ಬ್ರೇಕಿಂಗ್ ನ್ಯೂಸ್
07-07-23 07:19 pm HK News Desk ಕ್ರೈಂ
ಕಲಬುರಗಿ, ಜು 7: ಒಂಬತ್ತು ವರ್ಷದ ಬಾಲಕಿ ಮೇಲೆ ನಾಲ್ವರು ಅಪ್ರಾಪ್ತ ಬಾಲಕರು ಅತ್ಯಾಚಾರವೆಸಗಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿಯ ನಗರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಯುತ್ತಿದೆ.
ಈ ಘಟನೆ ಜುಲೈ 5ರಂದು ಮಧ್ಯಾಹ್ನ ಬಾಲಕಿಯ ಮನೆ ಮೇಲಿನ ಮಹಡಿಯಲ್ಲಿ ನಡೆದಿದೆ. ಅತ್ಯಾಚಾರವೆಸಗಿದವರನ್ನು ನಾಲ್ವರ ಅಪ್ರಾಪ್ತ ವಯಸ್ಸಿನ ಹುಡುಗರು ಎಂದು ಗುರುತಿಸಲಾಗಿದೆ. ಬಾಲಕಿ ಪೋಷಕರು ಕಲಬುರಗಿ ನಗರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಾಲಕಿ ಅಸ್ವಸ್ಥಗೊಂಡಿದ್ದು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ರವಾನಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಕರಣ ದಾಖಲಾದ ಬಳಿಕ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಲ್ವರ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸರ ಪ್ರಕಾರ, ಬಾಲಕಿಯ ಪೋಷಕರು ಒಂದು ವಾರದ ಹಿಂದಷ್ಟೇ ಬಡಾವಣೆಯ ಮನೆಗೆ ಬಾಡಿಗೆಗೆ ಬಂದಿದ್ದರು. ಬುಧವಾರ ಮಧ್ಯಾಹ್ನ ಬಾಲಕಿ ಮನೆಯ ಎದುರು ಕುಳಿತಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ಮೂವರು ಬಾಲಕರು ಚಾಕೊಲೇಟ್ ಕೊಡಿಸುವ ನೆಪದಲ್ಲಿ ಆಕೆಯನ್ನು ಮನೆಯೊಂದಕ್ಕೆ ಕರೆದೊಯ್ದು, ಅಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.
ಸಂತ್ರಸ್ತೆ ಹಿಂದಿನ ದಿನ ಶಾಲೆಗೆ ಹೋಗಿದ್ದಳು ಮತ್ತು ಮನೆಗೆ ಹಿಂತಿರುಗಿದ ನಂತರ ಬಾದಾಮಿಯನ್ನು ಒಡೆಯಲು ಪ್ರತಯ್ನಿಸುತ್ತಾ ಕುಳಿತಿದ್ದ ವೇಳೆ ಬಾಲಕರ ಗುಂಪು ಆಕೆಯನ್ನು ಕರೆದೊಯ್ದಿದೆ. ಕೃತ್ಯ ಎಸಗಿದ ನಂತರ ಆರೋಪಿಗಳು ಯಾರಿಗೂ ಹೇಳದಂತೆ ಸಂತ್ರಸ್ತೆಗೆ ಬೆದರಿಕೆಯೊಡ್ಡಿದ್ದು, ಯಾರೊಂದಿಗಾದರೂ ಬಾಯಿಬಿಟ್ಟರೆ ಆಕೆಯನ್ನು ಕೊಲ್ಲುವುದಾಗಿ ಹೇಳಿದ್ದಾರೆ.
ಆಘಾತಕ್ಕೊಳಗಾದ ಬಾಲಕಿ ಮನೆಗೆ ಬಂದು ತಾಯಿಯ ಬಳಿ ಕೃತ್ಯವನ್ನು ಹೇಳಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 366 ಎ (ಲೈಂಗಿಕ ಅಪರಾಧಕ್ಕಾಗಿ ಅಪ್ರಾಪ್ತ ಬಾಲಕಿಯ ವಶ), 376 (ಜಿ) (ಗ್ಯಾಂಗ್-ರೇಪ್), 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
A group of four minor boys is said to have molested a nine-year-old girl in Kalaburagi at noon on Wednesday. Following a complaint by the girl’s father, a case has been registered in the Kalaburagi Women Police Station.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm