅಲ್ಲದೆ ಮದುವೆ ಮಾಡಿಕೊಡುವಂತೆಯೂ ಕೇಳಿಕೊಂಡಿದ್ದಾನೆ. ಆದರೆ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿದೆ. ಇಬ್ಬರ ಮದುವೆಗೆ ಕೀರ್ತಿಯ ತಂದೆ ಒಪ್ಪಿಗೆ ಸೂಚಿಸಿರಲಿಲ್ಲ.
ಗಂಗಾಧರ್ನನ್ನು ಮರೆತುಬಿಡುವಂತೆ ಪೋಷಕರು ಕೀರ್ತಿಗೆ ಹಲವು ಬಾರಿ ಬುದ್ಧಿವಾದ ಹೇಳಿದ್ದಾರೆ. ಆದರೆ ಇದ್ಯಾವುದಕ್ಕೂ ಕ್ಯಾರೇ ಅನ್ನದೇ ಇಬ್ಬರೂ ಪ್ರೀತಿಸುತ್ತಿದ್ದರು. ಈ ಸಂಬಂಧ ಮಂಗಳವಾರ ಬೆಳಗ್ಗೆ ಮತ್ತೆ ಕೀರ್ತಿ ಮತ್ತು ತಂದೆ ಕೃಷ್ಣಮೂರ್ತಿ ನಡುವೆ ಮಾತುಕತೆ ನಡೆದಿದೆ. ಈ ವೇಳೆ ಕೋಪಗೊಂಡ ಕೃಷ್ಣಮೂರ್ತಿ ಮಗಳನ್ನು ಕತ್ತು ಹಿಸುಕಿ ಸಾಯಿಸಿದ್ದಾರೆ.
ಈ ಸುದ್ದಿ ಹತ್ತಿರದಲ್ಲೇ ಇದ್ದ ಗಂಗಾಧರ್ ಮತ್ತು ಅವರ ಕುಟುಂಬಕ್ಕೆ ತಲುಪಿತು. ಯಾವುದೇ ಸಮಸ್ಯೆಯಾಗದಂತೆ ಗಂಗಾಧರ್ ಅಣ್ಣ ಶ್ರೀನಿವಾಸ್ ಅವರನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗಿದ್ದಾರೆ. ರೈಲ್ವೇ ಹಳಿ ಬಳಿ ಹೋಗುತ್ತಿದ್ದಾಗ ಗಂಗಾಧರ್ ನೀರು ಕುಡಿಯುತ್ತೇನೆ ಎಂದು ಹೇಳಿ ವಾಹನ ನಿಲ್ಲಿಸುವಂತೆ ಕೇಳಿದ್ದಾನೆ.
ಗಾಡಿ ನಿಲ್ಲಿಸಿದ ಕೂಡಲೇ ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಸಾವನ್ನಪ್ಪಿದ್ದಾನೆ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ, ಘಟನೆ ಸಂಬಂಧ ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ಬಾಲಕಿಯ ತಂದೆ ಕೃಷ್ಣಮೂರ್ತಿಯನ್ನು ಬಂಧಿಸಿದ್ದಾರೆ ಎಂದು ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಧರಣಿ ದೇವಿ ತಿಳಿಸಿದ್ದಾರೆ.
Kolar daughter killed by father for intercast love, boy commits suicide near speeding train.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
25-09-25 09:58 am
Mangalore Correspondent
Mangaluru City Corporation: ಮಂಗಳೂರು ಮಹಾನಗರ ಪಾ...
24-09-25 10:48 pm
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am