ಬ್ರೇಕಿಂಗ್ ನ್ಯೂಸ್
06-08-20 03:54 am Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 6: ಬಾಲಿವುಡ್ ಅಂಗಳದಲ್ಲಿ ಬಿರುಗಾಳಿ ಎಬ್ಬಿಸಿರುವ ನಟ ಸುಶಾಂತ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಕೇಂದ್ರ ಸರಕಾರ ಸಿಬಿಐಗೆ ವಹಿಸಿದೆ.
ಸಿಬಿಐಗೆ ಒಪ್ಪಿಸುವಂತೆ ಬಿಹಾರ ರಾಜ್ಯ ಸರಕಾರ ಕೇಂದ್ರಕ್ಕೆ ಮನವಿ ಮಾಡಿತ್ತು. ಇದೇ ವೇಳೆ, ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರ ತನಿಖೆಯ ಬಗ್ಗೆ ಅಸಮಾಧಾನಗೊಂಡಿದ್ದ ಸುಶಾಂತ್ ಕುಟುಂಬಸ್ಥರು ಸುಪ್ರೀಂ ಕೋರ್ಟಿಗೂ ಅರ್ಜಿ ಸಲ್ಲಿಸಿದ್ದರು. ಈ ಕುರಿತ ವಿಚಾರಣೆ ಸಂದರ್ಭದಲ್ಲಿ ಕೇಂದ್ರ ಸರಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಾಗಿ ಹೇಳಿಕೆ ನೀಡಿದೆ.
ಈಗಾಗ್ಲೇ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ಸುಶಾಂತ್ ಸಂಬಂಧಿಸಿ 56 ಮಂದಿಯ ಹೇಳಿಕೆ ದಾಖಲಿಸಿದ್ದಾರೆ. ಅಲ್ಲದೆ, ಅತ್ತ ಬಿಹಾರ ಪೊಲೀಸರು ಕೂಡ ಮುಂಬೈಗೆ ಬಂದು ತನಿಖೆ ನಡೆಸುತ್ತಿದ್ದಾರೆ. ಆದರೆ ಬಿಹಾರ ಪೊಲೀಸರಿಗೆ ಮಹಾರಾಷ್ಟ್ರ ಸರಕಾರ ಮತ್ತು ಅಲ್ಲಿನ ಪೊಲೀಸರು ಸಹಕಾರ ನೀಡದೆ ಸತಾಯಿಸುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದವು. ಇದೇ ವೇಳೆ, ಪ್ರಕರಣದಲ್ಲಿ ಸುಶಾಂತ್ ಖಾತೆಯಲ್ಲಿದ್ದ 15 ಕೋಟಿ ಹಣ ವರ್ಗಾವಣೆ ಆಗಿರುವ ವಿಚಾರದಲ್ಲಿ ಆತನ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ದಾಖಲಾಗಿರುವ ಕೇಸಿಗೆ ಸಂಬಂಧಿಸಿ ಇಡಿ ವಿಚಾರಣೆ ಆರಂಭಿಸಿದ್ದು ರಿಯಾಗೆ ಸಮನ್ಸ್ ನೀಡಿದೆ. ಆಗಸ್ಟ್ 7 ರಂದು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ. ಬಿಹಾರ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿರುವ ರಿಯಾ ಈಗ ಇಡಿ ಅಧಿಕಾರಿಗಳ ಬಲೆಗೆ ಸಿಲುಕಲಿದ್ದಾರೆ.
23-05-26 11:37 pm
HK News Desk
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ...
22-05-26 09:30 pm
ಬಿಜೆಪಿಗಿಂತ ಹೆಚ್ಚು ಜನ ಕಾಕ್ರೋಚ್ ಪಾರ್ಟಿ ಬೆಂಬಲಿಸಿ...
22-05-26 06:01 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
22-05-26 09:47 pm
HK News Staffer
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
23-05-26 11:54 am
HK News Staffer
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am
ಹಣದ ವಿಚಾರದಲ್ಲಿ ತಕರಾರು ; ಸ್ನೇಹಿತನ ಮನೆಯನ್ನೇ ದೋಚ...
22-05-26 09:25 pm
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm
ಮಾನಸಿಕ ಖಿನ್ನತೆ ; ಮನೆಯ ಬಾಲ್ಕನಿಯಲ್ಲೇ ತಲೆಗೆ ಶೂಟ್...
22-05-26 07:18 pm