ಬ್ರೇಕಿಂಗ್ ನ್ಯೂಸ್
28-06-23 03:23 pm Mangalore Correspondent ಕ್ರೈಂ
ಮಂಗಳೂರು, ಜೂನ್ 28: ಹೆಣ್ಣಿನಾಸೆಯಿಂದ ಮಂಗಳೂರಿಗೆ ಬಂದಿದ್ದ ಕೇರಳ ಮೂಲದ ಉದ್ಯಮಿಯನ್ನು ತಂಡವೊಂದು ಹನಿಟ್ರ್ಯಾಪ್ ಮಾಡಿ ಬ್ಲಾಕ್ಮೇಲ್ ಮಾಡಿದ್ದು, ಯುವತಿ ಸೇರಿ ಎಂಟು ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕಳೆದ ಫೆಬ್ರವರಿ ತಿಂಗಳ 16ರಂದು ವಾಮಂಜೂರು ಬಳಿಯ ಮೂಡುಶೆಡ್ಡೆಯ ರೆಸಾರ್ಟಿನಲ್ಲಿ ಘಟನೆ ನಡೆದಿತ್ತು. ಕೇರಳ ಮೂಲದ ಮೊಯ್ದೀನ್ ಕುಂಞ(45) ಮತ್ತು ಮೊಹಮ್ಮದ್ ರುಕ್ಸಾದ್ ಎಂಬವರು ಬೇರೆಯವರ ಮೂಲಕ ಸಂಪರ್ಕಕ್ಕೆ ಬಂದಿದ್ದ ಮೂಡುಬಿದ್ರೆ ಮೂಲದ ಹುಡುಗಿಯ ಜೊತೆಗೆ ರೆಸಾರ್ಟಿಗೆ ತೆರಳಿದ್ದರು. ರಾತ್ರಿ ವೇಳೆ ಅಲ್ಲಿದ್ದಾಗಲೇ ತಂಡವೊಂದು ಕೊಠಡಿಗೆ ಎಂಟ್ರಿ ಕೊಟ್ಟಿದ್ದು, ಯುವಕರು ಫೋಟೋ, ವಿಡಿಯೋ ಮಾಡಿದ್ದರು. ಮೊಯ್ದೀನ್ ಕುಂಞಗೆ ಹಲ್ಲೆಗೈದು ಹಣಕ್ಕಾಗಿ ಪೀಡಿಸಿದ್ದರು. ಅಲ್ಲದೆ, ಇಂತಿಷ್ಟು ಹಣ ಕೊಟ್ಟರೆ ಮಾತ್ರ ಬಿಡ್ತೀವಿ, ಇಲ್ಲಾಂದ್ರೆ ವಿಡಿಯೋವನ್ನು ಜಾಲತಾಣದಲ್ಲಿ ಹಾಕುತ್ತೇವೆಂದು ಬ್ಲಾಕ್ಮೇಲ್ ಮಾಡಿದ್ದರು. ಬೆದರಿದ ಮೊಯ್ದೀನ್ ಕುಂಞ ಹಣ ಕೊಟ್ಟು ಅಲ್ಲಿಂದ ಪಾರಾಗಿ ಬಂದಿದ್ದರು.
ಆದರೆ ಯುವಕರ ತಂಡ ಪದೇ ಪದೇ ಕರೆ ಮಾಡಿ, ಹಣಕ್ಕಾಗಿ ಪೀಡಿಸಿದ್ದಾರೆ. ಗೂಗಲ್ ಪೇ, ಬ್ಯಾಂಕ್ ಅಕೌಂಟ್ ಮೂಲಕ ಹಣ ಹಾಕಿಸಿಕೊಳ್ಳುತ್ತಿದ್ದರು. ಮೂರು ತಿಂಗಳಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಹಣವನ್ನು ಕಳಕೊಂಡ ಮೊಯ್ದೀನ್ ಕುಂಞ ಇತ್ತೀಚೆಗೆ ಕಾವೂರು ಠಾಣೆಗೆ ತೆರಳಿ ದೂರು ನೀಡಿದ್ದರು. ಕಮಿಷನರ್ ಸೂಚನೆಯಂತೆ ಪ್ರಕರಣವನ್ನು ಕೈಗೆತ್ತಿಕೊಂಡ ಸಿಸಿಬಿ ಪೊಲೀಸರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಪ್ರೀತಮ್ ಬೊಂದೇಲ್, ಮೂಡುಶೆಡ್ಡೆ ಆಸುಪಾಸಿನ ಕಿಶೋರ್, ಮುರಳಿ, ಸುಶಾಂತ್, ಅಭಿ ಸೇರಿ ಮೂಡುಬಿದ್ರೆ ಮೂಲದ ಯುವತಿಯನ್ನು ಅರೆಸ್ಟ್ ಮಾಡಿದ್ದಾರೆ.
ಯುವತಿಗೂ ಬ್ಲಾಕ್ಮೇಲ್ ಮಾಡಿದ ಯುವಕರಿಗೂ ಕನೆಕ್ಷನ್ ಇದೆಯೆನ್ನುವ ಮಾಹಿತಿಯಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವತಿ ಇದೇ ರೀತಿಯ ಹಿನ್ನೆಲೆ ಹೊಂದಿದ್ದು, ಯುವಕರನ್ನು ಬಲೆಗೆ ಕೆಡವಿ ಹಣ ಮಾಡಿಕೊಳ್ಳುತ್ತಿದ್ದಳು. ಪ್ರೀತಮ್ ಅಲಿಯಾಸ್ ಸುರೇಂದ್ರ ಬೋಂದೆಲ್ ನಿವಾಸಿಯಾಗಿದ್ದು, 420 ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾನೆ. ಸೆಕ್ಯುರಿಟಿ ಗಾರ್ಡ್ ಒಬ್ಬನಿಗೆ ಹಲ್ಲೆಗೈದ ಬಗ್ಗೆ ಬರ್ಕೆ ಠಾಣೆಯಲ್ಲಿ ಕೇಸು ದಾಖಲಾಗಿತ್ತು.
Mangalore Honey Trap Case, Eight including girl from Moodbidri arrested by CCB police. The incident took place at a private resort in Vamamjoor. The youth from kerala was honey trapped and had threatned him of Nude photos and video.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
25-09-25 09:58 am
Mangalore Correspondent
Mangaluru City Corporation: ಮಂಗಳೂರು ಮಹಾನಗರ ಪಾ...
24-09-25 10:48 pm
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am