ಬ್ರೇಕಿಂಗ್ ನ್ಯೂಸ್
28-06-23 03:23 pm Mangalore Correspondent ಕ್ರೈಂ
ಮಂಗಳೂರು, ಜೂನ್ 28: ಹೆಣ್ಣಿನಾಸೆಯಿಂದ ಮಂಗಳೂರಿಗೆ ಬಂದಿದ್ದ ಕೇರಳ ಮೂಲದ ಉದ್ಯಮಿಯನ್ನು ತಂಡವೊಂದು ಹನಿಟ್ರ್ಯಾಪ್ ಮಾಡಿ ಬ್ಲಾಕ್ಮೇಲ್ ಮಾಡಿದ್ದು, ಯುವತಿ ಸೇರಿ ಎಂಟು ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕಳೆದ ಫೆಬ್ರವರಿ ತಿಂಗಳ 16ರಂದು ವಾಮಂಜೂರು ಬಳಿಯ ಮೂಡುಶೆಡ್ಡೆಯ ರೆಸಾರ್ಟಿನಲ್ಲಿ ಘಟನೆ ನಡೆದಿತ್ತು. ಕೇರಳ ಮೂಲದ ಮೊಯ್ದೀನ್ ಕುಂಞ(45) ಮತ್ತು ಮೊಹಮ್ಮದ್ ರುಕ್ಸಾದ್ ಎಂಬವರು ಬೇರೆಯವರ ಮೂಲಕ ಸಂಪರ್ಕಕ್ಕೆ ಬಂದಿದ್ದ ಮೂಡುಬಿದ್ರೆ ಮೂಲದ ಹುಡುಗಿಯ ಜೊತೆಗೆ ರೆಸಾರ್ಟಿಗೆ ತೆರಳಿದ್ದರು. ರಾತ್ರಿ ವೇಳೆ ಅಲ್ಲಿದ್ದಾಗಲೇ ತಂಡವೊಂದು ಕೊಠಡಿಗೆ ಎಂಟ್ರಿ ಕೊಟ್ಟಿದ್ದು, ಯುವಕರು ಫೋಟೋ, ವಿಡಿಯೋ ಮಾಡಿದ್ದರು. ಮೊಯ್ದೀನ್ ಕುಂಞಗೆ ಹಲ್ಲೆಗೈದು ಹಣಕ್ಕಾಗಿ ಪೀಡಿಸಿದ್ದರು. ಅಲ್ಲದೆ, ಇಂತಿಷ್ಟು ಹಣ ಕೊಟ್ಟರೆ ಮಾತ್ರ ಬಿಡ್ತೀವಿ, ಇಲ್ಲಾಂದ್ರೆ ವಿಡಿಯೋವನ್ನು ಜಾಲತಾಣದಲ್ಲಿ ಹಾಕುತ್ತೇವೆಂದು ಬ್ಲಾಕ್ಮೇಲ್ ಮಾಡಿದ್ದರು. ಬೆದರಿದ ಮೊಯ್ದೀನ್ ಕುಂಞ ಹಣ ಕೊಟ್ಟು ಅಲ್ಲಿಂದ ಪಾರಾಗಿ ಬಂದಿದ್ದರು.

ಆದರೆ ಯುವಕರ ತಂಡ ಪದೇ ಪದೇ ಕರೆ ಮಾಡಿ, ಹಣಕ್ಕಾಗಿ ಪೀಡಿಸಿದ್ದಾರೆ. ಗೂಗಲ್ ಪೇ, ಬ್ಯಾಂಕ್ ಅಕೌಂಟ್ ಮೂಲಕ ಹಣ ಹಾಕಿಸಿಕೊಳ್ಳುತ್ತಿದ್ದರು. ಮೂರು ತಿಂಗಳಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಹಣವನ್ನು ಕಳಕೊಂಡ ಮೊಯ್ದೀನ್ ಕುಂಞ ಇತ್ತೀಚೆಗೆ ಕಾವೂರು ಠಾಣೆಗೆ ತೆರಳಿ ದೂರು ನೀಡಿದ್ದರು. ಕಮಿಷನರ್ ಸೂಚನೆಯಂತೆ ಪ್ರಕರಣವನ್ನು ಕೈಗೆತ್ತಿಕೊಂಡ ಸಿಸಿಬಿ ಪೊಲೀಸರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಪ್ರೀತಮ್ ಬೊಂದೇಲ್, ಮೂಡುಶೆಡ್ಡೆ ಆಸುಪಾಸಿನ ಕಿಶೋರ್, ಮುರಳಿ, ಸುಶಾಂತ್, ಅಭಿ ಸೇರಿ ಮೂಡುಬಿದ್ರೆ ಮೂಲದ ಯುವತಿಯನ್ನು ಅರೆಸ್ಟ್ ಮಾಡಿದ್ದಾರೆ.

ಯುವತಿಗೂ ಬ್ಲಾಕ್ಮೇಲ್ ಮಾಡಿದ ಯುವಕರಿಗೂ ಕನೆಕ್ಷನ್ ಇದೆಯೆನ್ನುವ ಮಾಹಿತಿಯಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವತಿ ಇದೇ ರೀತಿಯ ಹಿನ್ನೆಲೆ ಹೊಂದಿದ್ದು, ಯುವಕರನ್ನು ಬಲೆಗೆ ಕೆಡವಿ ಹಣ ಮಾಡಿಕೊಳ್ಳುತ್ತಿದ್ದಳು. ಪ್ರೀತಮ್ ಅಲಿಯಾಸ್ ಸುರೇಂದ್ರ ಬೋಂದೆಲ್ ನಿವಾಸಿಯಾಗಿದ್ದು, 420 ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾನೆ. ಸೆಕ್ಯುರಿಟಿ ಗಾರ್ಡ್ ಒಬ್ಬನಿಗೆ ಹಲ್ಲೆಗೈದ ಬಗ್ಗೆ ಬರ್ಕೆ ಠಾಣೆಯಲ್ಲಿ ಕೇಸು ದಾಖಲಾಗಿತ್ತು.
Mangalore Honey Trap Case, Eight including girl from Moodbidri arrested by CCB police. The incident took place at a private resort in Vamamjoor. The youth from kerala was honey trapped and had threatned him of Nude photos and video.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm