ಬ್ರೇಕಿಂಗ್ ನ್ಯೂಸ್
03-11-20 12:52 pm Mangalore Correspondent ಕ್ರೈಂ
ಪುತ್ತೂರು, ನವೆಂಬರ್ 03: ಪುತ್ತೂರು ಪೇಟೆಯ ದರ್ಬೆಯಲ್ಲಿ ಸೋಮವಾರ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೂಲತಃ ಉಪ್ಪಿನಂಗಡಿ ನಿವಾಸಿ, ಸದ್ಯ ಪುತ್ತೂರಿನ ದರ್ಬೆಯಲ್ಲಿ ವಾಸವಿದ್ದ ಅಚ್ಚುತ್ತ ಶೆಟ್ಟಿ ಎಂಬವರ ಪತ್ನಿ ಗೀತಾ ಶೆಟ್ಟಿ (38) ಮೃತರು. ಗೀತಾ ತನ್ನ ಜೊತೆಗಿದ್ದ 9 ವರ್ಷದ ಸ್ವಾತಿ ಹಾಗೂ ಆರು ವರ್ಷದ ಅನನ್ಯ ಜೊತೆಗೆ ರಸ್ತೆ ದಾಟುತ್ತಿದ್ದರು. ಈ ವೇಳೆ, ಯಮರೂಪಿಯಾಗಿ ಧಾವಿಸಿದ್ದ ಸ್ವಿಫ್ಟ್ ಕಾರು ಇವರಿಗೆ ಡಿಕ್ಕಿಯಾಗಿದೆ. ಸ್ವಾತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರ ಗಾಯಗೊಂಡಿದ್ದ ಇನ್ನೊಬ್ಬಳು ಬಾಲಕಿ ಮತ್ತು ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.


ಸ್ವಾತಿ ಮತ್ತು ಅನನ್ಯ, ದರ್ಬೆಯ ದುಗ್ಗಮ್ಮ ದೇರಣ್ಣ ಶೆಟ್ಟಿ ಬಂಟರ ಭವನದಲ್ಲಿ ಕೆಲಸಕ್ಕಿದ್ದ ಕೂಲಿ ಕೆಲಸ ಮಾಡುತ್ತಿದ್ದ ದಂಪತಿಯ ಪುತ್ರಿಯರಾಗಿದ್ದರು. ಗೀತಾ ಶೆಟ್ಟಿಯ ಮನೆಯೂ ಪಕ್ಕದಲ್ಲೇ ಇದ್ದುದರಿಂದ ಮಕ್ಕಳನ್ನು ಗೀತಾರ ಬಳಿ ಬಿಟ್ಟು ದಂಪತಿ ಹೊರಗೆ ಹೋಗಿದ್ದರು. ಸೋಮವಾರ ಮಧ್ಯಾಹ್ನ ಊಟದ ಬಳಿಕ ಗೀತಾ ಮತ್ತು ಮಕ್ಕಳು ಸಭಾಭವನದತ್ತ ಹಿಂತಿರುಗುತ್ತಿದ್ದಾಗ ಮಂಗಳೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಚಾಲಕ ಥಾಮಸ್ ಎಂಬಾತನ ಅತಿವೇಗದ ಚಾಲನೆಯಿಂದಾಗಿ ಜವರಾಯನ ರೂಪದಲ್ಲಿ ಬಂದೆರಗಿತ್ತು. ಮಕ್ಕಳು ಮತ್ತು ಮಹಿಳೆಗೆ ಡಿಕ್ಕಿಯಾದ ಬಳಿಕ ಕಾರು, ಅಲ್ಲಿಯೇ ನಿಲ್ಲಿಸಿದ್ದ ಉಬೈದ್ ಎಂಬವರ ಎಸ್ – ಕ್ರಾಸ್ ಕಾರಿಗೆ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಎಸ್-ಕ್ರಾಸ್ ಕಾರಿನ ಹಿಂಬದಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಾಲಕನ ಧಾವಂತ ಮತ್ತು ಅತಿವೇಗದ ನಿರ್ಲಕ್ಷ್ಯ ಚಾಲನೆಯಿಂದಾಗಿ ಇಬ್ಬರು ದುರಂತ ಸಾವು ಕಂಡಿದ್ದಾರೆ.
In the accident which occurred in Puttur, Darbe highway two pedestrians a girl student and a woman have lost their lives.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm