ಬ್ರೇಕಿಂಗ್ ನ್ಯೂಸ್
07-07-23 11:12 pm Mangalore Correspondent ಕ್ರೈಂ
ಮಂಗಳೂರು, ಜುಲೈ 7: ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕೊಡಿಸುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 1,65,800 ರೂ.ಗಳನ್ನು ಮೋಸದಿಂದ ಪೀಕಿಸಿಕೊಂಡು ವಂಚನೆ ಎಸಗಿರುವ ಬಗ್ಗೆ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು ನಿವಾಸಿ ವ್ಯಕ್ತಿಗೆ ಅಪರಿಚಿತ ವ್ಯಕ್ತಿ ಜುಲೈ 5ರಂದು ವಾಟ್ಸಪ್ ನಂಬರ್ 1(626)4772787 ರಿ೦ದ ಆನ್ ಲೈನ್ ಪಾರ್ಟ್ ಟೈಮ್ ಜಾಬ್ ಬಗ್ಗೆ ಮೆಸೇಜ್ ಕಳುಹಿಸಿದ್ದ. ಇದನ್ನು ನಂಬಿದ ದೂರುದಾರರು ಆನ್ ಲೈನ್ ಕೆಲಸದ ಉದ್ದೇಶದಿಂದ ಸಂದೇಶಕ್ಕೆ ಉತ್ತರಿಸಿದ್ದಾರೆ. ಅಪರಿಚಿತರು ಗೂಗಲ್ ಮ್ಯಾಪ್ ಮೂಲಕ ಕೆಲಸ ಮಾಡುವ ಬಗ್ಗೆ J-The New Generation ಎಂಬ ಟೆಲಿಗ್ರಾಂ ಗ್ರೂಪ್ ಗೆ ಸೇರಿಸಿ ಅದರಲ್ಲಿ ಪ್ರಿಪೇಡ್ ಟಾಸ್ಕ್ ಆಡಬೇಕೆಂದು ತಿಳಿಸಿದ್ದರು.
ಮೊದಲಿಗೆ 150 ರೂ.ಗಳನ್ನು ದೂರುದಾರರ ಬ್ಯಾಂಕ್ ಖಾತೆಗೆ ವರ್ಗಾಯಿಸಿ ನಂತರ ಅವರಿಗೆ ಹಣ ಹೂಡಿಕೆ ಮಾಡಲು ತಿಳಿಸಿದ್ದರು. ದೂರುದಾರರು ಹೂಡಿಕೆ ಮಾಡಿದ ಕೆಲವು ಮೊತ್ತಗಳಿಗೆ ಹೆಚ್ಚಿನ ಹಣವನ್ನು ಅವರ ಖಾತೆಗೆ ವರ್ಗಾಯಿಸುತ್ತಿದ್ದರು. ಇದನ್ನು ಸತ್ಯವೆಂದು ನಂಬಿದ ದೂರುದಾರರು ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುವುದೆಂದು ನಂಬಿ ತನ್ನ ಬ್ಯಾಂಕ್ ಖಾತೆಯಿಂದ ಅಪರಿಚಿತ ಕಳುಹಿಸಿಕೊಟ್ಟ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 1,65,800/-ರೂ.ಗಳನ್ನು ವರ್ಗಾಯಿಸಿದ್ದರು.
ಅದರ ಬದಲಿಗೆ, ಹಣ ಪಾವತಿಸಲು ಹೇಳಿದಾಗ ಅಪರಿಚಿತ ವ್ಯಕ್ತಿ ಹಣ ಪಾವತಿಸಲು ನಿರಾಕರಿಸಿದ್ದ. ಇದರಿಂದ ಮೋಸದ ಅರಿವಾಗಿ ಹಣ ಕಳಕೊಂಡ ವ್ಯಕ್ತಿ ಆನ್ ಲೈನ್ ವಂಚನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
A case has been registered at The Mangaluru Cyber Police Station against a man for allegedly duping a man of Rs 65,800, on the pretext of providing him an online part-time job.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 04:38 pm
Mangalore Correspondent
India’s Largest Job Fair ‘Alva’s Pragati 2025...
26-07-25 11:37 am
Congress, Mangalore: ಸಿದ್ದರಾಮಯ್ಯ ಆಡಳಿತದಲ್ಲೇ ದ...
26-07-25 10:44 am
Dharmasthala Case, SIT Meeting, Anucheth, Jit...
25-07-25 08:25 pm
DIG Anucheth Mangalore, SIT Dharmasthala: ಎಸ್...
25-07-25 06:05 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am