ಬ್ರೇಕಿಂಗ್ ನ್ಯೂಸ್
29-06-23 02:41 pm Mangalore Correspondent ಕ್ರೈಂ
ಮಂಗಳೂರು, ಜೂನ್ 29: ಯುವತಿಯನ್ನು 20 ದಿನಗಳ ಕಾಲ ಲಾಡ್ಜ್ ನಲ್ಲಿರಿಸಿ ನಿರಂತರ ಅತ್ಯಾಚಾರ ನಡೆಸಿದ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಕಡಬ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ.
ಕಡಬ ಮೂಲದ ಅನೀಶ್ ರೆಹಮಾನ್(29) ಬಂಧಿತ ಆರೋಪಿ. ಇನ್ಸ್ಟಾ ಗ್ರಾಂ ಮೂಲಕ ಬಂಟ್ವಾಳದ ಯುವತಿಗೆ ಯುವಕನ ಪರಿಚಯವಾಗಿದ್ದು ಆನಂತರ ಪ್ರೀತಿಸುವ ನಾಟಕವಾಡಿದ್ದ. ಅಲ್ಲದೆ, ಮದುವೆಯಾಗುವುದಾಗಿ ನಂಬಿಸಿ ನಿರಂತರ ದೈಹಿಕ ಸಂಪರ್ಕ ನಡೆಸಿದ್ದ. ಮೇ 28ರಿಂದ ಮಂಗಳೂರಿನ ಪೂಂಜಾ ಇಂಟರ್ನ್ಯಾಷನಲ್ ಹೊಟೇಲ್ ನಲ್ಲಿ ರೂಂ ಮಾಡಿದ್ದು 20 ದಿನಗಳ ಕಾಲ ಅತ್ಯಾಚಾರ ನಡೆಸಿದ್ದಾಗಿ ಯುವತಿ ದೂರು ನೀಡಿದ್ದಾಳೆ.
24 ವರ್ಷದ ಯುವತಿಯೂ ಮುಸ್ಲಿಂ ಆಗಿದ್ದು ಬಂಟ್ವಾಳದಿಂದ ಮಂಗಳೂರಿಗೆ ಶಿಕ್ಷಣ ಪಡೆಯುವುದಕ್ಕಾಗಿ ಬಂದು ಹೋಗುತ್ತಿದ್ದಳು. ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಅಧ್ಯಯನ ನಡೆಸುತ್ತಿದ್ದಳು. ಈ ವೇಳೆ, ಯುವಕನ ಪರಿಚಯ ಆಗಿದ್ದು ಮದುವೆಯಾಗುವ ನಂಬಿಕೆಯಲ್ಲಿ ಸುತ್ತಾಟ ನಡೆಸಿದ್ದಳು. ಅನೀಶ್ ರೆಹಮಾನ್ ಬೇರೆ ಬೇರೆ ಕಡೆ ಹೊಟೇಲ್ ರೂಮ್ ಮಾಡಿ, ಬಿಲ್ ಕೊಡದೆ ಪರಾರಿಯಾಗುವ ಚಟ ಹೊಂದಿದ್ದ. ಪೂಂಜಾ ಹೊಟೇಲ್ ನಲ್ಲಿಯೂ ಅದೇ ರೀತಿ ಮಾಡಿದ್ದು ಸಿಬಂದಿ ಹಿಡಿದು ಹಾಕಿದ್ದರು. ಬಳಿಕ ಯುವತಿ ಬಳಿಯಿದ್ದ ಲ್ಯಾಪ್ಟಾಪ್ ಅನ್ನು ಹೊಟೇಲಿನಲ್ಲಿ ಅಡವಿಟ್ಟು ಹೊರಬಂದಿದ್ದ.
ಲ್ಯಾಪ್ಟಾಪ್ ಕಾಣದಾಗಿದ್ದರಿಂದ ಯುವತಿ ಬಳಿ ಮನೆಯವರು ಪ್ರಶ್ನೆ ಮಾಡಿದ್ದರು. ಆನಂತರ, ಮನೆಯವರಿಗೆ ಇವರ ವಿಷಯ ತಿಳಿದು ಅನೀಶ್ ಬಗ್ಗೆ ಮಾಹಿತಿ ಸಂಗ್ರಹಿಸಿದಾಗ, ಆತನಿಗೆ ಮದುವೆಯಾಗಿರುವ ವಿಷಯ ತಿಳಿದುಬಂದಿತ್ತು. ಬಳಿಕ ಮಹಿಳಾ ಠಾಣೆಗೆ ದೂರು ನೀಡಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅನೀಶ್ ವಿರುದ್ಧ ಈ ಹಿಂದೆ ಗಾಂಜಾ ಸೇವನೆ ಪ್ರಕರಣದಲ್ಲಿ ಬಂಧಿತನಾಗಿದ್ದು ಕಾವೂರು ಠಾಣೆಯಲ್ಲಿ ಪ್ರಕರಣ ಎದುರಿಸುತ್ತಿದ್ದಾನೆ.
A girl was raped several times at a private lodge in Mangalore, cheated in the name of marriage, kadaba youth arrested. The arrested person has been identified as Anish Rehman (29). They both got in touch on Instagram. The girl was placed in the lodge for 20 days and was raped continuously.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
25-09-25 09:58 am
Mangalore Correspondent
Mangaluru City Corporation: ಮಂಗಳೂರು ಮಹಾನಗರ ಪಾ...
24-09-25 10:48 pm
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am