ಬ್ರೇಕಿಂಗ್ ನ್ಯೂಸ್
07-07-23 11:12 pm Mangalore Correspondent ಕ್ರೈಂ
ಮಂಗಳೂರು, ಜುಲೈ 7: ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕೊಡಿಸುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 1,65,800 ರೂ.ಗಳನ್ನು ಮೋಸದಿಂದ ಪೀಕಿಸಿಕೊಂಡು ವಂಚನೆ ಎಸಗಿರುವ ಬಗ್ಗೆ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು ನಿವಾಸಿ ವ್ಯಕ್ತಿಗೆ ಅಪರಿಚಿತ ವ್ಯಕ್ತಿ ಜುಲೈ 5ರಂದು ವಾಟ್ಸಪ್ ನಂಬರ್ 1(626)4772787 ರಿ೦ದ ಆನ್ ಲೈನ್ ಪಾರ್ಟ್ ಟೈಮ್ ಜಾಬ್ ಬಗ್ಗೆ ಮೆಸೇಜ್ ಕಳುಹಿಸಿದ್ದ. ಇದನ್ನು ನಂಬಿದ ದೂರುದಾರರು ಆನ್ ಲೈನ್ ಕೆಲಸದ ಉದ್ದೇಶದಿಂದ ಸಂದೇಶಕ್ಕೆ ಉತ್ತರಿಸಿದ್ದಾರೆ. ಅಪರಿಚಿತರು ಗೂಗಲ್ ಮ್ಯಾಪ್ ಮೂಲಕ ಕೆಲಸ ಮಾಡುವ ಬಗ್ಗೆ J-The New Generation ಎಂಬ ಟೆಲಿಗ್ರಾಂ ಗ್ರೂಪ್ ಗೆ ಸೇರಿಸಿ ಅದರಲ್ಲಿ ಪ್ರಿಪೇಡ್ ಟಾಸ್ಕ್ ಆಡಬೇಕೆಂದು ತಿಳಿಸಿದ್ದರು.
ಮೊದಲಿಗೆ 150 ರೂ.ಗಳನ್ನು ದೂರುದಾರರ ಬ್ಯಾಂಕ್ ಖಾತೆಗೆ ವರ್ಗಾಯಿಸಿ ನಂತರ ಅವರಿಗೆ ಹಣ ಹೂಡಿಕೆ ಮಾಡಲು ತಿಳಿಸಿದ್ದರು. ದೂರುದಾರರು ಹೂಡಿಕೆ ಮಾಡಿದ ಕೆಲವು ಮೊತ್ತಗಳಿಗೆ ಹೆಚ್ಚಿನ ಹಣವನ್ನು ಅವರ ಖಾತೆಗೆ ವರ್ಗಾಯಿಸುತ್ತಿದ್ದರು. ಇದನ್ನು ಸತ್ಯವೆಂದು ನಂಬಿದ ದೂರುದಾರರು ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುವುದೆಂದು ನಂಬಿ ತನ್ನ ಬ್ಯಾಂಕ್ ಖಾತೆಯಿಂದ ಅಪರಿಚಿತ ಕಳುಹಿಸಿಕೊಟ್ಟ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 1,65,800/-ರೂ.ಗಳನ್ನು ವರ್ಗಾಯಿಸಿದ್ದರು.
ಅದರ ಬದಲಿಗೆ, ಹಣ ಪಾವತಿಸಲು ಹೇಳಿದಾಗ ಅಪರಿಚಿತ ವ್ಯಕ್ತಿ ಹಣ ಪಾವತಿಸಲು ನಿರಾಕರಿಸಿದ್ದ. ಇದರಿಂದ ಮೋಸದ ಅರಿವಾಗಿ ಹಣ ಕಳಕೊಂಡ ವ್ಯಕ್ತಿ ಆನ್ ಲೈನ್ ವಂಚನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
A case has been registered at The Mangaluru Cyber Police Station against a man for allegedly duping a man of Rs 65,800, on the pretext of providing him an online part-time job.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm