ಬ್ರೇಕಿಂಗ್ ನ್ಯೂಸ್
09-07-23 05:31 pm H K News Desk ಕ್ರೈಂ
ಬೆಳಗಾವಿ, ಜುಲೈ 9: ಜೈನಮುನಿ ಕೊಲೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ವಿಸ್ತೃತ ತನಿಖೆ ನಡೆಸಲಾಗುತ್ತಿದೆ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
ನಾಪತ್ತೆಯಾಗಿದ್ದ ಜೈನ ಮುನಿಗಳ ಮೃತದೇಹವನ್ನು ರಾಯಭಾಗ ತಾಲೂಕಿನ ಖಟಕಬಾವಿ ಗ್ರಾಮದ ತೋಟದಲ್ಲಿ ತುಂಡು ತುಂಡು ಮಾಡಿ ಹಾಳು ಕೊಳವೆಬಾವಿಗೆ ಹಾಕಿದ್ದನ್ನು ಪತ್ತೆ ಮಾಡಲಾಗಿತ್ತು. ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಇವರ ಜೊತೆಗೆ ಬೇರೆಯವರ ಕೈವಾಡ ಇದೆಯಾ ಅನ್ನುವ ಬಗ್ಗೆ ತನಿಖೆ ನಡೆಸಲಾಗುವುದು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ ಎಂದು ಎಸ್ಪಿ ಸಂಜೀವ ಪಾಟೀಲ್ ತಿಳಿಸಿದ್ದಾರೆ.
ನಿನ್ನೆ ಮಧ್ಯಾಹ್ನ ಮುನಿಗಳ ಕೊಲೆ ವಿಚಾರ ತಿಳಿಯುತ್ತಲೇ ತೀವ್ರ ಮಳೆಯ ನಡುವೆಯೂ ಸುಮಾರು 20 ಅಡಿ ಆಳದ ವರೆಗೆ ಕೊಳವೆ ಬಾವಿ ಗುಂಡಿಯನ್ನು ಅಗೆದು ಸ್ವಾಮೀಜಿ ಮೃತದೇಹದ ತುಣುಕುಗಳನ್ನು ಪೊಲೀಸರು ಹೊರ ತೆಗೆದಿದ್ದಾರೆ. ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಶವವನ್ನು ಒಂಬತ್ತು ತುಂಡುಗಳಾಗಿ ಕತ್ತರಿಸಿ ಬಟ್ಟೆಯಲ್ಲಿ ಕಟ್ಟಿ ಕೊಳವೆ ಬಾವಿಗೆ ಸುರಿಯಲಾಗಿತ್ತು. ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮುನಿಗಳ ಮೃತದೇಹವನ್ನು ಆಶ್ರಮಕ್ಕೆ ಬಿಟ್ಟುಕೊಡಲಾಗಿತ್ತು.
ಕಳೆದ ಬುಧವಾರ ಹಿರೇಕೊಡಿಯ ನಂದಿಪರ್ವತದ ಜೈನ ಆಶ್ರಮದಲ್ಲಿ ವಾಸವಿದ್ದ ಕಾಮಕುಮಾರ ನಂದಿ ಮಹಾರಾಜರನ್ನು ಆರೋಪಿ, ಆಶ್ರಮದ ಕೆಲಸಗಾರ ನಾರಾಯಣ ಮಾಳಿ ಎಂಬಾತ ಕರೆಂಟ್ ಶಾಕ್ ಕೊಟ್ಟು ಸಾಯಿಸಿದ್ದ. ನಂತರ ಮೃತದೇಹವನ್ನು ಎಲ್ಲಿ ಎಸೆಯುವುದು ಎಂಬ ಪ್ರಶ್ನೆ ಮೂಡಿದಾಗ ಪ್ರಕರಣದ ಎರಡನೇ ಆರೋಪಿ ಹಸನ್ ಡಲಾಯತ್ ಎಂಬಾತನ ಸಹಾಯ ಕೇಳಿದ್ದಾನೆ ಎಂದು ತಿಳಿದುಬಂದಿದೆ.
ಪೊಲೀಸರು ಕೇವಲ ನಾಲ್ಕು ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದ್ವಂದ್ವ ಹೇಳಿಕೆ ನೀಡುತ್ತಿದ್ದ ಸ್ವಾಮೀಜಿ ಆಪ್ತ ನಾರಾಯಣ ಮಾಳಿ ಎಂಬಾತನನ್ನು ವಿಚಾರಣೆ ನಡೆಸಿದ್ದಾಗ ಸನ್ಯಾಸಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದ. ಘಟನೆ ತಿಳಿಯುತ್ತಿದ್ದಂತೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ್ ಪಾಟೀಲ್ ಮುನಿಗಳ ಮೃತದೇಹ ಪತ್ತೆ ಹಚ್ಚುವವರೆಗೂ ಮಂದೆ ನಿಂತು ಪರಿಸ್ಥಿತಿ ನಿಭಾಯಿಸಿದರು.
ಸೌಮ್ಯ ಸ್ವಭಾವದ ಕಾಮಕುಮಾರ ನಂದಿ ಮಹಾರಾಜರು ಪೂರ್ವಾಶ್ರಮ ಅಥಣಿ ತಾಲೂಕಿನ ಖವಟಕೊಪ್ಪ ಗ್ರಾಮದಲ್ಲಿ ಜನಿಸಿದ್ದರು. ಸಣ್ಣ ವಯಸ್ಸಿನಲ್ಲೇ ಆಧ್ಯಾತ್ಮದತ್ತ ಹೆಚ್ಚಿನ ಒಲವು ಹೊಂದಿದ್ದರು. ಜೈನ ಸಂಪ್ರದಾಯದ ಪೂಜ್ಯರ ಜೊತೆ ಒಡನಾಟ ಗಳಿಸಿದ್ದು ಆನಂತರ ಸನ್ಯಾಸ ದೀಕ್ಷೆ ಪಡೆದು ಧರ್ಮದ ಕೆಲಸ ಮುಂದುವರಿಸಿದ್ದರು. ಚಿಕ್ಕೋಡಿ ತಾಲೂಕಿನ ಹಿರೇಕೊಡಿಯ ನಂದಿ ಪರ್ವತ ಜೈನ ಆಶ್ರಮದ ಪೂಜ್ಯರಾಗಿ ತಮ್ಮ ದಿನ ಕಳೆಯುತ್ತಿದ್ದರು. ಕೆಲವು ದಿನಗಳ ಹಿಂದೆಯಷ್ಟೇ ಪಂಚಕಲ್ಯಾಣ ಮಹೋತ್ಸವ ನೆರವೇರಿಸಿದ್ದ ಇವರು ಆ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಆಶ್ರಮಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದಿದ್ದರು
The search for the missing Jain monk in Belagavi district ended on Saturday with the shocking revelation of his murder and recovery of his body parts from an open defunct borewell in a field at Katakabavi in Raibag taluk of the district.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
25-09-25 09:58 am
Mangalore Correspondent
Mangaluru City Corporation: ಮಂಗಳೂರು ಮಹಾನಗರ ಪಾ...
24-09-25 10:48 pm
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am