ಬ್ರೇಕಿಂಗ್ ನ್ಯೂಸ್
07-07-23 11:12 pm Mangalore Correspondent ಕ್ರೈಂ
ಮಂಗಳೂರು, ಜುಲೈ 7: ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕೊಡಿಸುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 1,65,800 ರೂ.ಗಳನ್ನು ಮೋಸದಿಂದ ಪೀಕಿಸಿಕೊಂಡು ವಂಚನೆ ಎಸಗಿರುವ ಬಗ್ಗೆ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು ನಿವಾಸಿ ವ್ಯಕ್ತಿಗೆ ಅಪರಿಚಿತ ವ್ಯಕ್ತಿ ಜುಲೈ 5ರಂದು ವಾಟ್ಸಪ್ ನಂಬರ್ 1(626)4772787 ರಿ೦ದ ಆನ್ ಲೈನ್ ಪಾರ್ಟ್ ಟೈಮ್ ಜಾಬ್ ಬಗ್ಗೆ ಮೆಸೇಜ್ ಕಳುಹಿಸಿದ್ದ. ಇದನ್ನು ನಂಬಿದ ದೂರುದಾರರು ಆನ್ ಲೈನ್ ಕೆಲಸದ ಉದ್ದೇಶದಿಂದ ಸಂದೇಶಕ್ಕೆ ಉತ್ತರಿಸಿದ್ದಾರೆ. ಅಪರಿಚಿತರು ಗೂಗಲ್ ಮ್ಯಾಪ್ ಮೂಲಕ ಕೆಲಸ ಮಾಡುವ ಬಗ್ಗೆ J-The New Generation ಎಂಬ ಟೆಲಿಗ್ರಾಂ ಗ್ರೂಪ್ ಗೆ ಸೇರಿಸಿ ಅದರಲ್ಲಿ ಪ್ರಿಪೇಡ್ ಟಾಸ್ಕ್ ಆಡಬೇಕೆಂದು ತಿಳಿಸಿದ್ದರು.
ಮೊದಲಿಗೆ 150 ರೂ.ಗಳನ್ನು ದೂರುದಾರರ ಬ್ಯಾಂಕ್ ಖಾತೆಗೆ ವರ್ಗಾಯಿಸಿ ನಂತರ ಅವರಿಗೆ ಹಣ ಹೂಡಿಕೆ ಮಾಡಲು ತಿಳಿಸಿದ್ದರು. ದೂರುದಾರರು ಹೂಡಿಕೆ ಮಾಡಿದ ಕೆಲವು ಮೊತ್ತಗಳಿಗೆ ಹೆಚ್ಚಿನ ಹಣವನ್ನು ಅವರ ಖಾತೆಗೆ ವರ್ಗಾಯಿಸುತ್ತಿದ್ದರು. ಇದನ್ನು ಸತ್ಯವೆಂದು ನಂಬಿದ ದೂರುದಾರರು ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುವುದೆಂದು ನಂಬಿ ತನ್ನ ಬ್ಯಾಂಕ್ ಖಾತೆಯಿಂದ ಅಪರಿಚಿತ ಕಳುಹಿಸಿಕೊಟ್ಟ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 1,65,800/-ರೂ.ಗಳನ್ನು ವರ್ಗಾಯಿಸಿದ್ದರು.
ಅದರ ಬದಲಿಗೆ, ಹಣ ಪಾವತಿಸಲು ಹೇಳಿದಾಗ ಅಪರಿಚಿತ ವ್ಯಕ್ತಿ ಹಣ ಪಾವತಿಸಲು ನಿರಾಕರಿಸಿದ್ದ. ಇದರಿಂದ ಮೋಸದ ಅರಿವಾಗಿ ಹಣ ಕಳಕೊಂಡ ವ್ಯಕ್ತಿ ಆನ್ ಲೈನ್ ವಂಚನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
A case has been registered at The Mangaluru Cyber Police Station against a man for allegedly duping a man of Rs 65,800, on the pretext of providing him an online part-time job.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am