ಬ್ರೇಕಿಂಗ್ ನ್ಯೂಸ್
28-06-23 03:23 pm Mangalore Correspondent ಕ್ರೈಂ
ಮಂಗಳೂರು, ಜೂನ್ 28: ಹೆಣ್ಣಿನಾಸೆಯಿಂದ ಮಂಗಳೂರಿಗೆ ಬಂದಿದ್ದ ಕೇರಳ ಮೂಲದ ಉದ್ಯಮಿಯನ್ನು ತಂಡವೊಂದು ಹನಿಟ್ರ್ಯಾಪ್ ಮಾಡಿ ಬ್ಲಾಕ್ಮೇಲ್ ಮಾಡಿದ್ದು, ಯುವತಿ ಸೇರಿ ಎಂಟು ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕಳೆದ ಫೆಬ್ರವರಿ ತಿಂಗಳ 16ರಂದು ವಾಮಂಜೂರು ಬಳಿಯ ಮೂಡುಶೆಡ್ಡೆಯ ರೆಸಾರ್ಟಿನಲ್ಲಿ ಘಟನೆ ನಡೆದಿತ್ತು. ಕೇರಳ ಮೂಲದ ಮೊಯ್ದೀನ್ ಕುಂಞ(45) ಮತ್ತು ಮೊಹಮ್ಮದ್ ರುಕ್ಸಾದ್ ಎಂಬವರು ಬೇರೆಯವರ ಮೂಲಕ ಸಂಪರ್ಕಕ್ಕೆ ಬಂದಿದ್ದ ಮೂಡುಬಿದ್ರೆ ಮೂಲದ ಹುಡುಗಿಯ ಜೊತೆಗೆ ರೆಸಾರ್ಟಿಗೆ ತೆರಳಿದ್ದರು. ರಾತ್ರಿ ವೇಳೆ ಅಲ್ಲಿದ್ದಾಗಲೇ ತಂಡವೊಂದು ಕೊಠಡಿಗೆ ಎಂಟ್ರಿ ಕೊಟ್ಟಿದ್ದು, ಯುವಕರು ಫೋಟೋ, ವಿಡಿಯೋ ಮಾಡಿದ್ದರು. ಮೊಯ್ದೀನ್ ಕುಂಞಗೆ ಹಲ್ಲೆಗೈದು ಹಣಕ್ಕಾಗಿ ಪೀಡಿಸಿದ್ದರು. ಅಲ್ಲದೆ, ಇಂತಿಷ್ಟು ಹಣ ಕೊಟ್ಟರೆ ಮಾತ್ರ ಬಿಡ್ತೀವಿ, ಇಲ್ಲಾಂದ್ರೆ ವಿಡಿಯೋವನ್ನು ಜಾಲತಾಣದಲ್ಲಿ ಹಾಕುತ್ತೇವೆಂದು ಬ್ಲಾಕ್ಮೇಲ್ ಮಾಡಿದ್ದರು. ಬೆದರಿದ ಮೊಯ್ದೀನ್ ಕುಂಞ ಹಣ ಕೊಟ್ಟು ಅಲ್ಲಿಂದ ಪಾರಾಗಿ ಬಂದಿದ್ದರು.

ಆದರೆ ಯುವಕರ ತಂಡ ಪದೇ ಪದೇ ಕರೆ ಮಾಡಿ, ಹಣಕ್ಕಾಗಿ ಪೀಡಿಸಿದ್ದಾರೆ. ಗೂಗಲ್ ಪೇ, ಬ್ಯಾಂಕ್ ಅಕೌಂಟ್ ಮೂಲಕ ಹಣ ಹಾಕಿಸಿಕೊಳ್ಳುತ್ತಿದ್ದರು. ಮೂರು ತಿಂಗಳಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಹಣವನ್ನು ಕಳಕೊಂಡ ಮೊಯ್ದೀನ್ ಕುಂಞ ಇತ್ತೀಚೆಗೆ ಕಾವೂರು ಠಾಣೆಗೆ ತೆರಳಿ ದೂರು ನೀಡಿದ್ದರು. ಕಮಿಷನರ್ ಸೂಚನೆಯಂತೆ ಪ್ರಕರಣವನ್ನು ಕೈಗೆತ್ತಿಕೊಂಡ ಸಿಸಿಬಿ ಪೊಲೀಸರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಪ್ರೀತಮ್ ಬೊಂದೇಲ್, ಮೂಡುಶೆಡ್ಡೆ ಆಸುಪಾಸಿನ ಕಿಶೋರ್, ಮುರಳಿ, ಸುಶಾಂತ್, ಅಭಿ ಸೇರಿ ಮೂಡುಬಿದ್ರೆ ಮೂಲದ ಯುವತಿಯನ್ನು ಅರೆಸ್ಟ್ ಮಾಡಿದ್ದಾರೆ.

ಯುವತಿಗೂ ಬ್ಲಾಕ್ಮೇಲ್ ಮಾಡಿದ ಯುವಕರಿಗೂ ಕನೆಕ್ಷನ್ ಇದೆಯೆನ್ನುವ ಮಾಹಿತಿಯಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವತಿ ಇದೇ ರೀತಿಯ ಹಿನ್ನೆಲೆ ಹೊಂದಿದ್ದು, ಯುವಕರನ್ನು ಬಲೆಗೆ ಕೆಡವಿ ಹಣ ಮಾಡಿಕೊಳ್ಳುತ್ತಿದ್ದಳು. ಪ್ರೀತಮ್ ಅಲಿಯಾಸ್ ಸುರೇಂದ್ರ ಬೋಂದೆಲ್ ನಿವಾಸಿಯಾಗಿದ್ದು, 420 ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾನೆ. ಸೆಕ್ಯುರಿಟಿ ಗಾರ್ಡ್ ಒಬ್ಬನಿಗೆ ಹಲ್ಲೆಗೈದ ಬಗ್ಗೆ ಬರ್ಕೆ ಠಾಣೆಯಲ್ಲಿ ಕೇಸು ದಾಖಲಾಗಿತ್ತು.
Mangalore Honey Trap Case, Eight including girl from Moodbidri arrested by CCB police. The incident took place at a private resort in Vamamjoor. The youth from kerala was honey trapped and had threatned him of Nude photos and video.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm