ಬ್ರೇಕಿಂಗ್ ನ್ಯೂಸ್
08-07-23 10:45 pm Mangalore Correspondent ಕ್ರೈಂ
ಮಂಗಳೂರು, ಜುಲೈ 8: ತನ್ನಲ್ಲಿ ಕೆಲಸ ಮಾಡಿಕೊಂಡಿದ್ದ ಉತ್ತರ ಭಾರತ ಮೂಲದ ವ್ಯಕ್ತಿಯೊಬ್ಬನನ್ನು ಬೆಂಕಿ ಕೊಟ್ಟು ಸಾಯಿಸಿ ವಿದ್ಯುತ್ ಶಾಕ್ ಆಗಿ ಸತ್ತಿದ್ದಾಗಿ ನಾಟಕ ಮಾಡಿರುವ ಘಟನೆ ನಗರದ ಪಾಂಡೇಶ್ವರ ಠಾಣೆ ವ್ಯಾಪ್ತಿಯ ಮುಳಿಹಿತ್ಲು ಎಂಬಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮುಳಿಹಿತ್ಲು ಜಂಕ್ಷನ್ನಲ್ಲಿ ಮಶುಪಾ ಜನರಲ್ ಸ್ಟೋರ್ ಎಂಬ ಅಂಗಡಿಯಿದ್ದು, ಅದರಲ್ಲಿ ಗಟ್ಯಾನ್ ಥಿ ಜಗು ಎಂಬ ಉತ್ತರ ಭಾರತ ಮೂಲದ ವ್ಯಕ್ತಿ ಕೆಲಸ ಮಾಡಿಕೊಂಡಿದ್ದ. ಜನರಲ್ ಸ್ಟೋರ್ ಮಾಲೀಕ ತೌಲಿನ್ ಹಸನ್ (32) ಆ ವ್ಯಕ್ತಿಯನ್ನು ಅಂಗಡಿಯಲ್ಲಿ ಕೆಲಸಕ್ಕೆ ನಿಲ್ಲಿಸಿದ್ದಲ್ಲದೆ, ಅದೇ ಕಟ್ಟಡದ ಹಿಂಭಾಗದಲ್ಲಿ ಕೊಠಡಿ ಕೊಟ್ಟು ಉಳಿಯಲು ವ್ಯವಸ್ಥೆ ಮಾಡಿದ್ದ. ಶನಿವಾರ ಮಧ್ಯಾಹ್ನ ಯಾವುದೋ ದ್ವೇಷದಿಂದ ತೌಲಿನ್ ಹಸನ್, ಯುವಕನಿಗೆ ಬೆಂಕಿ ಕೊಟ್ಟಿದ್ದಾನೆ ಎನ್ನಲಾಗುತ್ತಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಧ್ಯಾಹ್ನ 1.30ರ ಸುಮಾರಿಗೆ ಬೆಂಕಿಯಿಂದ ಸುಟ್ಟ ಗಾಯಕ್ಕೊಳಗಾದ ವ್ಯಕ್ತಿಯನ್ನು ತೌಸಿನ್ ವೆನ್ಲಾಕ್ ಆಸ್ಪತ್ರೆಗೆ ಸೇರಿಸಿದ್ದ. ಇದೇ ವೇಳೆ, ಆತನಿಗೆ ಟ್ರಾನ್ಸ್ ಫಾರ್ಮರ್ ಕಂಬದ ಬಳಿ ವಿದ್ಯುತ್ ಶಾಕ್ ಆಗಿದೆಯೆಂದು ಸ್ಥಳೀಯರು ಮತ್ತು ಪೊಲೀಸರಲ್ಲಿ ತಪ್ಪು ಮಾಹಿತಿ ನೀಡಿದ್ದಾನೆ. ಅಲ್ಲದೆ, ಒಟ್ಟು ಪ್ರಕರಣವನ್ನು ಮುಚ್ಚಿ ಹಾಕಲು ನೋಡಿದ್ದಾನೆ. ಅಷ್ಟರಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ವ್ಯಕ್ತಿ ಸಾವಿಗೀಡಾಗಿದ್ದ. ಪೊಲೀಸರು ತೌಲಿನ್ ಹಸನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಸತ್ಯ ವಿಚಾರ ಬಾಯ್ಬಿಟ್ಟಿದ್ದಾನೆ. ಸಾವಿಗೀಡಾದ ಗಟ್ಯಾನ್ ಥಗು ಎಲ್ಲಿಯವನು ಅನ್ನುವ ಸ್ಪಷ್ಟ ಮಾಹಿತಿ ಇಲ್ಲ. ಘಟನೆ ಪಾಂಡೇಶ್ವರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.
North Indian Man laborer Murdered and burnt with fire at Pandeshwar in Mangalore. The deceased has been identified as Thoulin Hussein. He was killed due to silly fight. His native is yet to be identified. Police have regustered the case.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 04:38 pm
Mangalore Correspondent
India’s Largest Job Fair ‘Alva’s Pragati 2025...
26-07-25 11:37 am
Congress, Mangalore: ಸಿದ್ದರಾಮಯ್ಯ ಆಡಳಿತದಲ್ಲೇ ದ...
26-07-25 10:44 am
Dharmasthala Case, SIT Meeting, Anucheth, Jit...
25-07-25 08:25 pm
DIG Anucheth Mangalore, SIT Dharmasthala: ಎಸ್...
25-07-25 06:05 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am