ಬ್ರೇಕಿಂಗ್ ನ್ಯೂಸ್
07-07-23 11:00 pm HK News Desk ಕ್ರೈಂ
ಭೋಪಾಲ್, ಜು. 07: ಇಬ್ಬರು ದಲಿತ ಯುವಕರಿಗೆ ಬಲವಂತವಾಗಿ ಮಲ ತಿನ್ನಿಸಿ ಹೀನ ಕೃತ್ಯ ಎಸಗಿದ್ದ ಆರೋಪದ ಮೇಲೆ ಮಧ್ಯಪ್ರದೇಶದ ಶಿವಪುರಿ ಆಡಳಿತವು ಒಂದೇ ಕುಟುಂಬದ ಏಳು ಸದಸ್ಯರನ್ನು ಬಂಧಿಸಿದೆ. ಇದಲ್ಲದೆ ಆರೋಪಿಗಳ ಮನೆಗಳನ್ನು ಕೆಡವಿದೆ.
ದಲಿತ ಯುವಕರು ಆರೋಪಿಗಳ ಮನೆಯ ಯುವತಿಯೊಂದಿಗೆ ಮಾತನಾಡ ಕಾರಣ ಅಮಾನವೀಯ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಜೂನ್ 30 ರಂದು ಶಿವಪುರಿ ಜಿಲ್ಲೆಯ ವರ್ಖಾಡಿ ಗ್ರಾಮದಲ್ಲಿ ದಲಿತ ವ್ಯಕ್ತಿಯ ಮೇಲೆ ದೌರ್ಜನ್ಯ ನಡೆದಿತ್ತು, ಆದರೆ ವಿಡಿಯೋ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಶಿವಪುರಿ ಪೊಲೀಸ್ ಅಧೀಕ್ಷಕ (ಎಸ್ಪಿ) ರಘುವಂಶ್ ಸಿಂಗ್ ಭಡೋರಿಯಾ ಪ್ರಕಾರ, ರಾಜ್ಯದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ ನಿರ್ದೇಶನದ ಮೇರೆಗೆ ಕುಟುಂಬದ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದಲ್ಲಿ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಯನ್ನು ಹಾಕಲು ಆದೇಶಿಸಿದ್ದಾರೆ.
"23 ಮತ್ತು 24 ವರ್ಷದ ಇಬ್ಬರು ಯುವಕರು ಆರೋಪಿಯ ಕುಟುಂಬದ 26 ವರ್ಷದ ಯುವತಿಯೊಂದಿಗೆ ಫೋನ್ನಲ್ಲಿ ಮಾತನಾಡುತ್ತಿದ್ದರು. ಈ ವಿಷಯ ತಿಳಿದ ಮನೆಯವರು ಯುವತಿಯನ್ನು ವರ್ಖಾಡಿ ಗ್ರಾಮದಲ್ಲಿರುವ ಇಬ್ಬರನ್ನು ತಮ್ಮ ಮನೆಗೆ ಕರೆ ತರುವಂತೆ ತಿಳಿಸಿದ್ದಾರೆ. ಜೂನ್ 30 ರಂದು ಇಬ್ಬರು ಬಂದಾಗ ಮನೆಯವರು ಅಮಾನುಷವಾಗಿ ಥಳಿಸಿದ್ದಾರೆ. ಆರೋಪಿಗಳು ದಲಿತರ ಮುಖಕ್ಕೆ ಕಪ್ಪು ಬಣ್ಣ ಬಳಿದು, ಮಲವನ್ನು ತಿನ್ನುವಂತೆ ಒತ್ತಾಯಿಸಿದ್ದಾರೆ. ಅವರಿಗೆ ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ" ಎಂದು ಎಸ್ಪಿ ರಘುವಂಶ್ ಸಿಂಗ್ ಭಡೋರಿಯಾ ಹೇಳಿದ್ದಾರೆ.
ಆದರೆ ಮಹಿಳೆಗೆ ಕಿರುಕುಳ ನೀಡಿದ್ದಕ್ಕಾಗಿ ಮತ್ತು ಅನುಚಿತವಾಗಿ ಸ್ಪರ್ಶಿಸಿದ್ದಕ್ಕಾಗಿ ಇಬ್ಬರು ಯುವಕರನ್ನು ಥಳಿಸಿದ್ದಾರೆ ಎಂದು ಕುಟುಂಬದವರು ಹೇಳಿದ್ದಾರೆ. ತನಿಖೆಯ ಸಂದರ್ಭದಲ್ಲಿ ಕುಟುಂಬದವರ ಹೇಳಿಕೆಗಳು ಸುಳ್ಳು ಎಂದು ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಆರೋಪಿಗಳು ತಮ್ಮನ್ನು ಲೈಂಗಿಕ ಕಿರುಕುಳದ ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.
ಆರೋಪಿಗಳಾದ ಅಜ್ಮತ್ ಖಾನ್, ವಕೀಲ್ ಖಾನ್, ಆರಿಫ್ ಖಾನ್, ಶಾಹಿದ್ ಖಾನ್, ಇಸ್ಲಾಂ ಖಾನ್, ರಹೀಶಾ ಬಾನೋ ಮತ್ತು ಸೈನಾ ಬಾನೊ ಅವರನ್ನು ಬುಧವಾರ ಬಂಧಿಸಿ ಗುರುವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಜೈಲಿಗೆ ಕಳುಹಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.
Two men belonging to the Dalit community were caught and thrashed by villagers in Madhya Pradesh’s Shivpuri district after a few Muslim women accused them of harassment, police said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm