ಬ್ರೇಕಿಂಗ್ ನ್ಯೂಸ್
28-06-23 03:23 pm Mangalore Correspondent ಕ್ರೈಂ
ಮಂಗಳೂರು, ಜೂನ್ 28: ಹೆಣ್ಣಿನಾಸೆಯಿಂದ ಮಂಗಳೂರಿಗೆ ಬಂದಿದ್ದ ಕೇರಳ ಮೂಲದ ಉದ್ಯಮಿಯನ್ನು ತಂಡವೊಂದು ಹನಿಟ್ರ್ಯಾಪ್ ಮಾಡಿ ಬ್ಲಾಕ್ಮೇಲ್ ಮಾಡಿದ್ದು, ಯುವತಿ ಸೇರಿ ಎಂಟು ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕಳೆದ ಫೆಬ್ರವರಿ ತಿಂಗಳ 16ರಂದು ವಾಮಂಜೂರು ಬಳಿಯ ಮೂಡುಶೆಡ್ಡೆಯ ರೆಸಾರ್ಟಿನಲ್ಲಿ ಘಟನೆ ನಡೆದಿತ್ತು. ಕೇರಳ ಮೂಲದ ಮೊಯ್ದೀನ್ ಕುಂಞ(45) ಮತ್ತು ಮೊಹಮ್ಮದ್ ರುಕ್ಸಾದ್ ಎಂಬವರು ಬೇರೆಯವರ ಮೂಲಕ ಸಂಪರ್ಕಕ್ಕೆ ಬಂದಿದ್ದ ಮೂಡುಬಿದ್ರೆ ಮೂಲದ ಹುಡುಗಿಯ ಜೊತೆಗೆ ರೆಸಾರ್ಟಿಗೆ ತೆರಳಿದ್ದರು. ರಾತ್ರಿ ವೇಳೆ ಅಲ್ಲಿದ್ದಾಗಲೇ ತಂಡವೊಂದು ಕೊಠಡಿಗೆ ಎಂಟ್ರಿ ಕೊಟ್ಟಿದ್ದು, ಯುವಕರು ಫೋಟೋ, ವಿಡಿಯೋ ಮಾಡಿದ್ದರು. ಮೊಯ್ದೀನ್ ಕುಂಞಗೆ ಹಲ್ಲೆಗೈದು ಹಣಕ್ಕಾಗಿ ಪೀಡಿಸಿದ್ದರು. ಅಲ್ಲದೆ, ಇಂತಿಷ್ಟು ಹಣ ಕೊಟ್ಟರೆ ಮಾತ್ರ ಬಿಡ್ತೀವಿ, ಇಲ್ಲಾಂದ್ರೆ ವಿಡಿಯೋವನ್ನು ಜಾಲತಾಣದಲ್ಲಿ ಹಾಕುತ್ತೇವೆಂದು ಬ್ಲಾಕ್ಮೇಲ್ ಮಾಡಿದ್ದರು. ಬೆದರಿದ ಮೊಯ್ದೀನ್ ಕುಂಞ ಹಣ ಕೊಟ್ಟು ಅಲ್ಲಿಂದ ಪಾರಾಗಿ ಬಂದಿದ್ದರು.

ಆದರೆ ಯುವಕರ ತಂಡ ಪದೇ ಪದೇ ಕರೆ ಮಾಡಿ, ಹಣಕ್ಕಾಗಿ ಪೀಡಿಸಿದ್ದಾರೆ. ಗೂಗಲ್ ಪೇ, ಬ್ಯಾಂಕ್ ಅಕೌಂಟ್ ಮೂಲಕ ಹಣ ಹಾಕಿಸಿಕೊಳ್ಳುತ್ತಿದ್ದರು. ಮೂರು ತಿಂಗಳಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಹಣವನ್ನು ಕಳಕೊಂಡ ಮೊಯ್ದೀನ್ ಕುಂಞ ಇತ್ತೀಚೆಗೆ ಕಾವೂರು ಠಾಣೆಗೆ ತೆರಳಿ ದೂರು ನೀಡಿದ್ದರು. ಕಮಿಷನರ್ ಸೂಚನೆಯಂತೆ ಪ್ರಕರಣವನ್ನು ಕೈಗೆತ್ತಿಕೊಂಡ ಸಿಸಿಬಿ ಪೊಲೀಸರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಪ್ರೀತಮ್ ಬೊಂದೇಲ್, ಮೂಡುಶೆಡ್ಡೆ ಆಸುಪಾಸಿನ ಕಿಶೋರ್, ಮುರಳಿ, ಸುಶಾಂತ್, ಅಭಿ ಸೇರಿ ಮೂಡುಬಿದ್ರೆ ಮೂಲದ ಯುವತಿಯನ್ನು ಅರೆಸ್ಟ್ ಮಾಡಿದ್ದಾರೆ.

ಯುವತಿಗೂ ಬ್ಲಾಕ್ಮೇಲ್ ಮಾಡಿದ ಯುವಕರಿಗೂ ಕನೆಕ್ಷನ್ ಇದೆಯೆನ್ನುವ ಮಾಹಿತಿಯಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವತಿ ಇದೇ ರೀತಿಯ ಹಿನ್ನೆಲೆ ಹೊಂದಿದ್ದು, ಯುವಕರನ್ನು ಬಲೆಗೆ ಕೆಡವಿ ಹಣ ಮಾಡಿಕೊಳ್ಳುತ್ತಿದ್ದಳು. ಪ್ರೀತಮ್ ಅಲಿಯಾಸ್ ಸುರೇಂದ್ರ ಬೋಂದೆಲ್ ನಿವಾಸಿಯಾಗಿದ್ದು, 420 ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾನೆ. ಸೆಕ್ಯುರಿಟಿ ಗಾರ್ಡ್ ಒಬ್ಬನಿಗೆ ಹಲ್ಲೆಗೈದ ಬಗ್ಗೆ ಬರ್ಕೆ ಠಾಣೆಯಲ್ಲಿ ಕೇಸು ದಾಖಲಾಗಿತ್ತು.
Mangalore Honey Trap Case, Eight including girl from Moodbidri arrested by CCB police. The incident took place at a private resort in Vamamjoor. The youth from kerala was honey trapped and had threatned him of Nude photos and video.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm