ಬ್ರೇಕಿಂಗ್ ನ್ಯೂಸ್
07-07-23 11:12 pm Mangalore Correspondent ಕ್ರೈಂ
ಮಂಗಳೂರು, ಜುಲೈ 7: ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕೊಡಿಸುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 1,65,800 ರೂ.ಗಳನ್ನು ಮೋಸದಿಂದ ಪೀಕಿಸಿಕೊಂಡು ವಂಚನೆ ಎಸಗಿರುವ ಬಗ್ಗೆ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು ನಿವಾಸಿ ವ್ಯಕ್ತಿಗೆ ಅಪರಿಚಿತ ವ್ಯಕ್ತಿ ಜುಲೈ 5ರಂದು ವಾಟ್ಸಪ್ ನಂಬರ್ 1(626)4772787 ರಿ೦ದ ಆನ್ ಲೈನ್ ಪಾರ್ಟ್ ಟೈಮ್ ಜಾಬ್ ಬಗ್ಗೆ ಮೆಸೇಜ್ ಕಳುಹಿಸಿದ್ದ. ಇದನ್ನು ನಂಬಿದ ದೂರುದಾರರು ಆನ್ ಲೈನ್ ಕೆಲಸದ ಉದ್ದೇಶದಿಂದ ಸಂದೇಶಕ್ಕೆ ಉತ್ತರಿಸಿದ್ದಾರೆ. ಅಪರಿಚಿತರು ಗೂಗಲ್ ಮ್ಯಾಪ್ ಮೂಲಕ ಕೆಲಸ ಮಾಡುವ ಬಗ್ಗೆ J-The New Generation ಎಂಬ ಟೆಲಿಗ್ರಾಂ ಗ್ರೂಪ್ ಗೆ ಸೇರಿಸಿ ಅದರಲ್ಲಿ ಪ್ರಿಪೇಡ್ ಟಾಸ್ಕ್ ಆಡಬೇಕೆಂದು ತಿಳಿಸಿದ್ದರು.
ಮೊದಲಿಗೆ 150 ರೂ.ಗಳನ್ನು ದೂರುದಾರರ ಬ್ಯಾಂಕ್ ಖಾತೆಗೆ ವರ್ಗಾಯಿಸಿ ನಂತರ ಅವರಿಗೆ ಹಣ ಹೂಡಿಕೆ ಮಾಡಲು ತಿಳಿಸಿದ್ದರು. ದೂರುದಾರರು ಹೂಡಿಕೆ ಮಾಡಿದ ಕೆಲವು ಮೊತ್ತಗಳಿಗೆ ಹೆಚ್ಚಿನ ಹಣವನ್ನು ಅವರ ಖಾತೆಗೆ ವರ್ಗಾಯಿಸುತ್ತಿದ್ದರು. ಇದನ್ನು ಸತ್ಯವೆಂದು ನಂಬಿದ ದೂರುದಾರರು ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುವುದೆಂದು ನಂಬಿ ತನ್ನ ಬ್ಯಾಂಕ್ ಖಾತೆಯಿಂದ ಅಪರಿಚಿತ ಕಳುಹಿಸಿಕೊಟ್ಟ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 1,65,800/-ರೂ.ಗಳನ್ನು ವರ್ಗಾಯಿಸಿದ್ದರು.
ಅದರ ಬದಲಿಗೆ, ಹಣ ಪಾವತಿಸಲು ಹೇಳಿದಾಗ ಅಪರಿಚಿತ ವ್ಯಕ್ತಿ ಹಣ ಪಾವತಿಸಲು ನಿರಾಕರಿಸಿದ್ದ. ಇದರಿಂದ ಮೋಸದ ಅರಿವಾಗಿ ಹಣ ಕಳಕೊಂಡ ವ್ಯಕ್ತಿ ಆನ್ ಲೈನ್ ವಂಚನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
A case has been registered at The Mangaluru Cyber Police Station against a man for allegedly duping a man of Rs 65,800, on the pretext of providing him an online part-time job.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm