ಬ್ರೇಕಿಂಗ್ ನ್ಯೂಸ್
08-07-23 10:45 pm Mangalore Correspondent ಕ್ರೈಂ
ಮಂಗಳೂರು, ಜುಲೈ 8: ತನ್ನಲ್ಲಿ ಕೆಲಸ ಮಾಡಿಕೊಂಡಿದ್ದ ಉತ್ತರ ಭಾರತ ಮೂಲದ ವ್ಯಕ್ತಿಯೊಬ್ಬನನ್ನು ಬೆಂಕಿ ಕೊಟ್ಟು ಸಾಯಿಸಿ ವಿದ್ಯುತ್ ಶಾಕ್ ಆಗಿ ಸತ್ತಿದ್ದಾಗಿ ನಾಟಕ ಮಾಡಿರುವ ಘಟನೆ ನಗರದ ಪಾಂಡೇಶ್ವರ ಠಾಣೆ ವ್ಯಾಪ್ತಿಯ ಮುಳಿಹಿತ್ಲು ಎಂಬಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮುಳಿಹಿತ್ಲು ಜಂಕ್ಷನ್ನಲ್ಲಿ ಮಶುಪಾ ಜನರಲ್ ಸ್ಟೋರ್ ಎಂಬ ಅಂಗಡಿಯಿದ್ದು, ಅದರಲ್ಲಿ ಗಟ್ಯಾನ್ ಥಿ ಜಗು ಎಂಬ ಉತ್ತರ ಭಾರತ ಮೂಲದ ವ್ಯಕ್ತಿ ಕೆಲಸ ಮಾಡಿಕೊಂಡಿದ್ದ. ಜನರಲ್ ಸ್ಟೋರ್ ಮಾಲೀಕ ತೌಲಿನ್ ಹಸನ್ (32) ಆ ವ್ಯಕ್ತಿಯನ್ನು ಅಂಗಡಿಯಲ್ಲಿ ಕೆಲಸಕ್ಕೆ ನಿಲ್ಲಿಸಿದ್ದಲ್ಲದೆ, ಅದೇ ಕಟ್ಟಡದ ಹಿಂಭಾಗದಲ್ಲಿ ಕೊಠಡಿ ಕೊಟ್ಟು ಉಳಿಯಲು ವ್ಯವಸ್ಥೆ ಮಾಡಿದ್ದ. ಶನಿವಾರ ಮಧ್ಯಾಹ್ನ ಯಾವುದೋ ದ್ವೇಷದಿಂದ ತೌಲಿನ್ ಹಸನ್, ಯುವಕನಿಗೆ ಬೆಂಕಿ ಕೊಟ್ಟಿದ್ದಾನೆ ಎನ್ನಲಾಗುತ್ತಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಧ್ಯಾಹ್ನ 1.30ರ ಸುಮಾರಿಗೆ ಬೆಂಕಿಯಿಂದ ಸುಟ್ಟ ಗಾಯಕ್ಕೊಳಗಾದ ವ್ಯಕ್ತಿಯನ್ನು ತೌಸಿನ್ ವೆನ್ಲಾಕ್ ಆಸ್ಪತ್ರೆಗೆ ಸೇರಿಸಿದ್ದ. ಇದೇ ವೇಳೆ, ಆತನಿಗೆ ಟ್ರಾನ್ಸ್ ಫಾರ್ಮರ್ ಕಂಬದ ಬಳಿ ವಿದ್ಯುತ್ ಶಾಕ್ ಆಗಿದೆಯೆಂದು ಸ್ಥಳೀಯರು ಮತ್ತು ಪೊಲೀಸರಲ್ಲಿ ತಪ್ಪು ಮಾಹಿತಿ ನೀಡಿದ್ದಾನೆ. ಅಲ್ಲದೆ, ಒಟ್ಟು ಪ್ರಕರಣವನ್ನು ಮುಚ್ಚಿ ಹಾಕಲು ನೋಡಿದ್ದಾನೆ. ಅಷ್ಟರಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ವ್ಯಕ್ತಿ ಸಾವಿಗೀಡಾಗಿದ್ದ. ಪೊಲೀಸರು ತೌಲಿನ್ ಹಸನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಸತ್ಯ ವಿಚಾರ ಬಾಯ್ಬಿಟ್ಟಿದ್ದಾನೆ. ಸಾವಿಗೀಡಾದ ಗಟ್ಯಾನ್ ಥಗು ಎಲ್ಲಿಯವನು ಅನ್ನುವ ಸ್ಪಷ್ಟ ಮಾಹಿತಿ ಇಲ್ಲ. ಘಟನೆ ಪಾಂಡೇಶ್ವರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.
North Indian Man laborer Murdered and burnt with fire at Pandeshwar in Mangalore. The deceased has been identified as Thoulin Hussein. He was killed due to silly fight. His native is yet to be identified. Police have regustered the case.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm