ಬ್ರೇಕಿಂಗ್ ನ್ಯೂಸ್
29-06-23 02:41 pm Mangalore Correspondent ಕ್ರೈಂ
ಮಂಗಳೂರು, ಜೂನ್ 29: ಯುವತಿಯನ್ನು 20 ದಿನಗಳ ಕಾಲ ಲಾಡ್ಜ್ ನಲ್ಲಿರಿಸಿ ನಿರಂತರ ಅತ್ಯಾಚಾರ ನಡೆಸಿದ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಕಡಬ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ.
ಕಡಬ ಮೂಲದ ಅನೀಶ್ ರೆಹಮಾನ್(29) ಬಂಧಿತ ಆರೋಪಿ. ಇನ್ಸ್ಟಾ ಗ್ರಾಂ ಮೂಲಕ ಬಂಟ್ವಾಳದ ಯುವತಿಗೆ ಯುವಕನ ಪರಿಚಯವಾಗಿದ್ದು ಆನಂತರ ಪ್ರೀತಿಸುವ ನಾಟಕವಾಡಿದ್ದ. ಅಲ್ಲದೆ, ಮದುವೆಯಾಗುವುದಾಗಿ ನಂಬಿಸಿ ನಿರಂತರ ದೈಹಿಕ ಸಂಪರ್ಕ ನಡೆಸಿದ್ದ. ಮೇ 28ರಿಂದ ಮಂಗಳೂರಿನ ಪೂಂಜಾ ಇಂಟರ್ನ್ಯಾಷನಲ್ ಹೊಟೇಲ್ ನಲ್ಲಿ ರೂಂ ಮಾಡಿದ್ದು 20 ದಿನಗಳ ಕಾಲ ಅತ್ಯಾಚಾರ ನಡೆಸಿದ್ದಾಗಿ ಯುವತಿ ದೂರು ನೀಡಿದ್ದಾಳೆ.
24 ವರ್ಷದ ಯುವತಿಯೂ ಮುಸ್ಲಿಂ ಆಗಿದ್ದು ಬಂಟ್ವಾಳದಿಂದ ಮಂಗಳೂರಿಗೆ ಶಿಕ್ಷಣ ಪಡೆಯುವುದಕ್ಕಾಗಿ ಬಂದು ಹೋಗುತ್ತಿದ್ದಳು. ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಅಧ್ಯಯನ ನಡೆಸುತ್ತಿದ್ದಳು. ಈ ವೇಳೆ, ಯುವಕನ ಪರಿಚಯ ಆಗಿದ್ದು ಮದುವೆಯಾಗುವ ನಂಬಿಕೆಯಲ್ಲಿ ಸುತ್ತಾಟ ನಡೆಸಿದ್ದಳು. ಅನೀಶ್ ರೆಹಮಾನ್ ಬೇರೆ ಬೇರೆ ಕಡೆ ಹೊಟೇಲ್ ರೂಮ್ ಮಾಡಿ, ಬಿಲ್ ಕೊಡದೆ ಪರಾರಿಯಾಗುವ ಚಟ ಹೊಂದಿದ್ದ. ಪೂಂಜಾ ಹೊಟೇಲ್ ನಲ್ಲಿಯೂ ಅದೇ ರೀತಿ ಮಾಡಿದ್ದು ಸಿಬಂದಿ ಹಿಡಿದು ಹಾಕಿದ್ದರು. ಬಳಿಕ ಯುವತಿ ಬಳಿಯಿದ್ದ ಲ್ಯಾಪ್ಟಾಪ್ ಅನ್ನು ಹೊಟೇಲಿನಲ್ಲಿ ಅಡವಿಟ್ಟು ಹೊರಬಂದಿದ್ದ.
ಲ್ಯಾಪ್ಟಾಪ್ ಕಾಣದಾಗಿದ್ದರಿಂದ ಯುವತಿ ಬಳಿ ಮನೆಯವರು ಪ್ರಶ್ನೆ ಮಾಡಿದ್ದರು. ಆನಂತರ, ಮನೆಯವರಿಗೆ ಇವರ ವಿಷಯ ತಿಳಿದು ಅನೀಶ್ ಬಗ್ಗೆ ಮಾಹಿತಿ ಸಂಗ್ರಹಿಸಿದಾಗ, ಆತನಿಗೆ ಮದುವೆಯಾಗಿರುವ ವಿಷಯ ತಿಳಿದುಬಂದಿತ್ತು. ಬಳಿಕ ಮಹಿಳಾ ಠಾಣೆಗೆ ದೂರು ನೀಡಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅನೀಶ್ ವಿರುದ್ಧ ಈ ಹಿಂದೆ ಗಾಂಜಾ ಸೇವನೆ ಪ್ರಕರಣದಲ್ಲಿ ಬಂಧಿತನಾಗಿದ್ದು ಕಾವೂರು ಠಾಣೆಯಲ್ಲಿ ಪ್ರಕರಣ ಎದುರಿಸುತ್ತಿದ್ದಾನೆ.
A girl was raped several times at a private lodge in Mangalore, cheated in the name of marriage, kadaba youth arrested. The arrested person has been identified as Anish Rehman (29). They both got in touch on Instagram. The girl was placed in the lodge for 20 days and was raped continuously.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm